AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲ್ಕ್ಯಾರಾ ಸುರಂಗ ಕೊರೆಯುವಿಕೆ ಪೂರ್ಣ, ಶೀಘ್ರದಲ್ಲೇ ಹೊರಬರಲಿದ್ದಾರೆ 41 ಕಾರ್ಮಿಕರು

ಸಿಲ್ಕ್ಯಾರಾ-ಬರ್ಕೋಟ್ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಹೊರತೆಗೆಯಲು ಎಲ್ಲ ರೀತಿಯ ಕಾರ್ಯಚರಣೆ ನಡೆಸಲಾಗಿದ್ದು, ಇದೀಗ ಎಲ್ಲ ಕಾರ್ಮಿಕರು ಸುರಕ್ಷಿತವಾಗಿ ಕೆಲವೇ ಕ್ಷಣದಲ್ಲಿ ಹೊರಬರಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ರಕ್ಷಣೆ ತಂಡ ತನ್ನ ಕಾರ್ಯವನ್ನು ಮುಂದುವರಿಸಿದ್ದು, ಕಾರ್ಮಿಕರನ್ನು ರಕ್ಷಣೆ ಮಾಡಲಿದೆ ಎಂದು ಎನ್​​ಡಿಆರ್​​ಎಫ್ ಹೇಳಿದೆ.

ಸಿಲ್ಕ್ಯಾರಾ ಸುರಂಗ ಕೊರೆಯುವಿಕೆ ಪೂರ್ಣ, ಶೀಘ್ರದಲ್ಲೇ ಹೊರಬರಲಿದ್ದಾರೆ 41 ಕಾರ್ಮಿಕರು
ಸಿಲ್ಕ್ಯಾರಾ ಸುರಂಗ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Nov 28, 2023 | 3:03 PM

Share

ಉತ್ತರಕಾಶಿಯ ಸಿಲ್ಕ್ಯಾರಾ-ಬರ್ಕೋಟ್ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಹೊರತೆಗೆಯಲು ಎಲ್ಲ ರೀತಿಯ ಕಾರ್ಯಚರಣೆ ನಡೆಸಲಾಗಿದ್ದು, ಇದೀಗ ಎಲ್ಲ ಕಾರ್ಮಿಕರು ಸುರಕ್ಷಿತವಾಗಿ ಕೆಲವೇ ಕ್ಷಣದಲ್ಲಿ ಹೊರಬರಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ರಕ್ಷಣೆ ತಂಡ ತನ್ನ ಕಾರ್ಯವನ್ನು ಮುಂದುವರಿಸಿದ್ದು, ಕಾರ್ಮಿಕರನ್ನು ರಕ್ಷಣೆ ಮಾಡಲಿದೆ ಎಂದು ಎನ್​​ಡಿಆರ್​​ಎಫ್​​​​ ಹೇಳಿದೆ. ಸುರಂಗದ ಒಳಗೆ ಎನ್​​​ಡಿಆರ್​ಎಫ್​​​​ (National Disaster Response Force)​​​​ ತಂಡ ಕೂಡ ಹೋಗಲಿದೆ ಎಂದು ಹೇಳಿದೆ. ಸ್ಥಳದಲ್ಲಿ ಆರೋಗ್ಯ ಸಿಬ್ಬಂದಿಗಳು ಧಾವಿಸಿದ್ದು, ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್‌ ವ್ಯವಸ್ಥೆಗಳನ್ನು ಕೂಡ ಮಾಡಲಾಗಿದೆ.

ಅಧಿಕಾರಿಗಳು ನೀಡಿದ ವರದಿಗಳ ಪ್ರಕಾರ ಸುರಂಗದ ಒಳಗೆ ಮೊದಲು 41 ಕಾರ್ಮಿಕರ ಆರೋಗ್ಯವನ್ನು ತಪಾಸಣೆ ಮಾಡಲಾಗುವುದು. ಅಲ್ಲಿ ಅವರಿಗೆ ಬೇಕಾದ ಆಹಾರಗಳನ್ನು ಕೂಡ ನೀಡಲಾಗುವುದು ಎಂದು ಹೇಳಿದ್ದಾರೆ. ಸುರಂಗದ ಹೊರಗೆ ಬರುತ್ತಿದ್ದಂತೆ ಅವರನ್ನು ಆಂಬ್ಯುಲೆನ್ಸ್​​​ ಮೂಕ ರಿಷಿಕೇಶ ಆಸ್ಪತ್ರೆಗೆ ಸಾಗಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಕಾಶಿ ಸುರಂಗ ಕುಸಿತ: ರಕ್ಷಣಾ ಕಾರ್ಯಾಚರಣೆ 16ನೇ ದಿನಕ್ಕೆ, ಹಸ್ತಚಾಲಿತ ಕೊರೆಯುವಿಕೆ ಪ್ರಾರಂಭ

ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆ ಕಾರ್ಯ 17ನೇ ದಿನಕ್ಕೆ ಕಾಲಿಟ್ಟಿದ್ದು, ಸೋಮವಾರ ಸಂಜೆ ಇಲಿ-ಹೋಲ್ ಗಣಿಗಾರಿಕೆ ಪ್ರಾರಂಭವಾಗಿತ್ತು. ಸುರಂಗಗಳನ್ನು ಪ್ರವೇಶಿಸಲು ಮತ್ತು ಕೈಯಲ್ಲಿ ಅಗೆಯಲು ದೆಹಲಿ ಮತ್ತು ಝಾನ್ಸಿಯಿಂದ ಕನಿಷ್ಠ 6 ಇಲಿ-ಹೋಲ್ ಗಣಿಗಾರರು ಆಗಮಿಸಿದರು. ಅವಶೇಷದ ಒಳಗೆ ಸಿಲುಕಿಕೊಂಡಿರುವ ಕಾರ್ಮಿಕರು 60 ಮೀಟರ್ ಹಿಂದಿದ್ದಾರೆ ಮತ್ತು ರಕ್ಷಣಾ ತಂಡ ಸುಮಾರು 12 ಮೀಟರ್ ದೂರದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ರಕ್ಷಣಾ ತಂಡ, ಒಳಗೆ ಸಿಲುಕಿಕೊಂಡಿರುವ ಕಾರ್ಮಿಕ ಹತ್ತಿರಕ್ಕೆ ಬರುತ್ತಿದ್ದಾರೆ ಎಂದು ಹೇಳಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Tue, 28 November 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ