AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂದಿರಕ್ಕೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಸಿಖ್​​ ಭಕ್ತರಿಗೆ ಥಳಿಸಿದ ಗುಂಪು; ಐವರನ್ನು ವಶಕ್ಕೆ ಪಡೆದ ಪೊಲೀಸರು

ಧ್ಯಾನಿ ತೋಲಾ ಎಂಬ ಸ್ಥಳವನ್ನು ತಲುಪುತ್ತಿದ್ದಂತೆ ಕೆಲವರು ಬಂದು, ದೇಗುಲ ನಿರ್ಮಾಣಕ್ಕಾಗಿ ಯಜ್ಞ ಮಾಡಬೇಕಾಗಿದೆ. ಹಾಗಾಗಿ ಚಂದಾ ಎತ್ತುತ್ತಿದ್ದೇವೆ. ಹಣ ಕೊಡಿ ಎಂದು ಸಿಖ್​ ಭಕ್ತರ ಬಳಿ ಹೇಳಿದ್ದಾರೆ.

ಮಂದಿರಕ್ಕೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಸಿಖ್​​ ಭಕ್ತರಿಗೆ ಥಳಿಸಿದ ಗುಂಪು; ಐವರನ್ನು ವಶಕ್ಕೆ ಪಡೆದ ಪೊಲೀಸರು
ಟ್ರಕ್​ನಲ್ಲಿ ತೆರಳುತ್ತಿದ್ದ ಸಿಖ್ಖರು
TV9 Web
| Edited By: |

Updated on:Jan 17, 2022 | 12:14 PM

Share

ಪಾಟ್ನಾ: ದೇಗುಲ ನಿರ್ಮಾಣಕ್ಕೆ ಹಣಕೊಡಲಿಲ್ಲ ಎಂಬ ಕಾರಣಕ್ಕೆ ಸಿಖ್​ ಸಮುದಾಯದ ಆರು ಜನರಿಗೆ, ಗುಂಪೊಂದು ಥಳಿಸಿದ ಘಟನೆ ಬಿಹಾರದ ಭೋಜಪುರದಲ್ಲಿ ನಡೆದಿದೆ. ಸಿಖ್​ ಭಕ್ತರ ಮೇಲೆ ಹಲ್ಲೆ ನಡೆಸಿದ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ನಡೆಸುತ್ತಿದ್ದಾರೆ. ಪಾಟ್ನಾ ಸಾಹೀಬ್​​ (ತಕ್ತ್​ ಶ್ರೀ ಹರಿಮಂದಿರ್​ ಜಿ) ಗುರುದ್ವಾರಕ್ಕೆ ಭೇಟಿ ನೀಡಿದ್ದ ಸುಮಾರು 60 ಮಂದಿ ಸಿಖ್​ ಭಕ್ತರು ಪಂಜಾಬ್​ನ ಮೊಹಾಲಿಗೆ ವಾಪಸ್​ ತೆರಳುತ್ತಿದ್ದರು. ಈ ವೇಳೆ ಅವರ ಮೇಲೆ ಹಲ್ಲೆಯಾಗಿದೆ ಎಂದು ಪಿರೋ ಉಪವಿಭಾಗದ ಪೊಲೀಸ್ ಅಧಿಕಾರಿ ರಾಹುಲ್​ ಸಿಂಗ್​ ತಿಳಿಸಿದ್ದಾರೆ. 

ಇವರೆಲ್ಲ ಟ್ರಕ್​ ಮೇಲೆ ಮೊಹಾಲಿಗೆ ತೆರಳುತ್ತಿದ್ದರು. ಧ್ಯಾನಿ ತೋಲಾ ಎಂಬ ಸ್ಥಳವನ್ನು ತಲುಪುತ್ತಿದ್ದಂತೆ ಕೆಲವರು ಬಂದು, ದೇಗುಲ ನಿರ್ಮಾಣಕ್ಕಾಗಿ ಯಜ್ಞ ಮಾಡಬೇಕಾಗಿದೆ. ಹಾಗಾಗಿ ಚಂದಾ ಎತ್ತುತ್ತಿದ್ದೇವೆ. ಹಣ ಕೊಡಿ ಎಂದು ಸಿಖ್​ ಭಕ್ತರ ಬಳಿ ಹೇಳಿದ್ದಾರೆ. ಅದೂ ಅವರು ಮೊದಲು ಕೇಳಿದ್ದು ಟ್ರಕ್​ ಡ್ರೈವರ್ ಬಳಿ. ಆತ ತಾನು ಕೊಡುವುದಿಲ್ಲ ಎಂದು ಹೇಳುತ್ತಿದ್ದಂತೆ, ಚಂದಾ ಎತ್ತಲು ಬಂದವರು ಅವನ ಮೇಲೆ ಹಲ್ಲೆಗೆ ಮುಂದಾದರು. ಆಗ, ಕೆಲವು ಸಿಖ್​ ಭಕ್ತರು ಚಾಲಕನ ಸಹಾಯಕ್ಕೆ ಬಂದರು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಘಟನೆಯಲ್ಲಿ ಸಿಖ್​ ಸಮುದಾಯದ ಸುಮಾರು 6ಮಂದಿ ಗಾಯಗೊಂಡಿದ್ದಾರೆ. ಅವರನ್ನೆಲ್ಲ ಚಾರ್ಪೋಖ್ರಿ ಸಾರ್ವಜನಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಸದ್ಯ ಅವರೆಲ್ಲ ಚೇತರಿಸಿಕೊಳ್ಳುತ್ತಿದ್ದಾರೆ. ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲು ಮಾಡಿಕೊಂಡು, ತನಿಖೆ ನಡೆಸುತ್ತಿದ್ದೇವೆ. ಐವರನ್ನು ವಶಕ್ಕೆ ಪಡೆದಿದ್ದೇವೆ. ಶೀಘ್ರವೇ ಆರೋಪಿಗಳನ್ನು ಅರೆಸ್ಟ್ ಮಾಡಲಾಗುವುದು ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ಹಾಕಿಸಿಕೊಳ್ಳಲು ವ್ಯಕ್ತಿಯನ್ನು ಒತ್ತಾಯಿಸುವಂತಿಲ್ಲ: ಸುಪ್ರೀಂಕೋರ್ಟ್‌ಗೆ ಕೇಂದ್ರ

Published On - 12:11 pm, Mon, 17 January 22

Follow Us
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ