AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ ಒಳಗೆ 30 ಕೋಟಿ ಕೊವಿಡ್​ ಲಸಿಕೆ​ ರೆಡಿ, ಬೆಲೆ ಎಷ್ಟು ಇರುತ್ತೆ ಗೊತ್ತಾ?

ದಾರಿಗೆ ಅಡ್ಡಬಂದವರನ್ನ ಬಲಿ ಪಡೆಯುತ್ತಿರುವ ಕೊರೊನಾ ಮಹಾಮಾರಿಯ ಎದುರು ಜಗತ್ತೇ ಮಂಡಿ ಊರುವಂಥ ಸ್ಥಿತಿ ಬಂದಿದೆ. ಈ ಮಧ್ಯೆ ಹೆಮ್ಮಾರಿಯನ್ನ ಹತ್ತಿಕ್ಕಲು ಹಲವಾರು ದೇಶಗಳು ತಕ್ಕ ಔಷಧದ ಹುಡುಕಾಟದಲ್ಲಿ ತೊಡಗಿದೆ. ಅದರಲ್ಲಿ ಇಂಗ್ಲೆಂಡ್​ ಸಹ ಒಂದು. ಇದೀಗ ಇಂಗ್ಲೆಂಡ್​ನ ಆಕ್ಸ್​ಫರ್ಡ್​ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾ ಜೆನೆಕಾ (Astra Zeneca) ಸಹ ಭಾಗಿತ್ವದಲ್ಲಿ ತಯಾರಾಗಿರುವ ಕೊವಿಡ್​ ಲಸಿಕೆ ಮಾನವ ಪ್ರಾಯೋಗಿಕ ಹಂತದಲ್ಲಿ ಉತ್ತಮ ಫಲಿತಾಂಶವನ್ನ ನೀಡುತ್ತಿದೆ. ಹಾಗಾಗಿ, ವಿಶ್ವದಾದ್ಯಂತ ಜನರಲ್ಲಿ ಕೊಂಚ ಭರವಸೆ ಮೂಡಿದೆ. ಇದೀಗ ಭಾರತದ ಪ್ರಖ್ಯಾತ […]

ಡಿಸೆಂಬರ್ ಒಳಗೆ 30 ಕೋಟಿ ಕೊವಿಡ್​ ಲಸಿಕೆ​ ರೆಡಿ, ಬೆಲೆ ಎಷ್ಟು ಇರುತ್ತೆ ಗೊತ್ತಾ?
KUSHAL V
| Edited By: |

Updated on:Jul 22, 2020 | 4:57 PM

Share

ದಾರಿಗೆ ಅಡ್ಡಬಂದವರನ್ನ ಬಲಿ ಪಡೆಯುತ್ತಿರುವ ಕೊರೊನಾ ಮಹಾಮಾರಿಯ ಎದುರು ಜಗತ್ತೇ ಮಂಡಿ ಊರುವಂಥ ಸ್ಥಿತಿ ಬಂದಿದೆ. ಈ ಮಧ್ಯೆ ಹೆಮ್ಮಾರಿಯನ್ನ ಹತ್ತಿಕ್ಕಲು ಹಲವಾರು ದೇಶಗಳು ತಕ್ಕ ಔಷಧದ ಹುಡುಕಾಟದಲ್ಲಿ ತೊಡಗಿದೆ. ಅದರಲ್ಲಿ ಇಂಗ್ಲೆಂಡ್​ ಸಹ ಒಂದು.

ಇದೀಗ ಇಂಗ್ಲೆಂಡ್​ನ ಆಕ್ಸ್​ಫರ್ಡ್​ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾ ಜೆನೆಕಾ (Astra Zeneca) ಸಹ ಭಾಗಿತ್ವದಲ್ಲಿ ತಯಾರಾಗಿರುವ ಕೊವಿಡ್​ ಲಸಿಕೆ ಮಾನವ ಪ್ರಾಯೋಗಿಕ ಹಂತದಲ್ಲಿ ಉತ್ತಮ ಫಲಿತಾಂಶವನ್ನ ನೀಡುತ್ತಿದೆ. ಹಾಗಾಗಿ, ವಿಶ್ವದಾದ್ಯಂತ ಜನರಲ್ಲಿ ಕೊಂಚ ಭರವಸೆ ಮೂಡಿದೆ. ಇದೀಗ ಭಾರತದ ಪ್ರಖ್ಯಾತ ಲಸಿಕೆ ತಯಾರಿಕಾ ಕಂಪನಿಯಾದ ಸೀರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾದ (Serum Institute of India) ಮುಖ್ಯಸ್ಥ ಅದಾರ್​ ಪೂನಾವಾಲಾ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ.

‘ಪ್ರತಿ ಲಸಿಕೆಯ ಬೆಲೆ 1 ಸಾವಿರ ರೂಪಾಯಿ’ ಹೌದು, ಅದಾರ್​ ಪೂನಾವಾಲಾ ಡಿಸೆಂಬರ್ ಒಳಗೆ ಆಕ್ಸ್​ಫರ್ಡ್​ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ ವ್ಯಾಕ್ಸಿನ್​ನ ಕನಿಷ್ಠ 30 ಕೋಟಿ ಲಸಿಕೆಗಳನ್ನು ತಯಾರಿಸುವುದಾಗಿ ಮಾಹಿತಿ ನೀಡಿದ್ದಾರೆ. ಕೋವಿಶೀಲ್ಡ್ (Covishield) ಎಂಬ ಹೆಸರಿನಲ್ಲಿ ಈ ಲಸಿಕೆ ತಯಾರಾಗಲಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ಭಾರತದಲ್ಲಿ ಪ್ರತಿ ಲಸಿಕೆಯು 1,000 ರೂಪಾಯಿ ದರದಲ್ಲಿ ಲಭ್ಯವಾಗಲಿದೆ ಎಂಬ ಮಾಹಿತಿ ಸಹ ನೀಡಿದ್ದಾರೆ.

ಈ ಆಕ್ಸ್​ಫರ್ಡ್ ಲಸಿಕೆ ಎಲ್ಲಾ ಮಾನವ ಪ್ರಯೋಗಿಕ ಹಂತದಲ್ಲಿ ಪೂರ್ಣಪ್ರಮಾಣವಾಗಿ ಯಶಸ್ಸನ್ನು ಕಂಡ ಕೂಡಲೇ ಅದನ್ನು ತಯಾರಿಸಲು ಸೀರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾವನ್ನ ಆಸ್ಟ್ರಾ ಜೆನೆಕಾ ಆಯ್ಕೆ ಮಾಡಿದೆ. ಜೊತೆಗೆ, ಕೇಂದ್ರ ಸರ್ಕಾರಕ್ಕೆ ದೇಶದಲ್ಲಿ ಇದರ ಮಾನವ ಪ್ರಯೋಗಕ್ಕೆ ಅನುಮತಿ ಪಡೆದು ಭಾರತದಲ್ಲೂ ಇದರ ಟ್ರಯಲ್​ ಆರಂಭಿಸುತ್ತೇವೆ ಎಂದು ಅದಾರ್​ ಪೂನಾವಾಲಾ ತಿಳಿಸಿದ್ದಾರೆ.

Published On - 5:13 pm, Tue, 21 July 20

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!