AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂದಿರಕ್ಕೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಸಿಖ್​​ ಭಕ್ತರಿಗೆ ಥಳಿಸಿದ ಗುಂಪು; ಐವರನ್ನು ವಶಕ್ಕೆ ಪಡೆದ ಪೊಲೀಸರು

ಧ್ಯಾನಿ ತೋಲಾ ಎಂಬ ಸ್ಥಳವನ್ನು ತಲುಪುತ್ತಿದ್ದಂತೆ ಕೆಲವರು ಬಂದು, ದೇಗುಲ ನಿರ್ಮಾಣಕ್ಕಾಗಿ ಯಜ್ಞ ಮಾಡಬೇಕಾಗಿದೆ. ಹಾಗಾಗಿ ಚಂದಾ ಎತ್ತುತ್ತಿದ್ದೇವೆ. ಹಣ ಕೊಡಿ ಎಂದು ಸಿಖ್​ ಭಕ್ತರ ಬಳಿ ಹೇಳಿದ್ದಾರೆ.

ಮಂದಿರಕ್ಕೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಸಿಖ್​​ ಭಕ್ತರಿಗೆ ಥಳಿಸಿದ ಗುಂಪು; ಐವರನ್ನು ವಶಕ್ಕೆ ಪಡೆದ ಪೊಲೀಸರು
ಟ್ರಕ್​ನಲ್ಲಿ ತೆರಳುತ್ತಿದ್ದ ಸಿಖ್ಖರು
TV9 Web
| Updated By: Lakshmi Hegde|

Updated on:Jan 17, 2022 | 12:14 PM

Share

ಪಾಟ್ನಾ: ದೇಗುಲ ನಿರ್ಮಾಣಕ್ಕೆ ಹಣಕೊಡಲಿಲ್ಲ ಎಂಬ ಕಾರಣಕ್ಕೆ ಸಿಖ್​ ಸಮುದಾಯದ ಆರು ಜನರಿಗೆ, ಗುಂಪೊಂದು ಥಳಿಸಿದ ಘಟನೆ ಬಿಹಾರದ ಭೋಜಪುರದಲ್ಲಿ ನಡೆದಿದೆ. ಸಿಖ್​ ಭಕ್ತರ ಮೇಲೆ ಹಲ್ಲೆ ನಡೆಸಿದ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ನಡೆಸುತ್ತಿದ್ದಾರೆ. ಪಾಟ್ನಾ ಸಾಹೀಬ್​​ (ತಕ್ತ್​ ಶ್ರೀ ಹರಿಮಂದಿರ್​ ಜಿ) ಗುರುದ್ವಾರಕ್ಕೆ ಭೇಟಿ ನೀಡಿದ್ದ ಸುಮಾರು 60 ಮಂದಿ ಸಿಖ್​ ಭಕ್ತರು ಪಂಜಾಬ್​ನ ಮೊಹಾಲಿಗೆ ವಾಪಸ್​ ತೆರಳುತ್ತಿದ್ದರು. ಈ ವೇಳೆ ಅವರ ಮೇಲೆ ಹಲ್ಲೆಯಾಗಿದೆ ಎಂದು ಪಿರೋ ಉಪವಿಭಾಗದ ಪೊಲೀಸ್ ಅಧಿಕಾರಿ ರಾಹುಲ್​ ಸಿಂಗ್​ ತಿಳಿಸಿದ್ದಾರೆ. 

ಇವರೆಲ್ಲ ಟ್ರಕ್​ ಮೇಲೆ ಮೊಹಾಲಿಗೆ ತೆರಳುತ್ತಿದ್ದರು. ಧ್ಯಾನಿ ತೋಲಾ ಎಂಬ ಸ್ಥಳವನ್ನು ತಲುಪುತ್ತಿದ್ದಂತೆ ಕೆಲವರು ಬಂದು, ದೇಗುಲ ನಿರ್ಮಾಣಕ್ಕಾಗಿ ಯಜ್ಞ ಮಾಡಬೇಕಾಗಿದೆ. ಹಾಗಾಗಿ ಚಂದಾ ಎತ್ತುತ್ತಿದ್ದೇವೆ. ಹಣ ಕೊಡಿ ಎಂದು ಸಿಖ್​ ಭಕ್ತರ ಬಳಿ ಹೇಳಿದ್ದಾರೆ. ಅದೂ ಅವರು ಮೊದಲು ಕೇಳಿದ್ದು ಟ್ರಕ್​ ಡ್ರೈವರ್ ಬಳಿ. ಆತ ತಾನು ಕೊಡುವುದಿಲ್ಲ ಎಂದು ಹೇಳುತ್ತಿದ್ದಂತೆ, ಚಂದಾ ಎತ್ತಲು ಬಂದವರು ಅವನ ಮೇಲೆ ಹಲ್ಲೆಗೆ ಮುಂದಾದರು. ಆಗ, ಕೆಲವು ಸಿಖ್​ ಭಕ್ತರು ಚಾಲಕನ ಸಹಾಯಕ್ಕೆ ಬಂದರು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಘಟನೆಯಲ್ಲಿ ಸಿಖ್​ ಸಮುದಾಯದ ಸುಮಾರು 6ಮಂದಿ ಗಾಯಗೊಂಡಿದ್ದಾರೆ. ಅವರನ್ನೆಲ್ಲ ಚಾರ್ಪೋಖ್ರಿ ಸಾರ್ವಜನಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಸದ್ಯ ಅವರೆಲ್ಲ ಚೇತರಿಸಿಕೊಳ್ಳುತ್ತಿದ್ದಾರೆ. ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲು ಮಾಡಿಕೊಂಡು, ತನಿಖೆ ನಡೆಸುತ್ತಿದ್ದೇವೆ. ಐವರನ್ನು ವಶಕ್ಕೆ ಪಡೆದಿದ್ದೇವೆ. ಶೀಘ್ರವೇ ಆರೋಪಿಗಳನ್ನು ಅರೆಸ್ಟ್ ಮಾಡಲಾಗುವುದು ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ಹಾಕಿಸಿಕೊಳ್ಳಲು ವ್ಯಕ್ತಿಯನ್ನು ಒತ್ತಾಯಿಸುವಂತಿಲ್ಲ: ಸುಪ್ರೀಂಕೋರ್ಟ್‌ಗೆ ಕೇಂದ್ರ

Published On - 12:11 pm, Mon, 17 January 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ