AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂದಿರಕ್ಕೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಸಿಖ್​​ ಭಕ್ತರಿಗೆ ಥಳಿಸಿದ ಗುಂಪು; ಐವರನ್ನು ವಶಕ್ಕೆ ಪಡೆದ ಪೊಲೀಸರು

ಧ್ಯಾನಿ ತೋಲಾ ಎಂಬ ಸ್ಥಳವನ್ನು ತಲುಪುತ್ತಿದ್ದಂತೆ ಕೆಲವರು ಬಂದು, ದೇಗುಲ ನಿರ್ಮಾಣಕ್ಕಾಗಿ ಯಜ್ಞ ಮಾಡಬೇಕಾಗಿದೆ. ಹಾಗಾಗಿ ಚಂದಾ ಎತ್ತುತ್ತಿದ್ದೇವೆ. ಹಣ ಕೊಡಿ ಎಂದು ಸಿಖ್​ ಭಕ್ತರ ಬಳಿ ಹೇಳಿದ್ದಾರೆ.

ಮಂದಿರಕ್ಕೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಸಿಖ್​​ ಭಕ್ತರಿಗೆ ಥಳಿಸಿದ ಗುಂಪು; ಐವರನ್ನು ವಶಕ್ಕೆ ಪಡೆದ ಪೊಲೀಸರು
ಟ್ರಕ್​ನಲ್ಲಿ ತೆರಳುತ್ತಿದ್ದ ಸಿಖ್ಖರು
TV9 Web
| Edited By: |

Updated on:Jan 17, 2022 | 12:14 PM

Share

ಪಾಟ್ನಾ: ದೇಗುಲ ನಿರ್ಮಾಣಕ್ಕೆ ಹಣಕೊಡಲಿಲ್ಲ ಎಂಬ ಕಾರಣಕ್ಕೆ ಸಿಖ್​ ಸಮುದಾಯದ ಆರು ಜನರಿಗೆ, ಗುಂಪೊಂದು ಥಳಿಸಿದ ಘಟನೆ ಬಿಹಾರದ ಭೋಜಪುರದಲ್ಲಿ ನಡೆದಿದೆ. ಸಿಖ್​ ಭಕ್ತರ ಮೇಲೆ ಹಲ್ಲೆ ನಡೆಸಿದ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ನಡೆಸುತ್ತಿದ್ದಾರೆ. ಪಾಟ್ನಾ ಸಾಹೀಬ್​​ (ತಕ್ತ್​ ಶ್ರೀ ಹರಿಮಂದಿರ್​ ಜಿ) ಗುರುದ್ವಾರಕ್ಕೆ ಭೇಟಿ ನೀಡಿದ್ದ ಸುಮಾರು 60 ಮಂದಿ ಸಿಖ್​ ಭಕ್ತರು ಪಂಜಾಬ್​ನ ಮೊಹಾಲಿಗೆ ವಾಪಸ್​ ತೆರಳುತ್ತಿದ್ದರು. ಈ ವೇಳೆ ಅವರ ಮೇಲೆ ಹಲ್ಲೆಯಾಗಿದೆ ಎಂದು ಪಿರೋ ಉಪವಿಭಾಗದ ಪೊಲೀಸ್ ಅಧಿಕಾರಿ ರಾಹುಲ್​ ಸಿಂಗ್​ ತಿಳಿಸಿದ್ದಾರೆ. 

ಇವರೆಲ್ಲ ಟ್ರಕ್​ ಮೇಲೆ ಮೊಹಾಲಿಗೆ ತೆರಳುತ್ತಿದ್ದರು. ಧ್ಯಾನಿ ತೋಲಾ ಎಂಬ ಸ್ಥಳವನ್ನು ತಲುಪುತ್ತಿದ್ದಂತೆ ಕೆಲವರು ಬಂದು, ದೇಗುಲ ನಿರ್ಮಾಣಕ್ಕಾಗಿ ಯಜ್ಞ ಮಾಡಬೇಕಾಗಿದೆ. ಹಾಗಾಗಿ ಚಂದಾ ಎತ್ತುತ್ತಿದ್ದೇವೆ. ಹಣ ಕೊಡಿ ಎಂದು ಸಿಖ್​ ಭಕ್ತರ ಬಳಿ ಹೇಳಿದ್ದಾರೆ. ಅದೂ ಅವರು ಮೊದಲು ಕೇಳಿದ್ದು ಟ್ರಕ್​ ಡ್ರೈವರ್ ಬಳಿ. ಆತ ತಾನು ಕೊಡುವುದಿಲ್ಲ ಎಂದು ಹೇಳುತ್ತಿದ್ದಂತೆ, ಚಂದಾ ಎತ್ತಲು ಬಂದವರು ಅವನ ಮೇಲೆ ಹಲ್ಲೆಗೆ ಮುಂದಾದರು. ಆಗ, ಕೆಲವು ಸಿಖ್​ ಭಕ್ತರು ಚಾಲಕನ ಸಹಾಯಕ್ಕೆ ಬಂದರು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಘಟನೆಯಲ್ಲಿ ಸಿಖ್​ ಸಮುದಾಯದ ಸುಮಾರು 6ಮಂದಿ ಗಾಯಗೊಂಡಿದ್ದಾರೆ. ಅವರನ್ನೆಲ್ಲ ಚಾರ್ಪೋಖ್ರಿ ಸಾರ್ವಜನಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಸದ್ಯ ಅವರೆಲ್ಲ ಚೇತರಿಸಿಕೊಳ್ಳುತ್ತಿದ್ದಾರೆ. ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲು ಮಾಡಿಕೊಂಡು, ತನಿಖೆ ನಡೆಸುತ್ತಿದ್ದೇವೆ. ಐವರನ್ನು ವಶಕ್ಕೆ ಪಡೆದಿದ್ದೇವೆ. ಶೀಘ್ರವೇ ಆರೋಪಿಗಳನ್ನು ಅರೆಸ್ಟ್ ಮಾಡಲಾಗುವುದು ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ಹಾಕಿಸಿಕೊಳ್ಳಲು ವ್ಯಕ್ತಿಯನ್ನು ಒತ್ತಾಯಿಸುವಂತಿಲ್ಲ: ಸುಪ್ರೀಂಕೋರ್ಟ್‌ಗೆ ಕೇಂದ್ರ

Published On - 12:11 pm, Mon, 17 January 22

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್