Sign In

By signing in or creating an account, you agree with Associated Broadcasting Company's Terms & Conditions and Privacy Policy.

Sidhu Moosewala: 2022ರಲ್ಲಿ ಹತ್ಯೆಯಾಗಿದ್ದ ಗಾಯಕ ಸಿಧು ಮೂಸೆವಾಲಾ ತಾಯಿ ಈಗ ಗರ್ಭಿಣಿ

2022ರಲ್ಲಿ ಹತ್ಯೆಯಾಗಿದ್ದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ತಾಯಿ ಮತ್ತೆ ಗರ್ಭಿಣಿಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 58 ವರ್ಷದ ಚರಣ್ ಕೌರ್ ಗರ್ಭಿಣಿಯಾಗಿದ್ದಾರೆ.

Sidhu Moosewala: 2022ರಲ್ಲಿ ಹತ್ಯೆಯಾಗಿದ್ದ ಗಾಯಕ ಸಿಧು ಮೂಸೆವಾಲಾ ತಾಯಿ ಈಗ ಗರ್ಭಿಣಿ
ಸಿಧು ಮೂಸೆವಾಲಾImage Credit source: ABP Live
Follow us
ನಯನಾ ರಾಜೀವ್
|

Updated on:Feb 27, 2024 | 2:52 PM

ಮಗನನ್ನು ಕಳೆದುಕೊಂಡು ಶೋಕಸಾಗರದಲ್ಲಿ ಮುಳುಗಿದ್ದ ಪಂಜಾಬಿ ಗಾಯಕ ಸಿಧು ಮೂಸೆವಾಲಾ(Sidhu Moosewala) ಮನೆಯವರ ಮುಖದಲ್ಲಿ ಮಂದಹಾಸ ಮೂಡಿದೆ. ಸಿಧು ಮೂಸೆವಾಲಾ ತಾಯಿ 58 ವರ್ಷದ ಚರಣ್ ಕೌರ್ ಗರ್ಭಿಣಿಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಚರಣ್ ಕೌರ್ ಶೀಘ್ರದಲ್ಲೇ ಮಗುವಿಗೆ ಜನ್ಮ ನೀಡಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬಲ್ಕೌರ್ ಸಿಂಗ್ 60ನೇ ವಯಸ್ಸಿನಲ್ಲಿ ಮತ್ತೆ ತಂದೆಯಾಗಲಿದ್ದಾರೆ. ಸಿಧು ಮೂಸೆವಾಲಾ ಅವರ ತಂದೆ ತಾಯಿಗೆ ಒಬ್ಬನೇ ಮಗನಾಗಿದ್ದರು.

ಈ ಬಗ್ಗೆ ಸಿಧು ಮೂಸೆವಾಲ ಪೋಷಕರಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಆದರೆ, ಚರಣ್ ಕೌರ್ ಸುಮಾರು ಆರು ತಿಂಗಳ ಕಾಲ ಸಾರ್ವಜನಿಕ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಕೌರ್ ಐವಿಎಫ್​ ಮೂಲಕ ಮಗು ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಮೂಸೆವಾಲಾ ಅವರ ತಂದೆ ಬಲ್ಕೌರ್ ಸಿಂಗ್ ಅವರು ಬಟಿಂಡಾ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಕೂಡ ಕೇಳಿಬರುತ್ತಿವೆ.

ಮತ್ತಷ್ಟು ಓದಿ: ಸಿಧು ಮೂಸೆ ವಾಲಾ ಹತ್ಯೆ ಪ್ರಕರಣ: ಗ್ಯಾಂಗ್​ಸ್ಟರ್​ಗೆ ಶಸ್ತ್ರಾಸ್ತ್ರ ಪೂರೈಸಿದ್ದ ವ್ಯಕ್ತಿಯ ಬಂಧನ

2022ರ ಮೇ 29ರಂದು ಸಿದ್ದು ಮೂಸೆವಾಲಾ ಕೊಲೆಯಾಗಿದ್ದರು ಪಂಜಾಬಿ ಗಾಯಕ ಸಿಧು ಮೂಸೆವಾಲಾ ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿದ್ದಾರೆ. ಅವರು 2022 ರಲ್ಲಿ ಕಾಂಗ್ರೆಸ್ ಪರವಾಗಿ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಆದರೆ ಅವರು ಸೋಲು ಕಂಡಿದ್ದರು. ನಂತರ ಈ ವರ್ಷ 29 ಮೇ 2022 ರಂದು ಸಿದ್ದು ಮೂಸೆವಾಲಾ ಅವರನ್ನು ಕೊಲೆ ಮಾಡಲಾಯಿತು. ಕೊಲೆಯ ಹೊಣೆಯನ್ನು ಸ್ವತಃ ಗೋಲ್ಡಿ ಬ್ರಾರ್ ವಹಿಸಿಕೊಂಡರು. ಕೊಲೆ ಪ್ರಕರಣದಲ್ಲಿ 31 ಜನರನ್ನು ಆರೋಪಿಗಳನ್ನಾಗಿ ಮಾಡಲಾಗಿದ್ದು, ಈ ಪೈಕಿ 25 ಆರೋಪಿಗಳನ್ನು ಇದುವರೆಗೆ ಬಂಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:52 pm, Tue, 27 February 24

ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್