AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ ಒಳಗೆ 30 ಕೋಟಿ ಕೊವಿಡ್​ ಲಸಿಕೆ​ ರೆಡಿ, ಬೆಲೆ ಎಷ್ಟು ಇರುತ್ತೆ ಗೊತ್ತಾ?

ದಾರಿಗೆ ಅಡ್ಡಬಂದವರನ್ನ ಬಲಿ ಪಡೆಯುತ್ತಿರುವ ಕೊರೊನಾ ಮಹಾಮಾರಿಯ ಎದುರು ಜಗತ್ತೇ ಮಂಡಿ ಊರುವಂಥ ಸ್ಥಿತಿ ಬಂದಿದೆ. ಈ ಮಧ್ಯೆ ಹೆಮ್ಮಾರಿಯನ್ನ ಹತ್ತಿಕ್ಕಲು ಹಲವಾರು ದೇಶಗಳು ತಕ್ಕ ಔಷಧದ ಹುಡುಕಾಟದಲ್ಲಿ ತೊಡಗಿದೆ. ಅದರಲ್ಲಿ ಇಂಗ್ಲೆಂಡ್​ ಸಹ ಒಂದು. ಇದೀಗ ಇಂಗ್ಲೆಂಡ್​ನ ಆಕ್ಸ್​ಫರ್ಡ್​ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾ ಜೆನೆಕಾ (Astra Zeneca) ಸಹ ಭಾಗಿತ್ವದಲ್ಲಿ ತಯಾರಾಗಿರುವ ಕೊವಿಡ್​ ಲಸಿಕೆ ಮಾನವ ಪ್ರಾಯೋಗಿಕ ಹಂತದಲ್ಲಿ ಉತ್ತಮ ಫಲಿತಾಂಶವನ್ನ ನೀಡುತ್ತಿದೆ. ಹಾಗಾಗಿ, ವಿಶ್ವದಾದ್ಯಂತ ಜನರಲ್ಲಿ ಕೊಂಚ ಭರವಸೆ ಮೂಡಿದೆ. ಇದೀಗ ಭಾರತದ ಪ್ರಖ್ಯಾತ […]

ಡಿಸೆಂಬರ್ ಒಳಗೆ 30 ಕೋಟಿ ಕೊವಿಡ್​ ಲಸಿಕೆ​ ರೆಡಿ, ಬೆಲೆ ಎಷ್ಟು ಇರುತ್ತೆ ಗೊತ್ತಾ?
KUSHAL V
| Edited By: |

Updated on:Jul 22, 2020 | 4:57 PM

Share

ದಾರಿಗೆ ಅಡ್ಡಬಂದವರನ್ನ ಬಲಿ ಪಡೆಯುತ್ತಿರುವ ಕೊರೊನಾ ಮಹಾಮಾರಿಯ ಎದುರು ಜಗತ್ತೇ ಮಂಡಿ ಊರುವಂಥ ಸ್ಥಿತಿ ಬಂದಿದೆ. ಈ ಮಧ್ಯೆ ಹೆಮ್ಮಾರಿಯನ್ನ ಹತ್ತಿಕ್ಕಲು ಹಲವಾರು ದೇಶಗಳು ತಕ್ಕ ಔಷಧದ ಹುಡುಕಾಟದಲ್ಲಿ ತೊಡಗಿದೆ. ಅದರಲ್ಲಿ ಇಂಗ್ಲೆಂಡ್​ ಸಹ ಒಂದು.

ಇದೀಗ ಇಂಗ್ಲೆಂಡ್​ನ ಆಕ್ಸ್​ಫರ್ಡ್​ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾ ಜೆನೆಕಾ (Astra Zeneca) ಸಹ ಭಾಗಿತ್ವದಲ್ಲಿ ತಯಾರಾಗಿರುವ ಕೊವಿಡ್​ ಲಸಿಕೆ ಮಾನವ ಪ್ರಾಯೋಗಿಕ ಹಂತದಲ್ಲಿ ಉತ್ತಮ ಫಲಿತಾಂಶವನ್ನ ನೀಡುತ್ತಿದೆ. ಹಾಗಾಗಿ, ವಿಶ್ವದಾದ್ಯಂತ ಜನರಲ್ಲಿ ಕೊಂಚ ಭರವಸೆ ಮೂಡಿದೆ. ಇದೀಗ ಭಾರತದ ಪ್ರಖ್ಯಾತ ಲಸಿಕೆ ತಯಾರಿಕಾ ಕಂಪನಿಯಾದ ಸೀರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾದ (Serum Institute of India) ಮುಖ್ಯಸ್ಥ ಅದಾರ್​ ಪೂನಾವಾಲಾ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ.

‘ಪ್ರತಿ ಲಸಿಕೆಯ ಬೆಲೆ 1 ಸಾವಿರ ರೂಪಾಯಿ’ ಹೌದು, ಅದಾರ್​ ಪೂನಾವಾಲಾ ಡಿಸೆಂಬರ್ ಒಳಗೆ ಆಕ್ಸ್​ಫರ್ಡ್​ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ ವ್ಯಾಕ್ಸಿನ್​ನ ಕನಿಷ್ಠ 30 ಕೋಟಿ ಲಸಿಕೆಗಳನ್ನು ತಯಾರಿಸುವುದಾಗಿ ಮಾಹಿತಿ ನೀಡಿದ್ದಾರೆ. ಕೋವಿಶೀಲ್ಡ್ (Covishield) ಎಂಬ ಹೆಸರಿನಲ್ಲಿ ಈ ಲಸಿಕೆ ತಯಾರಾಗಲಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ಭಾರತದಲ್ಲಿ ಪ್ರತಿ ಲಸಿಕೆಯು 1,000 ರೂಪಾಯಿ ದರದಲ್ಲಿ ಲಭ್ಯವಾಗಲಿದೆ ಎಂಬ ಮಾಹಿತಿ ಸಹ ನೀಡಿದ್ದಾರೆ.

ಈ ಆಕ್ಸ್​ಫರ್ಡ್ ಲಸಿಕೆ ಎಲ್ಲಾ ಮಾನವ ಪ್ರಯೋಗಿಕ ಹಂತದಲ್ಲಿ ಪೂರ್ಣಪ್ರಮಾಣವಾಗಿ ಯಶಸ್ಸನ್ನು ಕಂಡ ಕೂಡಲೇ ಅದನ್ನು ತಯಾರಿಸಲು ಸೀರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾವನ್ನ ಆಸ್ಟ್ರಾ ಜೆನೆಕಾ ಆಯ್ಕೆ ಮಾಡಿದೆ. ಜೊತೆಗೆ, ಕೇಂದ್ರ ಸರ್ಕಾರಕ್ಕೆ ದೇಶದಲ್ಲಿ ಇದರ ಮಾನವ ಪ್ರಯೋಗಕ್ಕೆ ಅನುಮತಿ ಪಡೆದು ಭಾರತದಲ್ಲೂ ಇದರ ಟ್ರಯಲ್​ ಆರಂಭಿಸುತ್ತೇವೆ ಎಂದು ಅದಾರ್​ ಪೂನಾವಾಲಾ ತಿಳಿಸಿದ್ದಾರೆ.

Published On - 5:13 pm, Tue, 21 July 20

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ