AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ ಒಳಗೆ 30 ಕೋಟಿ ಕೊವಿಡ್​ ಲಸಿಕೆ​ ರೆಡಿ, ಬೆಲೆ ಎಷ್ಟು ಇರುತ್ತೆ ಗೊತ್ತಾ?

ದಾರಿಗೆ ಅಡ್ಡಬಂದವರನ್ನ ಬಲಿ ಪಡೆಯುತ್ತಿರುವ ಕೊರೊನಾ ಮಹಾಮಾರಿಯ ಎದುರು ಜಗತ್ತೇ ಮಂಡಿ ಊರುವಂಥ ಸ್ಥಿತಿ ಬಂದಿದೆ. ಈ ಮಧ್ಯೆ ಹೆಮ್ಮಾರಿಯನ್ನ ಹತ್ತಿಕ್ಕಲು ಹಲವಾರು ದೇಶಗಳು ತಕ್ಕ ಔಷಧದ ಹುಡುಕಾಟದಲ್ಲಿ ತೊಡಗಿದೆ. ಅದರಲ್ಲಿ ಇಂಗ್ಲೆಂಡ್​ ಸಹ ಒಂದು. ಇದೀಗ ಇಂಗ್ಲೆಂಡ್​ನ ಆಕ್ಸ್​ಫರ್ಡ್​ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾ ಜೆನೆಕಾ (Astra Zeneca) ಸಹ ಭಾಗಿತ್ವದಲ್ಲಿ ತಯಾರಾಗಿರುವ ಕೊವಿಡ್​ ಲಸಿಕೆ ಮಾನವ ಪ್ರಾಯೋಗಿಕ ಹಂತದಲ್ಲಿ ಉತ್ತಮ ಫಲಿತಾಂಶವನ್ನ ನೀಡುತ್ತಿದೆ. ಹಾಗಾಗಿ, ವಿಶ್ವದಾದ್ಯಂತ ಜನರಲ್ಲಿ ಕೊಂಚ ಭರವಸೆ ಮೂಡಿದೆ. ಇದೀಗ ಭಾರತದ ಪ್ರಖ್ಯಾತ […]

ಡಿಸೆಂಬರ್ ಒಳಗೆ 30 ಕೋಟಿ ಕೊವಿಡ್​ ಲಸಿಕೆ​ ರೆಡಿ, ಬೆಲೆ ಎಷ್ಟು ಇರುತ್ತೆ ಗೊತ್ತಾ?
KUSHAL V
| Edited By: |

Updated on:Jul 22, 2020 | 4:57 PM

Share

ದಾರಿಗೆ ಅಡ್ಡಬಂದವರನ್ನ ಬಲಿ ಪಡೆಯುತ್ತಿರುವ ಕೊರೊನಾ ಮಹಾಮಾರಿಯ ಎದುರು ಜಗತ್ತೇ ಮಂಡಿ ಊರುವಂಥ ಸ್ಥಿತಿ ಬಂದಿದೆ. ಈ ಮಧ್ಯೆ ಹೆಮ್ಮಾರಿಯನ್ನ ಹತ್ತಿಕ್ಕಲು ಹಲವಾರು ದೇಶಗಳು ತಕ್ಕ ಔಷಧದ ಹುಡುಕಾಟದಲ್ಲಿ ತೊಡಗಿದೆ. ಅದರಲ್ಲಿ ಇಂಗ್ಲೆಂಡ್​ ಸಹ ಒಂದು.

ಇದೀಗ ಇಂಗ್ಲೆಂಡ್​ನ ಆಕ್ಸ್​ಫರ್ಡ್​ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾ ಜೆನೆಕಾ (Astra Zeneca) ಸಹ ಭಾಗಿತ್ವದಲ್ಲಿ ತಯಾರಾಗಿರುವ ಕೊವಿಡ್​ ಲಸಿಕೆ ಮಾನವ ಪ್ರಾಯೋಗಿಕ ಹಂತದಲ್ಲಿ ಉತ್ತಮ ಫಲಿತಾಂಶವನ್ನ ನೀಡುತ್ತಿದೆ. ಹಾಗಾಗಿ, ವಿಶ್ವದಾದ್ಯಂತ ಜನರಲ್ಲಿ ಕೊಂಚ ಭರವಸೆ ಮೂಡಿದೆ. ಇದೀಗ ಭಾರತದ ಪ್ರಖ್ಯಾತ ಲಸಿಕೆ ತಯಾರಿಕಾ ಕಂಪನಿಯಾದ ಸೀರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾದ (Serum Institute of India) ಮುಖ್ಯಸ್ಥ ಅದಾರ್​ ಪೂನಾವಾಲಾ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ.

‘ಪ್ರತಿ ಲಸಿಕೆಯ ಬೆಲೆ 1 ಸಾವಿರ ರೂಪಾಯಿ’ ಹೌದು, ಅದಾರ್​ ಪೂನಾವಾಲಾ ಡಿಸೆಂಬರ್ ಒಳಗೆ ಆಕ್ಸ್​ಫರ್ಡ್​ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ ವ್ಯಾಕ್ಸಿನ್​ನ ಕನಿಷ್ಠ 30 ಕೋಟಿ ಲಸಿಕೆಗಳನ್ನು ತಯಾರಿಸುವುದಾಗಿ ಮಾಹಿತಿ ನೀಡಿದ್ದಾರೆ. ಕೋವಿಶೀಲ್ಡ್ (Covishield) ಎಂಬ ಹೆಸರಿನಲ್ಲಿ ಈ ಲಸಿಕೆ ತಯಾರಾಗಲಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ಭಾರತದಲ್ಲಿ ಪ್ರತಿ ಲಸಿಕೆಯು 1,000 ರೂಪಾಯಿ ದರದಲ್ಲಿ ಲಭ್ಯವಾಗಲಿದೆ ಎಂಬ ಮಾಹಿತಿ ಸಹ ನೀಡಿದ್ದಾರೆ.

ಈ ಆಕ್ಸ್​ಫರ್ಡ್ ಲಸಿಕೆ ಎಲ್ಲಾ ಮಾನವ ಪ್ರಯೋಗಿಕ ಹಂತದಲ್ಲಿ ಪೂರ್ಣಪ್ರಮಾಣವಾಗಿ ಯಶಸ್ಸನ್ನು ಕಂಡ ಕೂಡಲೇ ಅದನ್ನು ತಯಾರಿಸಲು ಸೀರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾವನ್ನ ಆಸ್ಟ್ರಾ ಜೆನೆಕಾ ಆಯ್ಕೆ ಮಾಡಿದೆ. ಜೊತೆಗೆ, ಕೇಂದ್ರ ಸರ್ಕಾರಕ್ಕೆ ದೇಶದಲ್ಲಿ ಇದರ ಮಾನವ ಪ್ರಯೋಗಕ್ಕೆ ಅನುಮತಿ ಪಡೆದು ಭಾರತದಲ್ಲೂ ಇದರ ಟ್ರಯಲ್​ ಆರಂಭಿಸುತ್ತೇವೆ ಎಂದು ಅದಾರ್​ ಪೂನಾವಾಲಾ ತಿಳಿಸಿದ್ದಾರೆ.

Published On - 5:13 pm, Tue, 21 July 20

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?