AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುರೋಪ್​ನಿಂದ ಡಾರ್ಜಿಲಿಂಗ್​ಗೆ ಬಂದ ಸೈಬೀರಿಯನ್ ಹುಲಿಗಳು

ಇನ್ಮುಂದೆ ಡಾರ್ಜಿಲಿಂಗ್​ನಲ್ಲಿರುವ ಪದ್ಮಜಾ ನಾಯ್ಡು ಹಿಮಾಲಯನ್ ಝೂಲಾಜಿಕಲ್ ಪಾರ್ಕ್‌ನಲ್ಲಿ ಸೈಬೀರಿಯನ್​ ಹುಲಿಗಳು ಕಾಣಸಿಗಲಿವೆ. ಯುರೋಪ್​ನಿಂದ ಒಂದು ಗಂಡು ಹಾಗೂ ಒಂದು ಹೆಣ್ಣು ಹುಲಿ ಡಾರ್ಜಿಲಿಂಗ್​ಗೆ ಬಂದಿವೆ. ಲಾರಾ ಮತ್ತು ಅಕಾಮಾಗಳ ಮೇಲೆ ವಿಶೇಷ ನಿಗಾ ಇರಿಸಲಾಗಿದೆ ಎಂದು ತಿಳಿದು ಬಂದಿದೆ.

ಯುರೋಪ್​ನಿಂದ ಡಾರ್ಜಿಲಿಂಗ್​ಗೆ ಬಂದ ಸೈಬೀರಿಯನ್ ಹುಲಿಗಳು
ಹುಲಿಗಳು
ನಯನಾ ರಾಜೀವ್
|

Updated on: Dec 12, 2023 | 9:03 AM

Share

ಇನ್ಮುಂದೆ ಡಾರ್ಜಿಲಿಂಗ್​ನಲ್ಲಿರುವ ಪದ್ಮಜಾ ನಾಯ್ಡು ಹಿಮಾಲಯನ್ ಝೂಲಾಜಿಕಲ್ ಪಾರ್ಕ್‌ನಲ್ಲಿ ಸೈಬೀರಿಯನ್​ ಹುಲಿಗಳು(Tigers) ಕಾಣಸಿಗಲಿವೆ. ಯುರೋಪ್​ನಿಂದ ಒಂದು ಗಂಡು ಹಾಗೂ ಒಂದು ಹೆಣ್ಣು ಹುಲಿ ಡಾರ್ಜಿಲಿಂಗ್​ಗೆ ಬಂದಿವೆ. ಲಾರಾ ಮತ್ತು ಅಕಾಮಾಗಳ ಮೇಲೆ ವಿಶೇಷ ನಿಗಾ ಇರಿಸಲಾಗಿದೆ ಎಂದು ತಿಳಿದು ಬಂದಿದೆ.

ಅವುಗಳಿಗಾಗಿ ಎಂಟು ಪಶುವೈದ್ಯರು ಮತ್ತು ತಜ್ಞರ ತಂಡವನ್ನು ರಚಿಸಲಾಗಿದೆ. ಪ್ರಸ್ತುತ ಅವುಗಳನ್ನು ಮೃಗಾಲಯದ ರಾತ್ರಿ ಆಶ್ರಯದಲ್ಲಿ ಇರಿಸಲಾಗಿದೆ. ಮುಂದಿನ ಒಂದು ತಿಂಗಳ ಕಾಲ ಅವರು ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ. ಇಬ್ಬರಿಗೂ ವಿಶೇಷ ಆಹಾರ ಪದ್ಧತಿ ಇದೆ. ವಿಟಮಿನ್ಸ್ ಮುಂದುವರಿಯುತ್ತದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಜನವರಿ 1 ರಂದು ಪ್ರವಾಸಿಗರ ಕಣ್ಣಿಗೆ ಬೀಳಲಿವೆ. ಸೈಬೀರಿಯನ್ ಹುಲಿ ಬದಲು ಎರಡು ಕೆಂಪು ಪಾಂಡಾಗಳನ್ನು ಯುರೋಪ್ ಮೃಗಾಲಯಕ್ಕೆ ಕಳುಹಿಸಲಾಗಿದೆ. ಡಾರ್ಜಿಲಿಂಗ್ ಮೃಗಾಲಯದ ನಿರ್ದೇಶಕ ಬಸ್ಬ್ರಾಜ್ ಹೊಲೆಯಾಚಿ ಮಾತನಾಡಿ, ಲಾರಾ ಮತ್ತು ಅಕಾಮಾಸ್ ವಿಶೇಷ ವಿಮಾನದ ಮೂಲಕ ಶನಿವಾರ ಕೋಲ್ಕತ್ತಾ ತಲುಪಿವೆ. ಅಲ್ಲಿಂದ ಹವಾನಿಯಂತ್ರಿತ ಆಂಬುಲೆನ್ಸ್‌ನಲ್ಲಿ ಮೃಗಾಲಯಕ್ಕೆ ಕರೆತರಲಾಯಿತು ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: Cheetah Death: ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವು, ನಾಲ್ಕು ತಿಂಗಳಲ್ಲಿ 8ನೇ ಘಟನೆ

ಮತ್ತೊಂದೆಡೆ, ಎರಡು ಸಿಂಹ ಡಿಸೆಂಬರ್‌ನಲ್ಲಿ ಬೆಂಗಾಲ್ ಸಫಾರಿ ಪಾರ್ಕ್‌ಗೆ ಬರಬೇಕಾಗಿತ್ತು, ಆದರೆ ಕಾರ್ಯವಿಧಾನದ ಕಾರಣಗಳಿಂದ ಅದು ಒಂದು ತಿಂಗಳು ವಿಳಂಬವಾಗಿದೆ. ಜನವರಿ ತಿಂಗಳಿನಲ್ಲಿ ಸಿಂಹದ ಜೋಡಿ ಬೆಂಗಾಲ್ ಸಫಾರಿ ಪಾರ್ಕ್‌ಗೆ ಆಗಮಿಸಲಿದೆ ಎಂದು ತಿಳಿದುಬಂದಿದೆ.

ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಚೀತಾಗಳನ್ನು ಕರೆತರಲಾಗಿತ್ತು ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಚೀತಾಗಳನ್ನು ಬಿಡುಗಡೆ ಮಾಡಿದ್ದರು. ದಕ್ಷಿಣ ಆಫ್ರಿಕಾ ಹಾಗೂ ನಮೀಬಿಯಾದಿಂದ ಒಟ್ಟು 20 ಚೀತಾಗಳನ್ನು ಕರೆತರಲಾಗಿತ್ತು, ಅದರ ಪೈಕಿ ಈಗ 14 ಚೀತಾಗಳು ಮಾತ್ರ ಬದುಕುಳಿದಿವೆ. ಈ ಮಾರ್ಚ್​ನಿಂದ ಇಲ್ಲಿಯವರೆಗೆ 9 ಚೀತಾಗಳು ರಾಷ್ಟ್ರೀಯ ಉದ್ಯಾನದಲ್ಲಿ ಸಾವನ್ನಪ್ಪಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​