AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂದಿರಕ್ಕೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಸಿಖ್​​ ಭಕ್ತರಿಗೆ ಥಳಿಸಿದ ಗುಂಪು; ಐವರನ್ನು ವಶಕ್ಕೆ ಪಡೆದ ಪೊಲೀಸರು

ಧ್ಯಾನಿ ತೋಲಾ ಎಂಬ ಸ್ಥಳವನ್ನು ತಲುಪುತ್ತಿದ್ದಂತೆ ಕೆಲವರು ಬಂದು, ದೇಗುಲ ನಿರ್ಮಾಣಕ್ಕಾಗಿ ಯಜ್ಞ ಮಾಡಬೇಕಾಗಿದೆ. ಹಾಗಾಗಿ ಚಂದಾ ಎತ್ತುತ್ತಿದ್ದೇವೆ. ಹಣ ಕೊಡಿ ಎಂದು ಸಿಖ್​ ಭಕ್ತರ ಬಳಿ ಹೇಳಿದ್ದಾರೆ.

ಮಂದಿರಕ್ಕೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಸಿಖ್​​ ಭಕ್ತರಿಗೆ ಥಳಿಸಿದ ಗುಂಪು; ಐವರನ್ನು ವಶಕ್ಕೆ ಪಡೆದ ಪೊಲೀಸರು
ಟ್ರಕ್​ನಲ್ಲಿ ತೆರಳುತ್ತಿದ್ದ ಸಿಖ್ಖರು
TV9 Web
| Edited By: |

Updated on:Jan 17, 2022 | 12:14 PM

Share

ಪಾಟ್ನಾ: ದೇಗುಲ ನಿರ್ಮಾಣಕ್ಕೆ ಹಣಕೊಡಲಿಲ್ಲ ಎಂಬ ಕಾರಣಕ್ಕೆ ಸಿಖ್​ ಸಮುದಾಯದ ಆರು ಜನರಿಗೆ, ಗುಂಪೊಂದು ಥಳಿಸಿದ ಘಟನೆ ಬಿಹಾರದ ಭೋಜಪುರದಲ್ಲಿ ನಡೆದಿದೆ. ಸಿಖ್​ ಭಕ್ತರ ಮೇಲೆ ಹಲ್ಲೆ ನಡೆಸಿದ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ನಡೆಸುತ್ತಿದ್ದಾರೆ. ಪಾಟ್ನಾ ಸಾಹೀಬ್​​ (ತಕ್ತ್​ ಶ್ರೀ ಹರಿಮಂದಿರ್​ ಜಿ) ಗುರುದ್ವಾರಕ್ಕೆ ಭೇಟಿ ನೀಡಿದ್ದ ಸುಮಾರು 60 ಮಂದಿ ಸಿಖ್​ ಭಕ್ತರು ಪಂಜಾಬ್​ನ ಮೊಹಾಲಿಗೆ ವಾಪಸ್​ ತೆರಳುತ್ತಿದ್ದರು. ಈ ವೇಳೆ ಅವರ ಮೇಲೆ ಹಲ್ಲೆಯಾಗಿದೆ ಎಂದು ಪಿರೋ ಉಪವಿಭಾಗದ ಪೊಲೀಸ್ ಅಧಿಕಾರಿ ರಾಹುಲ್​ ಸಿಂಗ್​ ತಿಳಿಸಿದ್ದಾರೆ. 

ಇವರೆಲ್ಲ ಟ್ರಕ್​ ಮೇಲೆ ಮೊಹಾಲಿಗೆ ತೆರಳುತ್ತಿದ್ದರು. ಧ್ಯಾನಿ ತೋಲಾ ಎಂಬ ಸ್ಥಳವನ್ನು ತಲುಪುತ್ತಿದ್ದಂತೆ ಕೆಲವರು ಬಂದು, ದೇಗುಲ ನಿರ್ಮಾಣಕ್ಕಾಗಿ ಯಜ್ಞ ಮಾಡಬೇಕಾಗಿದೆ. ಹಾಗಾಗಿ ಚಂದಾ ಎತ್ತುತ್ತಿದ್ದೇವೆ. ಹಣ ಕೊಡಿ ಎಂದು ಸಿಖ್​ ಭಕ್ತರ ಬಳಿ ಹೇಳಿದ್ದಾರೆ. ಅದೂ ಅವರು ಮೊದಲು ಕೇಳಿದ್ದು ಟ್ರಕ್​ ಡ್ರೈವರ್ ಬಳಿ. ಆತ ತಾನು ಕೊಡುವುದಿಲ್ಲ ಎಂದು ಹೇಳುತ್ತಿದ್ದಂತೆ, ಚಂದಾ ಎತ್ತಲು ಬಂದವರು ಅವನ ಮೇಲೆ ಹಲ್ಲೆಗೆ ಮುಂದಾದರು. ಆಗ, ಕೆಲವು ಸಿಖ್​ ಭಕ್ತರು ಚಾಲಕನ ಸಹಾಯಕ್ಕೆ ಬಂದರು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಘಟನೆಯಲ್ಲಿ ಸಿಖ್​ ಸಮುದಾಯದ ಸುಮಾರು 6ಮಂದಿ ಗಾಯಗೊಂಡಿದ್ದಾರೆ. ಅವರನ್ನೆಲ್ಲ ಚಾರ್ಪೋಖ್ರಿ ಸಾರ್ವಜನಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಸದ್ಯ ಅವರೆಲ್ಲ ಚೇತರಿಸಿಕೊಳ್ಳುತ್ತಿದ್ದಾರೆ. ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲು ಮಾಡಿಕೊಂಡು, ತನಿಖೆ ನಡೆಸುತ್ತಿದ್ದೇವೆ. ಐವರನ್ನು ವಶಕ್ಕೆ ಪಡೆದಿದ್ದೇವೆ. ಶೀಘ್ರವೇ ಆರೋಪಿಗಳನ್ನು ಅರೆಸ್ಟ್ ಮಾಡಲಾಗುವುದು ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ಹಾಕಿಸಿಕೊಳ್ಳಲು ವ್ಯಕ್ತಿಯನ್ನು ಒತ್ತಾಯಿಸುವಂತಿಲ್ಲ: ಸುಪ್ರೀಂಕೋರ್ಟ್‌ಗೆ ಕೇಂದ್ರ

Published On - 12:11 pm, Mon, 17 January 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ