AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುರೋಪ್​ನಿಂದ ಡಾರ್ಜಿಲಿಂಗ್​ಗೆ ಬಂದ ಸೈಬೀರಿಯನ್ ಹುಲಿಗಳು

ಇನ್ಮುಂದೆ ಡಾರ್ಜಿಲಿಂಗ್​ನಲ್ಲಿರುವ ಪದ್ಮಜಾ ನಾಯ್ಡು ಹಿಮಾಲಯನ್ ಝೂಲಾಜಿಕಲ್ ಪಾರ್ಕ್‌ನಲ್ಲಿ ಸೈಬೀರಿಯನ್​ ಹುಲಿಗಳು ಕಾಣಸಿಗಲಿವೆ. ಯುರೋಪ್​ನಿಂದ ಒಂದು ಗಂಡು ಹಾಗೂ ಒಂದು ಹೆಣ್ಣು ಹುಲಿ ಡಾರ್ಜಿಲಿಂಗ್​ಗೆ ಬಂದಿವೆ. ಲಾರಾ ಮತ್ತು ಅಕಾಮಾಗಳ ಮೇಲೆ ವಿಶೇಷ ನಿಗಾ ಇರಿಸಲಾಗಿದೆ ಎಂದು ತಿಳಿದು ಬಂದಿದೆ.

ಯುರೋಪ್​ನಿಂದ ಡಾರ್ಜಿಲಿಂಗ್​ಗೆ ಬಂದ ಸೈಬೀರಿಯನ್ ಹುಲಿಗಳು
ಹುಲಿಗಳು
ನಯನಾ ರಾಜೀವ್
|

Updated on: Dec 12, 2023 | 9:03 AM

Share

ಇನ್ಮುಂದೆ ಡಾರ್ಜಿಲಿಂಗ್​ನಲ್ಲಿರುವ ಪದ್ಮಜಾ ನಾಯ್ಡು ಹಿಮಾಲಯನ್ ಝೂಲಾಜಿಕಲ್ ಪಾರ್ಕ್‌ನಲ್ಲಿ ಸೈಬೀರಿಯನ್​ ಹುಲಿಗಳು(Tigers) ಕಾಣಸಿಗಲಿವೆ. ಯುರೋಪ್​ನಿಂದ ಒಂದು ಗಂಡು ಹಾಗೂ ಒಂದು ಹೆಣ್ಣು ಹುಲಿ ಡಾರ್ಜಿಲಿಂಗ್​ಗೆ ಬಂದಿವೆ. ಲಾರಾ ಮತ್ತು ಅಕಾಮಾಗಳ ಮೇಲೆ ವಿಶೇಷ ನಿಗಾ ಇರಿಸಲಾಗಿದೆ ಎಂದು ತಿಳಿದು ಬಂದಿದೆ.

ಅವುಗಳಿಗಾಗಿ ಎಂಟು ಪಶುವೈದ್ಯರು ಮತ್ತು ತಜ್ಞರ ತಂಡವನ್ನು ರಚಿಸಲಾಗಿದೆ. ಪ್ರಸ್ತುತ ಅವುಗಳನ್ನು ಮೃಗಾಲಯದ ರಾತ್ರಿ ಆಶ್ರಯದಲ್ಲಿ ಇರಿಸಲಾಗಿದೆ. ಮುಂದಿನ ಒಂದು ತಿಂಗಳ ಕಾಲ ಅವರು ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ. ಇಬ್ಬರಿಗೂ ವಿಶೇಷ ಆಹಾರ ಪದ್ಧತಿ ಇದೆ. ವಿಟಮಿನ್ಸ್ ಮುಂದುವರಿಯುತ್ತದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಜನವರಿ 1 ರಂದು ಪ್ರವಾಸಿಗರ ಕಣ್ಣಿಗೆ ಬೀಳಲಿವೆ. ಸೈಬೀರಿಯನ್ ಹುಲಿ ಬದಲು ಎರಡು ಕೆಂಪು ಪಾಂಡಾಗಳನ್ನು ಯುರೋಪ್ ಮೃಗಾಲಯಕ್ಕೆ ಕಳುಹಿಸಲಾಗಿದೆ. ಡಾರ್ಜಿಲಿಂಗ್ ಮೃಗಾಲಯದ ನಿರ್ದೇಶಕ ಬಸ್ಬ್ರಾಜ್ ಹೊಲೆಯಾಚಿ ಮಾತನಾಡಿ, ಲಾರಾ ಮತ್ತು ಅಕಾಮಾಸ್ ವಿಶೇಷ ವಿಮಾನದ ಮೂಲಕ ಶನಿವಾರ ಕೋಲ್ಕತ್ತಾ ತಲುಪಿವೆ. ಅಲ್ಲಿಂದ ಹವಾನಿಯಂತ್ರಿತ ಆಂಬುಲೆನ್ಸ್‌ನಲ್ಲಿ ಮೃಗಾಲಯಕ್ಕೆ ಕರೆತರಲಾಯಿತು ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: Cheetah Death: ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವು, ನಾಲ್ಕು ತಿಂಗಳಲ್ಲಿ 8ನೇ ಘಟನೆ

ಮತ್ತೊಂದೆಡೆ, ಎರಡು ಸಿಂಹ ಡಿಸೆಂಬರ್‌ನಲ್ಲಿ ಬೆಂಗಾಲ್ ಸಫಾರಿ ಪಾರ್ಕ್‌ಗೆ ಬರಬೇಕಾಗಿತ್ತು, ಆದರೆ ಕಾರ್ಯವಿಧಾನದ ಕಾರಣಗಳಿಂದ ಅದು ಒಂದು ತಿಂಗಳು ವಿಳಂಬವಾಗಿದೆ. ಜನವರಿ ತಿಂಗಳಿನಲ್ಲಿ ಸಿಂಹದ ಜೋಡಿ ಬೆಂಗಾಲ್ ಸಫಾರಿ ಪಾರ್ಕ್‌ಗೆ ಆಗಮಿಸಲಿದೆ ಎಂದು ತಿಳಿದುಬಂದಿದೆ.

ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಚೀತಾಗಳನ್ನು ಕರೆತರಲಾಗಿತ್ತು ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಚೀತಾಗಳನ್ನು ಬಿಡುಗಡೆ ಮಾಡಿದ್ದರು. ದಕ್ಷಿಣ ಆಫ್ರಿಕಾ ಹಾಗೂ ನಮೀಬಿಯಾದಿಂದ ಒಟ್ಟು 20 ಚೀತಾಗಳನ್ನು ಕರೆತರಲಾಗಿತ್ತು, ಅದರ ಪೈಕಿ ಈಗ 14 ಚೀತಾಗಳು ಮಾತ್ರ ಬದುಕುಳಿದಿವೆ. ಈ ಮಾರ್ಚ್​ನಿಂದ ಇಲ್ಲಿಯವರೆಗೆ 9 ಚೀತಾಗಳು ರಾಷ್ಟ್ರೀಯ ಉದ್ಯಾನದಲ್ಲಿ ಸಾವನ್ನಪ್ಪಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ