AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಸಾಂಪ್ರದಾಯಿಕ ಉಡುಗೆ ತ್ಯಜಿಸಿ ಕೋಟ್,ಕನ್ನಡಕ ಧರಿಸಿದ ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್

ಸಿಸಿಟಿವಿ ದೃಶ್ಯಾವಳಿಗಳು ಅಮೃತಸರದಿಂದ ಮಾರ್ಚ್ 20 ರಂದು ದಾಖಲಾಗಿವೆ. ಅಮೃತಪಾಲ್ ಅಲ್ಲಿನ ಸಂಬಂಧಿಕರ ಮನೆಯಲ್ಲಿ ಅಡಗಿಕೊಂಡಿದ್ದ ಎಂದು ಹೇಳಲಾಗಿದೆ.

ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಸಾಂಪ್ರದಾಯಿಕ ಉಡುಗೆ ತ್ಯಜಿಸಿ ಕೋಟ್,ಕನ್ನಡಕ ಧರಿಸಿದ ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್
ಅಮೃತಪಾಲ್ ಸಿಂಗ್
ರಶ್ಮಿ ಕಲ್ಲಕಟ್ಟ
|

Updated on: Mar 25, 2023 | 4:05 PM

Share

ದೆಹಲಿ: ಪಂಜಾಬ್ ಪೊಲೀಸರ (Punjab Police) ಬಳಿಯಿಂದ ಪರಾರಿಯಾಗಿರುವ ತೀವ್ರಗಾಮಿ ಸಿಖ್ ಬೋಧಕ ಅಮೃತಪಾಲ್ ಸಿಂಗ್(Amritpal Singh) ತಪ್ಪಿಸಿಕೊಳ್ಳುವಾಗ ಜಾಕೆಟ್ ಮತ್ತು ಪ್ಯಾಂಟ್ ಧರಿಸಿದ್ದರು. ಸಾಮಾನ್ಯವಾಗಿ ಸಾಂಪ್ರದಾಯಿಕ ಧಾರ್ಮಿಕ ಉಡುಪಿನಲ್ಲಿ ಕಂಡುಬರುವ ಸಿಂಗ್ ಕಪ್ಪು ಕನ್ನಡಕವನ್ನು ಕೂಡಾ ಧರಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.ಸಿಸಿಟಿವಿ ದೃಶ್ಯಾವಳಿಗಳು ಅಮೃತಸರದಿಂದ ಮಾರ್ಚ್ 20 ರಂದು ದಾಖಲಾಗಿವೆ. ಅಮೃತಪಾಲ್ ಅಲ್ಲಿನ ಸಂಬಂಧಿಕರ ಮನೆಯಲ್ಲಿ ಅಡಗಿಕೊಂಡಿದ್ದ ಎಂದು ಹೇಳಲಾಗಿದೆ. ಈತ ಅಮೃತಸರದಿಂದ ಹರ್ಯಾಣದ ಕುರುಕ್ಷೇತ್ರಕ್ಕೆ ತೆರಳಿದ್ದರು ಅಲ್ಲಿಂದ ದೆಹಲಿಗೆ ತೆರಳಿದ್ದ ಎಂದು ವಿಡಿಯೊಗಳು ಬಹಿರಂಗಪಡಿಸಿವೆ ಎಂದು ಮೂಲಗಳು ತಿಳಿಸಿವೆ. ಆತ ನಿನ್ನೆ ಸನ್ಯಾಸಿಯ ವೇಷದಲ್ಲಿ ಬಸ್ ಟರ್ಮಿನಲ್‌ನಲ್ಲಿ ಇಳಿದಿದ್ದ ಎಂದು ಹೇಳಲಾಗಿದೆ.

ದೆಹಲಿ ಮತ್ತು ಪಂಜಾಬ್ ಪೊಲೀಸರ ತಂಡಗಳು ಇಂದು ಬೆಳಿಗ್ಗೆಯಿಂದ ದೆಹಲಿಯ ಕಾಶ್ಮೀರ್ ಗೇಟ್‌ನಲ್ಲಿರುವ ಅಂತರ ರಾಜ್ಯ ಬಸ್ ಟರ್ಮಿನಲ್‌ನಲ್ಲಿ ಹಾಜರಿದ್ದು, ಸಿಸಿಟಿವಿ ದೃಶ್ಯಗಳನ್ನು ಸ್ಕ್ಯಾನ್ ಮಾಡುತ್ತಿವೆ.

ಪೊಲೀಸರಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾಗ ತನಗೆ ಆಶ್ರಯ ನೀಡಿದ ಮಹಿಳೆಯ ಮನೆಯಿಂದ ಆತ ಹೋಗುವುದನ್ನು ಸಿಸಿಟಿವಿ ಕ್ಯಾಮೆರಾಗಳು ಕೊನೆಯದಾಗಿ ತೋರಿಸಿದವು. ಆತ ಮುಖ ಮರೆಮಾಚಲು ಛತ್ರಿಯನ್ನು ಹಿಡಿದಿರುವುದನ್ನು ದೃಶ್ಯಾವಳಿಗಳು ತೋರಿಸಿವೆ. ಹರಿಯಾಣದ ಕುರುಕ್ಷೇತ್ರದಲ್ಲಿರುವ ತನ್ನ ಮನೆಯಲ್ಲಿ ಅಮೃತಪಾಲ್ ಸಿಂಗ್ ಮತ್ತು ಆತನ ಸಹಾಯಕ ಪಾಪಲ್ ಪ್ರೀತ್ ಸಿಂಗ್ ಅವರಿಗೆ ಆಶ್ರಯ ನೀಡಿದ ಮಹಿಳೆ ಬಲ್ಜೀತ್ ಕೌರ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಯತ್ನ, ಕಾನೂನು ಜಾರಿಗೆ ಅಡ್ಡಿಪಡಿಸುವುದು ಮತ್ತು ಅಶಾಂತಿ ಸೃಷ್ಟಿಸಿದ ಆರೋಪ ಹೊತ್ತಿರುವ ಅಮೃತಪಾಲ್ ಕಳೆದ ಶನಿವಾರದಿಂದ ಪರಾರಿಯಾಗಿದ್ದ, ಅಧಿಕಾರಿಗಳು ಅವರ ವಾಹನವನ್ನು ತಡೆಯಲು ಪ್ರಯತ್ನಿಸಿ ಸೋತಿದ್ದರು.

ಇದನ್ನೂ ಓದಿ:ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ರದ್ದು: ಕೋರ್ಟ್​ಗೆ ಕಾಂಗ್ರೆಸ್ ಯಾಕೆ ಹೋಗಿಲ್ಲ? ಸಿಟಿ ರವಿ ಪ್ರಶ್ನೆ

ಅಮೃತಪಾಲ್ ಸಿಂಗ್ ಬಂಧನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಮಾಹಿತಿಯನ್ನು ಜನರು ನಂಬಬಾರದು. ಬಂಧನವಾದಾಗಲೆಲ್ಲಾ ಪೊಲೀಸರು ಪತ್ರಿಕಾಗೋಷ್ಠಿಯ ಮೂಲಕ ಮಾಹಿತಿ ನೀಡುತ್ತಾರೆ ಎಂದು ಬಟಿಂಡಾ ಎಸ್‌ಎಸ್‌ಪಿ ಗುಲ್ನೀತ್ ಖುರಾನಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!