AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubhanshu Shukla: ಬಾಹ್ಯಾಕಾಶದಿಂದ ಭೂಮಿಗೆ ಮರಳಿರುವ ಶುಭಾಂಶು ಶುಕ್ಲಾ ಭಾರತಕ್ಕೆ ಬರೋದು ಯಾವಾಗ?

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 18 ದಿನಗಳ ಕಾಲ ಇದ್ದು, ಇದೀಗ ಭೂಮಿಗೆ ಮರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ(Shubhanshu Shukla) ಆಗಸ್ಟ್​ 17ರ ವೇಳೆಗೆ ಭಾರತಕ್ಕೆ ಬರಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಾರ್ಯಾಚರಣೆಯ ನಂತರದ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ, ಶುಭಾಂಶು ಮುಂದಿನ ತಿಂಗಳು ಆಗಸ್ಟ್ 17 ರೊಳಗೆ ಭಾರತಕ್ಕೆ ಮರಳಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಹೇಳಿದ್ದಾರೆ.

Shubhanshu Shukla: ಬಾಹ್ಯಾಕಾಶದಿಂದ ಭೂಮಿಗೆ ಮರಳಿರುವ ಶುಭಾಂಶು ಶುಕ್ಲಾ ಭಾರತಕ್ಕೆ ಬರೋದು ಯಾವಾಗ?
ಶುಭಾಂಶು ಶುಕ್ಲಾImage Credit source: India Today
ನಯನಾ ರಾಜೀವ್
|

Updated on: Jul 16, 2025 | 10:55 AM

Share

ನವದೆಹಲಿ, ಜುಲೈ 16: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 18 ದಿನಗಳ ಕಾಲ ಇದ್ದು, ಇದೀಗ ಭೂಮಿಗೆ ಮರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ(Shubhanshu Shukla) ಆಗಸ್ಟ್​ 17 ವೇಳೆಗೆ ಭಾರತಕ್ಕೆ ಬರಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಾರ್ಯಾಚರಣೆಯ ನಂತರದ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ, ಶುಭಾಂಶು ಮುಂದಿನ ತಿಂಗಳು ಆಗಸ್ಟ್ 17 ರೊಳಗೆ ಭಾರತಕ್ಕೆ ಮರಳಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಹೇಳಿದ್ದಾರೆ.

ಶುಭಾಂಶು ಅವರ ಈ ಸಾಧನೆಯೊಂದಿಗೆ, ಭಾರತದ ಮಾನವಸಹಿತ ಬಾಹ್ಯಾಕಾಶ ಹಾರಾಟ ಗಗನಯಾನ ಕಾರ್ಯಾಚರಣೆಯ ಮಹತ್ವಾಕಾಂಕ್ಷೆಗಳನ್ನು ಸಾಕಾರಗೊಳಿಸಲು ಸಿದ್ಧತೆಗಳು ಪ್ರಾರಂಭವಾಗಿವೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹೋದ ಎರಡನೇ ಭಾರತೀಯ ಗಗನಯಾತ್ರಿ ಶುಭಾಂಶು.

ಅವರಿಗಿಂತ ಮೊದಲು, ರಾಕೇಶ್ ಶರ್ಮಾ 1984 ರಲ್ಲಿ ಸೋವಿಯತ್ ರಷ್ಯಾದ ಕಾರ್ಯಾಚರಣೆಯ ಅಡಿಯಲ್ಲಿ ಬಾಹ್ಯಾಕಾಶಕ್ಕೆ ಹೋಗಿದ್ದರು. ಶುಭಾಂಶು ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮತ್ತು ಭೂಮಿಯ ಕಕ್ಷೆಯಲ್ಲಿ ಹೆಚ್ಚು ಕಾಲ (20 ದಿನಗಳು) ಉಳಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಇತಿಹಾಸ ನಿರ್ಮಿಸಿದ್ದರು. 40 ವರ್ಷಗಳ ನಂತರ ಹಂಗೇರಿ ಮತ್ತು ಪೋಲೆಂಡ್‌ನ ಗಗನಯಾತ್ರಿಗಳನ್ನು ಸಹ ಬಾಹ್ಯಾಕಾಶಕ್ಕೆ ಕಳುಹಿಸಲಾಯಿತು.

ಶುಭಾಂಶು ಮತ್ತು ಆಕ್ಸಿಯಮ್-4 ಮಿಷನ್‌ನ ಇತರ ಮೂವರು ಗಗನಯಾತ್ರಿಗಳು ಭಾರತೀಯ ಕಾಲಮಾನ ಮಧ್ಯಾಹ್ನ 3.01 ಕ್ಕೆ ಪೆಸಿಫಿಕ್ ಮಹಾಸಾಗರದ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕರಾವಳಿಯಲ್ಲಿ ಇಳಿದ್ದರು. ಆಕ್ಸಿಯಮ್ -4 ರ ಸಿಬ್ಬಂದಿಯನ್ನು ಹೆಲಿಕಾಪ್ಟರ್ ಮೂಲಕ ದಡಕ್ಕೆ ಕರೆದೊಯ್ಯುವ ಮೊದಲು, ಹಡಗಿನಲ್ಲಿ ಹಲವಾರು ವೈದ್ಯಕೀಯ ತಪಾಸಣೆಗಳನ್ನು ನಡೆಸಲಾಯಿತು. ಭೂಮಿಯ ಮೇಲಿನ ಪುನರ್ವಸತಿಯ ಭಾಗವಾಗಿ ನಾಲ್ವರು ಗಗನಯಾತ್ರಿಗಳು ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು ಏಳು ದಿನಗಳ ಕಾಲ ಪ್ರತ್ಯೇಕವಾಗಿರಬೇಕಾಗುತ್ತದೆ.

ಮತ್ತಷ್ಟು ಓದಿ:  Axiom-4: ಬಾಹ್ಯಾಕಾಶದಿಂದ ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ಶುಭಾಂಶು ಶುಕ್ಲಾ, ಖುಷಿ ಕ್ಷಣವನ್ನು ಕಣ್ತುಂಬಿಕೊಂಡ ಪೋಷಕರು

ಆಕ್ಸಿಯಮ್ -4 ಮಿಷನ್ ಅಡಿಯಲ್ಲಿ, ಸ್ಪೇಸ್‌ಎಕ್ಸ್ ಕಂಪನಿಯ ಡ್ರ್ಯಾಗನ್ ಗ್ರೇಸ್ ಬಾಹ್ಯಾಕಾಶ ನೌಕೆ ಜೂನ್ 25 ರಂದು ಫ್ಲೋರಿಡಾದಿಂದ ಹೊರಟು 28 ಗಂಟೆಗಳ ಪ್ರಯಾಣದ ನಂತರ ಜೂನ್ 26 ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿತ್ತು.

ಈ ಆಕ್ಸಿಯಮ್ -4 ಬಾಹ್ಯಾಕಾಶ ಕಾರ್ಯಾಚರಣೆಗಾಗಿ ಭಾರತವು 550 ಕೋಟಿ ರೂ.ಗಳನ್ನು ಹೂಡಿಕೆ ಮಾಡಿತ್ತು. ಈ ಕಾರ್ಯಾಚರಣೆಯಿಂದ ಪಡೆದ ಅನುಭವವು ಮಾನವ ಬಾಹ್ಯಾಕಾಶ ಹಾರಾಟದ ಕನಸನ್ನು ನನಸಾಗಿಸಲು ಸಹಾಯ ಮಾಡುತ್ತದೆ. ಇಸ್ರೋ 2027 ರಲ್ಲಿ ಗಗನ್ಯಾನ್ ಮಿಷನ್ ಅನ್ನು ಪ್ರಾರಂಭಿಸಲಿದೆ.  ಇದು ಟೆಕ್ಸಾಸ್ ಮೂಲದ ಸ್ಟಾರ್ಟ್ಅಪ್ ಆಕ್ಸಿಯಮ್ ಸ್ಪೇಸ್‌ನ ನಾಲ್ಕನೇ ISS ಮಿಷನ್ ಆಗಿದ್ದು, ಇದು

ಲಾಸ್ ಏಂಜಲೀಸ್ ಬಳಿ ಪ್ರಧಾನ ಕಚೇರಿಯನ್ನು ಹೊಂದಿರುವ ಎಲೋನ್ ಮಸ್ಕ್ ಅವರ ಖಾಸಗಿ ರಾಕೆಟ್ ಉದ್ಯಮವಾದ ಸ್ಪೇಸ್‌ಎಕ್ಸ್ ಸಹಯೋಗದೊಂದಿಗೆ ನಡೆಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ