AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಸಾಂಪ್ರದಾಯಿಕ ಉಡುಗೆ ತ್ಯಜಿಸಿ ಕೋಟ್,ಕನ್ನಡಕ ಧರಿಸಿದ ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್

ಸಿಸಿಟಿವಿ ದೃಶ್ಯಾವಳಿಗಳು ಅಮೃತಸರದಿಂದ ಮಾರ್ಚ್ 20 ರಂದು ದಾಖಲಾಗಿವೆ. ಅಮೃತಪಾಲ್ ಅಲ್ಲಿನ ಸಂಬಂಧಿಕರ ಮನೆಯಲ್ಲಿ ಅಡಗಿಕೊಂಡಿದ್ದ ಎಂದು ಹೇಳಲಾಗಿದೆ.

ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಸಾಂಪ್ರದಾಯಿಕ ಉಡುಗೆ ತ್ಯಜಿಸಿ ಕೋಟ್,ಕನ್ನಡಕ ಧರಿಸಿದ ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್
ಅಮೃತಪಾಲ್ ಸಿಂಗ್
ರಶ್ಮಿ ಕಲ್ಲಕಟ್ಟ
|

Updated on: Mar 25, 2023 | 4:05 PM

Share

ದೆಹಲಿ: ಪಂಜಾಬ್ ಪೊಲೀಸರ (Punjab Police) ಬಳಿಯಿಂದ ಪರಾರಿಯಾಗಿರುವ ತೀವ್ರಗಾಮಿ ಸಿಖ್ ಬೋಧಕ ಅಮೃತಪಾಲ್ ಸಿಂಗ್(Amritpal Singh) ತಪ್ಪಿಸಿಕೊಳ್ಳುವಾಗ ಜಾಕೆಟ್ ಮತ್ತು ಪ್ಯಾಂಟ್ ಧರಿಸಿದ್ದರು. ಸಾಮಾನ್ಯವಾಗಿ ಸಾಂಪ್ರದಾಯಿಕ ಧಾರ್ಮಿಕ ಉಡುಪಿನಲ್ಲಿ ಕಂಡುಬರುವ ಸಿಂಗ್ ಕಪ್ಪು ಕನ್ನಡಕವನ್ನು ಕೂಡಾ ಧರಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.ಸಿಸಿಟಿವಿ ದೃಶ್ಯಾವಳಿಗಳು ಅಮೃತಸರದಿಂದ ಮಾರ್ಚ್ 20 ರಂದು ದಾಖಲಾಗಿವೆ. ಅಮೃತಪಾಲ್ ಅಲ್ಲಿನ ಸಂಬಂಧಿಕರ ಮನೆಯಲ್ಲಿ ಅಡಗಿಕೊಂಡಿದ್ದ ಎಂದು ಹೇಳಲಾಗಿದೆ. ಈತ ಅಮೃತಸರದಿಂದ ಹರ್ಯಾಣದ ಕುರುಕ್ಷೇತ್ರಕ್ಕೆ ತೆರಳಿದ್ದರು ಅಲ್ಲಿಂದ ದೆಹಲಿಗೆ ತೆರಳಿದ್ದ ಎಂದು ವಿಡಿಯೊಗಳು ಬಹಿರಂಗಪಡಿಸಿವೆ ಎಂದು ಮೂಲಗಳು ತಿಳಿಸಿವೆ. ಆತ ನಿನ್ನೆ ಸನ್ಯಾಸಿಯ ವೇಷದಲ್ಲಿ ಬಸ್ ಟರ್ಮಿನಲ್‌ನಲ್ಲಿ ಇಳಿದಿದ್ದ ಎಂದು ಹೇಳಲಾಗಿದೆ.

ದೆಹಲಿ ಮತ್ತು ಪಂಜಾಬ್ ಪೊಲೀಸರ ತಂಡಗಳು ಇಂದು ಬೆಳಿಗ್ಗೆಯಿಂದ ದೆಹಲಿಯ ಕಾಶ್ಮೀರ್ ಗೇಟ್‌ನಲ್ಲಿರುವ ಅಂತರ ರಾಜ್ಯ ಬಸ್ ಟರ್ಮಿನಲ್‌ನಲ್ಲಿ ಹಾಜರಿದ್ದು, ಸಿಸಿಟಿವಿ ದೃಶ್ಯಗಳನ್ನು ಸ್ಕ್ಯಾನ್ ಮಾಡುತ್ತಿವೆ.

ಪೊಲೀಸರಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾಗ ತನಗೆ ಆಶ್ರಯ ನೀಡಿದ ಮಹಿಳೆಯ ಮನೆಯಿಂದ ಆತ ಹೋಗುವುದನ್ನು ಸಿಸಿಟಿವಿ ಕ್ಯಾಮೆರಾಗಳು ಕೊನೆಯದಾಗಿ ತೋರಿಸಿದವು. ಆತ ಮುಖ ಮರೆಮಾಚಲು ಛತ್ರಿಯನ್ನು ಹಿಡಿದಿರುವುದನ್ನು ದೃಶ್ಯಾವಳಿಗಳು ತೋರಿಸಿವೆ. ಹರಿಯಾಣದ ಕುರುಕ್ಷೇತ್ರದಲ್ಲಿರುವ ತನ್ನ ಮನೆಯಲ್ಲಿ ಅಮೃತಪಾಲ್ ಸಿಂಗ್ ಮತ್ತು ಆತನ ಸಹಾಯಕ ಪಾಪಲ್ ಪ್ರೀತ್ ಸಿಂಗ್ ಅವರಿಗೆ ಆಶ್ರಯ ನೀಡಿದ ಮಹಿಳೆ ಬಲ್ಜೀತ್ ಕೌರ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಯತ್ನ, ಕಾನೂನು ಜಾರಿಗೆ ಅಡ್ಡಿಪಡಿಸುವುದು ಮತ್ತು ಅಶಾಂತಿ ಸೃಷ್ಟಿಸಿದ ಆರೋಪ ಹೊತ್ತಿರುವ ಅಮೃತಪಾಲ್ ಕಳೆದ ಶನಿವಾರದಿಂದ ಪರಾರಿಯಾಗಿದ್ದ, ಅಧಿಕಾರಿಗಳು ಅವರ ವಾಹನವನ್ನು ತಡೆಯಲು ಪ್ರಯತ್ನಿಸಿ ಸೋತಿದ್ದರು.

ಇದನ್ನೂ ಓದಿ:ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ರದ್ದು: ಕೋರ್ಟ್​ಗೆ ಕಾಂಗ್ರೆಸ್ ಯಾಕೆ ಹೋಗಿಲ್ಲ? ಸಿಟಿ ರವಿ ಪ್ರಶ್ನೆ

ಅಮೃತಪಾಲ್ ಸಿಂಗ್ ಬಂಧನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಮಾಹಿತಿಯನ್ನು ಜನರು ನಂಬಬಾರದು. ಬಂಧನವಾದಾಗಲೆಲ್ಲಾ ಪೊಲೀಸರು ಪತ್ರಿಕಾಗೋಷ್ಠಿಯ ಮೂಲಕ ಮಾಹಿತಿ ನೀಡುತ್ತಾರೆ ಎಂದು ಬಟಿಂಡಾ ಎಸ್‌ಎಸ್‌ಪಿ ಗುಲ್ನೀತ್ ಖುರಾನಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು