AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಕಿಂ: ಕಾರುಗಳಿಗೆ ಹಾಲಿನ ಟ್ಯಾಂಕರ್​ ಡಿಕ್ಕಿ, 3 ಮಂದಿ ಸಾವು, 20 ಜನರಿಗೆ ಗಾಯ

ಸಿಕ್ಕಿಂನ ರಾಣಿಪೂಲ್‌ನಲ್ಲಿ ನಡೆದ ಜಾತ್ರೆಯೊಂದರಲ್ಲಿ ಹಾಲಿನ ಟ್ಯಾಂಕರ್‌ವೊಂದು ನಿಂತಿದ್ದ ಕಾರುಗಳಿಗೆ ನುಗ್ಗಿದ ಪರಿಣಾಮ ಮೂವರು ಸಾವನ್ನಪ್ಪಿ 20 ಮಂದಿ ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ. ವಾಹನಗಳು ಕಿಕ್ಕಿರಿದ ಜಾತ್ರೆಯ ಮೈದಾನಕ್ಕೆ ನುಗ್ಗಿದ್ದರಿಂದ ಘರ್ಷಣೆಯು ಅವ್ಯವಸ್ಥೆಗೆ ಕಾರಣವಾಯಿತು. ಹಲವು ಮಂದಿ ಚಕ್ರದಡಿ ಸಿಲುಕಿದ್ದರು.

ಸಿಕ್ಕಿಂ: ಕಾರುಗಳಿಗೆ ಹಾಲಿನ ಟ್ಯಾಂಕರ್​ ಡಿಕ್ಕಿ, 3 ಮಂದಿ ಸಾವು, 20 ಜನರಿಗೆ ಗಾಯ
ಅಪಘಾತ
ನಯನಾ ರಾಜೀವ್
|

Updated on: Feb 11, 2024 | 9:00 AM

Share

ಹಾಲಿನ ಟ್ಯಾಂಕರ್​ವೊಂದು ಮೂರು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಸಿಕ್ಕಿಂನಲ್ಲಿ ನಡೆದಿದೆ. ಸಿಕ್ಕಿಂನ ರಾಣಿಪೂಲ್​ನಲ್ಲಿ ಜಾತ್ರೆಯೊಂದು ನಡೆಯುತ್ತಿದ್ದು, ಅಲ್ಲಿ ಸಾಕಷ್ಟು ಮಂದಿ ಜನರು ಆಗಮಿಸಿದ್ದರು. ಡಿಕ್ಕಿಯ ರಭಸಕ್ಕೆ ಆ ಪ್ರದೇಶದಲ್ಲಿದ್ದ ಜನರು ವಾಹನಗಳಡಿ ಸಿಲುಕಿ ನುಜ್ಜುಗುಜ್ಜಾಗಿದ್ದಾರೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಟ್ಯಾಂಕರ್ ಒಂದು ಕಾರುಗಳಿಗೆ ಡಿಕ್ಕಿ ಹೊಡೆದ ತಕ್ಷಣವು ಆ ವಾಹನಗಳು ಜಾತ್ರೆ ನಡೆಯುತ್ತಿದ್ದ ಮೈದಾನದೊಳಗೆ ನುಗ್ಗಿತ್ತು. ಘಟನೆಯಲ್ಲಿ ಜನರು ವಾಹನದಡಿ ಸಿಲುಕಿಕೊಂಡ ಜನರನ್ನು ಹೊರತೆಗೆಯಲು ಹರಸಾಹಸ ಪಟ್ಟಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ಹಾಲಿನ ಟ್ಯಾಂಕರ್ ಬ್ರೇಕ್ ಫೇಲ್​ ಆಗಿದ್ದರಿಂದ, ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಸೆಂಟ್ರಲ್ ರೆಫರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: ಸಾವಿನ ರಸ್ತೆ ಆದ ಮಡಿಕೇರಿ-ಕುಶಾಲನಗರ ಹೆದ್ದಾರಿ; ಐದು ತಿಂಗಳಲ್ಲಿ 15ಕ್ಕೂ ಅಧಿಕ ಅಪಘಾತ, ನಾಲ್ವರ ಸಾವು

ಅಪಘಾತದ ವೇಳೆ ಮೇಳದ ಮೈದಾನದಲ್ಲಿ ‘ತಾಂಬೋಲ’ ಆಟ ನಡೆಯುತ್ತಿದ್ದರಿಂದ ಜನರಿಂದ ತುಂಬಿ ತುಳುಕುತ್ತಿತ್ತು. ಹಾಲಿನ ಟ್ಯಾಂಕರ್ ಅದರ ಬದಿಯಲ್ಲಿ ಸಿಕ್ಕಿಂ ಹಾಲು ಒಕ್ಕೂಟದ ಲೇಬಲ್ ಅನ್ನು ಹೊಂದಿತ್ತು. ಆಘಾತಕಾರಿ ಸಿಸಿಟಿವಿ ದೃಶ್ಯಾವಳಿಗಳು ಪ್ರಭಾವದ ಕ್ಷಣವನ್ನು ಸೆರೆಹಿಡಿಯಲಾಗಿದೆ.

ಅಪಘಾತದ ವಿಡಿಯೋ 

ಅಪಘಾತವು ಯುವತಿ ಮತ್ತು ಇಬ್ಬರು ಪುರುಷರ ಜೀವವನ್ನು ಬಲಿ ತೆಗೆದುಕೊಂಡಿತು, ಇದರಲ್ಲಿ ಒಬ್ಬ ಆಫ್ ಡ್ಯೂಟಿ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರನ್ನು ಇನ್ನೂ ಗುರುತಿಸಬೇಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್