AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಗಾಯಕ ಸಿಧು ಮೂಸೆವಾಲಾ ಕೊಲೆ ತನಿಖೆ ಚುರುಕು: 60 ಸ್ಥಳಗಳಲ್ಲಿ ಎನ್​ಐಎ ಏಕಕಾಲಕ್ಕೆ ದಾಳಿ

ಮುಖ ಆರೋಪಿಗಳಾದ ಲಾರೆನ್ಸ್​ ಬಿಷ್ಣೋಯ್, ಗೋಲ್ಡೀ ಬ್ರಾರ್ ಅವರಿಗೆ ಸೇರಿದ ಹಲವು ಸ್ಥಳಗಳ ಮೇಲೆ ಸೋಮವಾರ ಮುಂಜಾನೆ ದಾಳಿ ನಡೆಸಿದೆ.

Breaking News: ಗಾಯಕ ಸಿಧು ಮೂಸೆವಾಲಾ ಕೊಲೆ ತನಿಖೆ ಚುರುಕು: 60 ಸ್ಥಳಗಳಲ್ಲಿ ಎನ್​ಐಎ ಏಕಕಾಲಕ್ಕೆ ದಾಳಿ
ಸಿಧು ಮೂಸೆವಾಲಾ
TV9 Web
| Edited By: |

Updated on:Sep 12, 2022 | 9:07 AM

Share

ದೆಹಲಿ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ದಳ (National Investigation Agency – NIA) ಪ್ರಮುಖ ಆರೋಪಿಗಳಾದ ಲಾರೆನ್ಸ್​ ಬಿಷ್ಣೋಯ್, ಗೋಲ್ಡೀ ಬ್ರಾರ್ ಅವರಿಗೆ ಸೇರಿದ ಹಲವು ಸ್ಥಳಗಳ ಮೇಲೆ ಸೋಮವಾರ ಮುಂಜಾನೆ ದಾಳಿ ನಡೆಸಿದೆ. ಸಿಧು ಮೂಸೆ ವಾಲಾ ಕೊಲೆಯಲ್ಲಿ ಭೂಗತ ಲೋಕದ ಈ ದುಷ್ಕರ್ಮಿಗಳು ವಹಿಸಿದ್ದ ಪಾತ್ರದ ಬಗ್ಗೆ ಎನ್​ಐಎ ಮಾಹಿತಿ ಕಲೆ ಹಾಕುತ್ತಿದೆ. ದೆಹಲಿ, ರಾಷ್ಟ್ರ ರಾಜಧಾನಿ ಪ್ರದೇಶ (ಎನ್​ಸಿಆರ್) ಮತ್ತು ಹರಿಯಾಣದ ವಿವಿಧ ಸ್ಥಳಗಳಲ್ಲಿ ಎನ್​ಐಎ ಸಿಬ್ಬಂದಿ ಶೋಧ ಆರಂಬಿಸಿದ್ದಾರೆ.

ಪಂಜಾಬ್ ಚುನಾವಣೆಗೂ ಮುನ್ನ ಕಾಂಗ್ರೆಸ್ (Congress) ಸೇರಿದ್ದ ಜನಪ್ರಿಯ ಪಂಜಾಬಿ ಗಾಯಕ ಮತ್ತು ರಾಪರ್ ಸಿಧು ಮೂಸೆ ವಾಲಾ (Sidhu Moose Wala) ಅವರನ್ನು ಕಳೆದ ಮೇ ತಿಂಗಳಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮೂಸೆ ವಾಲಾ ಅವರು ಮಾನ್ಸಾದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆಮ್​ ಆದ್ಮಿ ಪಾರ್ಟಿಯ ಡಾ.ವಿಜಯ್ ಸಿಂಗ್ಲಾ ವಿರುದ್ಧ 63,323 ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಸಿಧು ಮೂಸೆ ವಾಲಾ ಸೇರಿದಂತೆ 424 ಜನರ ಭದ್ರತೆಯನ್ನು ಪಂಜಾಬ್ ಸರ್ಕಾರ ವಾಪಸ್ ಪಡೆದ ಬೆನ್ನಲ್ಲೇ ಸಿಧು ಮೂಸೆವಾಲಾ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು.

ಮೂಸೆವಾಲಾ ಕೊಲೆಯ ಹೊಣೆಯನ್ನು ಹಲವಾರು ಮಂದಿ ಸಾಮಾಜಿಕ ಮಾಧ್ಯಮಗಳಲ್ಲಿ ಹೊತ್ತುಕೊಂಡಿದ್ದಾರೆ. ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್ ಪರವಾಗಿ ತಾನೇ ಈ ಕೊಲೆ ಮಾಡಿದ್ದಾಗಿ ಗೋಲ್ಡಿ ಬ್ರಾರ್ ಎನ್ನುವಾತ ಹೇಳಿಕೊಂಡಿದ್ದ. ಮೂಸೆವಾಲಾರ ಮೃತ ದೇಹದಲ್ಲಿ 25 ಗುಂಡುಗಳು ನುಗ್ಗಿದ್ದ ಗಾಯದ ಗುರುತುಗಳಿದ್ದವು. ಈ ಘಟನೆ ಪಂಜಾಬ್​ನಲ್ಲಿ ವ್ಯಾಪಕ ಆಕ್ರೋಶ ಹುಟ್ಟುಹಾಕಿತ್ತು.

Published On - 9:07 am, Mon, 12 September 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!