AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Walker Murder Case: ಶಿಕ್ಷಿತ ಹೆಣ್ಣು ಮಕ್ಕಳು ಈ ಘಟನೆಯಿಂದ ಪಾಠ ಕಲಿಯಬೇಕಿದೆ: ಕೇಂದ್ರ ಸಚಿವ ಕೌಶಲ್

ಲಿವ್-ಇನ್ ಸಂಬಂಧಗಳು ಅಪರಾಧವನ್ನು ಉತ್ತೇಜಿಸುತ್ತಿವೆ ಎಂದು ಕೇಂದ್ರ ಸಚಿವ ಕೌಶಲ್ ಕಿಶೋರ್ ಹೇಳಿದ್ದಾರೆ

Shraddha Walker Murder Case: ಶಿಕ್ಷಿತ ಹೆಣ್ಣು ಮಕ್ಕಳು ಈ ಘಟನೆಯಿಂದ ಪಾಠ ಕಲಿಯಬೇಕಿದೆ: ಕೇಂದ್ರ ಸಚಿವ ಕೌಶಲ್
Shraddha Walker
Follow us
TV9 Web
| Updated By: ನಯನಾ ರಾಜೀವ್

Updated on: Nov 18, 2022 | 6:18 AM

ಲಿವ್-ಇನ್ ಸಂಬಂಧಗಳು ಅಪರಾಧವನ್ನು ಉತ್ತೇಜಿಸುತ್ತಿವೆ ಎಂದು ಕೇಂದ್ರ ಸಚಿವ ಕೌಶಲ್ ಕಿಶೋರ್ ಹೇಳಿದ್ದಾರೆ. ದೆಹಲಿಯ ಮೆಹ್ರೌಲಿಯಲ್ಲಿ ನಡೆದ ಶ್ರದ್ಧಾ ವಾಕರ್ (Shraddha Walker) ಹತ್ಯೆ ಕುರಿತಂತೆ ಮಾತನಾಡಿರುವ ಅವರು, ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿದ ಕಿಶೋರ್, ವಿದ್ಯಾವಂತ ಹುಡುಗಿಯರು ಲಿವ್-ಇನ್ ಸಂಬಂಧಗಳಿಗಾಗಿ ತಮ್ಮ ಹೆತ್ತವರನ್ನು ಬಿಟ್ಟು ಹೋಗುತ್ತಾರೆ ಮತ್ತು ಇದು ಅಪರಾಧಗಳ ಹೆಚ್ಚಳಕ್ಕೆ ಕಾರಣವಾಗುತ್ತದೆ ಎಂದು ಹೇಳಿದರು.

ಬದಲಿಗೆ ನ್ಯಾಯಾಲಯದಲ್ಲಿ ಮದುವೆಯಾಗಬೇಕು ಎಂದು ಸಲಹೆ ನೀಡಿದರು. ತಮ್ಮನ್ನು ವರ್ಷಗಟ್ಟಲೆ ಬೆಳೆಸಿದ ಹೆತ್ತವರನ್ನು ಬಿಟ್ಟು ಹೋಗದೆ ತಮ್ಮ ಜವಾಬ್ದಾರಿಯನ್ನು ಅರಿತು ನಡೆಯಬೇಕು ಎಂದು ಹೇಳಿದರು.

ಪೋಷಕರು ಸಾರ್ವಜನಿಕವಾಗಿ ಅಂತಹ ಸಂಬಂಧಗಳಿಗೆ ಸಿದ್ಧವಾಗಿಲ್ಲದಿದ್ದರೆ, ನೀವು ನ್ಯಾಯಾಲಯದಲ್ಲಿ ಮದುವೆಯಾಗಬೇಕು ಮತ್ತು ನಂತರ ಒಟ್ಟಿಗೆ ವಾಸಿಸಬೇಕು.

ಲಿವ್-ಇನ್ ಸಂಬಂಧಗಳು ಅಪರಾಧಕ್ಕೆ ಕಾರಣವಾಗುತ್ತವೆ ಎಂದು ಹೇಳಿರುವ ಅವರು ಶಿಕ್ಷಣ ಪಡೆದಿರುವ ಮತ್ತು ತುಂಬಾ ಪ್ರಾಮಾಣಿಕರಾಗಿರುವ ಮತ್ತು ತಮ್ಮ ಭವಿಷ್ಯದ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ಹುಡುಗಿಯರೊಂದಿಗೆ ಈ ಘಟನೆಗಳು ನಡೆಯುತ್ತಿವೆ ಎಂದು ಹೇಳಿದರು.

ಏನಿದು ಶ್ರದ್ಧಾವಾಕರ್ ಪ್ರಕರಣ? ಮೇ 18 ರಂದು ದೆಹಲಿಯ ಮೆಹ್ರೋಲಿಯಲ್ಲಿ ಶ್ರದ್ಧಾ ವಾಕರ್ (26) ಅನ್ನು ಆಕೆಯ ಗೆಳೆಯ ಅಫ್ತಾಬ್ ಹತ್ಯೆ ಮಾಡಿದ್ದ, ಹತ್ಯೆಯ ಬಳಿಕ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಕಾಡಿನಲ್ಲಿ ಎಸೆದಿದ್ದ, ಶ್ರದ್ಧಾ ತಂದೆ ನಾಪತ್ತೆ ದೂರು ದಾಖಲಿಸಿದ ಬಳಿಕ ಕಳೆದ ಶನಿವಾರ ಪ್ರಕರಣ ಬೆಳಕಿಗೆ ಬಂದಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ