AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ತನಗೆ ತುಂಡು ತುಂಡಾಗಿ ಕತ್ತರಿಸುವ ಬೆದರಿಕೆ ಹಾಕಿದ್ದಾನೆ” ಎಂದು 2020ರಲ್ಲೇ ಅಫ್ತಾಬ್ ವಿರುದ್ಧ ದೂರು ನೀಡಿದ್ದ ಶ್ರದ್ಧಾ

ಅವನು ನನ್ನನ್ನು ತುಂಡು ತುಂಡಾಗಿ ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಅಫ್ತಾಬ್ ವಿರುದ್ಧ ಶ್ರದ್ಧಾ ವಾಕರ್( Shraddha Walker) 2020ರಲ್ಲೇ ಪೊಲೀಸರಿಗೆ ದೂರು ನೀಡಿದ್ದ ಕುರಿತು ಮಾಹಿತಿ ಲಭ್ಯವಾಗಿದೆ.

ತನಗೆ ತುಂಡು ತುಂಡಾಗಿ ಕತ್ತರಿಸುವ ಬೆದರಿಕೆ ಹಾಕಿದ್ದಾನೆ ಎಂದು 2020ರಲ್ಲೇ ಅಫ್ತಾಬ್ ವಿರುದ್ಧ ದೂರು ನೀಡಿದ್ದ ಶ್ರದ್ಧಾ
Shraddha Walker
Follow us
TV9 Web
| Updated By: ನಯನಾ ರಾಜೀವ್

Updated on:Nov 23, 2022 | 12:14 PM

ಅವನು ನನ್ನನ್ನು ತುಂಡು ತುಂಡಾಗಿ ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಅಫ್ತಾಬ್ ವಿರುದ್ಧ ಶ್ರದ್ಧಾ ವಾಕರ್( Shraddha Walker) 2020ರಲ್ಲೇ ಪೊಲೀಸರಿಗೆ ದೂರು ನೀಡಿದ್ದ ಕುರಿತು ಮಾಹಿತಿ ಲಭ್ಯವಾಗಿದೆ. ಶ್ರದ್ಧಾ ಪ್ರಿಯಕರ ಅಫ್ತಾಬ್ ಪೂನಾವಾಲಾ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿ ಆಕೆಯನ್ನು 31 ತುಂಡುಗಳಾಗಿ ಕತ್ತರಿಸಿ ನಗರದ ವಿವಿಧೆಡೆ ಎಸೆದು ಬಂದಿದ್ದ.

ಇದೀಗ ಆತ ಪೊಲೀಸ್ ಕಸ್ಟಡಿಯಲ್ಲಿದ್ದಾನೆ, ಎರಡು ವರ್ಷಗಳ ಹಿಂದೆ ಮಹಾರಾಷ್ಟ್ರ ಪೊಲೀಸರಿಗೆ ಆಕೆ ದೂರು ನೀಡಿರುವ ಪ್ರತಿ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಅವರಿಬ್ಬರು ಇದ್ದ ಫ್ಲಾಟ್​ನಲ್ಲಿ ಆಕೆಯನ್ನು ಥಳಿಸಿದ್ದ, ಹಿಂಸಿಸಿದ್ದ ಜತೆಗೆ ಆಕೆಯನ್ನು ತುಂಡು ತುಂಡಾಗಿ ಕತ್ತರಿಸುವುದಾಗಿಯೂ ಬೆದರಿಕೆ ಹಾಕಿದ್ದ. ಆ ನಡವಳಿಕೆಯು ಆತನ ಕುಟುಂಬಕ್ಕೂ ತಿಳಿದಿದೆ ಎಂದು ದೂರಿನಲ್ಲಿ ತಿಳಿಸಿದ್ದಳು.

ಪೊಲೀಸರು ಈಗ ಈ ದೂರನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಪೊಲೀಸರು ಯಾವುದೇ ಕ್ರಮ ಕೈಗೊಂಡಿದ್ದರಾ ಎಂಬುದರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಫ್ತಾಬ್ ಅವರ ಪೋಷಕರು ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ.

ನನ್ನನ್ನು ಉಸಿರುಗಟ್ಟಿಸಿ ಕೊಲ್ಲಲು ಪ್ರಯತ್ನಿಸಿದ್ದ, ಅವನು ನನ್ನನ್ನು ಕೊಂದು ತುಂಡು ತುಂಡಾಗಿ ಕತ್ತರಿಸಿ ಎಸೆಯುತ್ತೇನೆ ಎಂದು ಬ್ಲ್ಯಾಕ್​ಮೇಲೆ ಮಾಡುತ್ತಿದ್ದಾನೆ 6 ತಿಂಗಳಿಂದ ನನಗೆ ಹಿಂಸೆ ನೀಡುತ್ತಿದ್ದಾನೆ, ನನಗೆ ಧೈರ್ಯವಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

2020ರಲ್ಲಿ ನೀಡಿದ್ದ ದೂರಿನ ಅನ್ವಯ ಆಗಲೇ ಆತ ಆಕೆಗೆ ಹಿಂಸೆ ನೀಡುತ್ತಾ 6 ತಿಂಗಳು ಕಳೆದಿತ್ತು. ಕಾಲ್ ಸೆಂಟರ್ ಉದ್ಯೋಗಿಗಳಾಗಿದ್ದ ಇಬ್ಬರೂ ಮೇ ತಿಂಗಳಲ್ಲಿ ದೆಹಲಿಗೆ ತೆರಳಿದ್ದರು.

ಶ್ರದ್ಧಾ ಅವರ ಪೋಷಕರು ಅಂತರ-ಧರ್ಮೀಯ (ಹಿಂದೂ-ಮುಸ್ಲಿಂ) ಸಂಬಂಧವನ್ನು ಒಪ್ಪದ ಕಾರಣ ಆಕೆಯೊಂದಿಗೆ ಸಂಪರ್ಕದಲ್ಲಿ ಇರಲಿಲ್ಲ. ಮೇ ತಿಂಗಳಲ್ಲಿ ದೆಹಲಿಯ ಮೆಹ್ರೌಲಿಯಲ್ಲಿರುವ ಫ್ಲಾಟ್‌ಗೆ ಸ್ಥಳಾಂತರಗೊಂಡ ಕೆಲವು ದಿನಗಳ ನಂತರ ನಡೆದ ಈ ಭೀಕರ ಹತ್ಯೆಯು ಕಳೆದ ಒಂದು ತಿಂಗಳ ಹಿಂದೆ ಬೆಳಕಿಗೆ ಬಂದಿದ್ದು, ಆಕೆಯ ತಂದೆ ಪೊಲೀಸರ ಬಳಿಗೆ ಹೋದ ನಂತರ ಆಕೆಯ ಸ್ನೇಹಿತರು ಆಕೆಯನ್ನು ಸಂಪರ್ಕಿಸಿಲ್ಲ ಎಂದು ಹೇಳಿದ್ದರು.

ಅವನು ನನ್ನನ್ನು ಹೊಡೆಯುತ್ತಾನೆ, ಹಲವು ಬಾರಿ ಕೊಲ್ಲಲ್ಲೂ ಪ್ರಯತ್ನಿಸಿದ್ದಾನೆ, ನಾವು ಒಟ್ಟಿಗೆ ಇರುವುದು ಎಲ್ಲದೂ ಅವನ ಪೋಷಕರಿಗೆ ಗೊತ್ತಿದೆ, ಅವರು ವಾರಕ್ಕೊಮ್ಮೆ ಮನೆಗೆ ಭೇಟಿ ನೀಡುತ್ತಿದ್ದರು ಎಂದು ಪತ್ರದಲ್ಲಿ ಬರೆದಿದ್ದಾರೆ.

ಅವರು ಎಷ್ಟು ಕಾಲ ಬೇರೆಯಾಗಿ ವಾಸಿಸುತ್ತಿದ್ದರು ಎಂಬುದು ಸ್ಪಷ್ಟವಾಗಿಲ್ಲ, ಆದರೆ ದೆಹಲಿಗೆ ತೆರಳುವ ಮೊದಲು ಅವರು ಈ ವರ್ಷದ ಆರಂಭದಲ್ಲಿ ಹಿಮಾಚಲ ಪ್ರದೇಶಕ್ಕೆ ರಜೆಯಲ್ಲಿ ಒಟ್ಟಿಗೆ ಹೋಗಿದ್ದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:11 pm, Wed, 23 November 22

ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್