AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo Flight ಕ್ಯಾಬಿನ್​ನಲ್ಲಿ ಹೊಗೆ; ಸಿಂಗಾಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನ ಇಂಡೋನೇಷ್ಯಾದಲ್ಲಿ ತುರ್ತು ಭೂಸ್ಪರ್ಶ

ತಮಿಳುನಾಡಿನ ತಿರುಚಿರಾಪಳ್ಳಿಯಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ತುರ್ತ ಕಾರಣಗಳಿಂದಾಗಿ ಇಂಡೋನೇಷ್ಯಾದ ಮೆಡಾನ್​ನ ಕೌಲಾನಾಮು ವಿಮಾನ ನಿಲ್ದಾಣಕ್ಕೆ ಕಳುಹಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಬುಧವಾರ ತಿಳಿಸಿದೆ.

IndiGo Flight ಕ್ಯಾಬಿನ್​ನಲ್ಲಿ ಹೊಗೆ; ಸಿಂಗಾಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನ ಇಂಡೋನೇಷ್ಯಾದಲ್ಲಿ ತುರ್ತು ಭೂಸ್ಪರ್ಶ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: May 10, 2023 | 9:55 PM

Share

ಮುಂಬೈ: ತಮಿಳುನಾಡಿನ ತಿರುಚಿರಾಪಳ್ಳಿಯಿಂದ ಸಿಂಗಾಪುರಕ್ಕೆ (Singapore) ತೆರಳುತ್ತಿದ್ದ ಇಂಡಿಗೋ (IndiGo) ವಿಮಾನವನ್ನು ತುರ್ತ ಕಾರಣಗಳಿಂದಾಗಿ ಇಂಡೋನೇಷ್ಯಾದ ಮೆಡಾನ್​ನ ಕೌಲಾನಾಮು ವಿಮಾನ ನಿಲ್ದಾಣಕ್ಕೆ ಕಳುಹಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಬುಧವಾರ ತಿಳಿಸಿದೆ. ವಿಮಾನದ ಕ್ಯಾಬಿನ್​ನಲ್ಲಿ ಸುಟ್ಟ ವಾಸನೆ ಬಂದಿತ್ತು. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಲ್ಯಾಂಡಿಂಗ್ ಮಾಡಲಾಯಿತು. ಕೌಲಾನಾಮು ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಯಿತು ಎಂದು ಏರ್​​ಲೈನ್ಸ್ ತಿಳಿಸಿದೆ.

ಘಟನೆಯ 12 ಗಂಟೆಗಳ ನಂತರವೂ ವಿಮಾನಯಾನ ಸಂಸ್ಥೆ ನಿರ್ದಿಷ್ಟ ವಿವರಗಳನ್ನು ಹಂಚಿಕೊಂಡಿಲ್ಲ. ವಿಮಾನದಲ್ಲಿದ್ದ ಪ್ರಯಾಣಿಕರ ಸಂಖ್ಯೆ, ಪ್ರಯಾಣಿಕರನ್ನು ಯಾವ ಸಮಯಕ್ಕೆ ಕಳುಹಿಸಿಕೊಡಲಾಗುತ್ತದೆ ಎಂಬ ಮಾಹಿತಿ ನೀಡಿಲ್ಲ. ಪ್ರಯಾಣಿಕರನ್ನು ಕಳುಹಿಸಲು ಪರ್ಯಾಯ ವಿಮಾನವನ್ನು ಕೌಲಾನಾಮುಗೆ ಹಾರಿಸಲಾಗುತ್ತಿದೆ ಎಂದಷ್ಟೇ ಇಂಡಿಗೋ ಹೇಳಿದೆ.

ತಿರುಚಿರಾಪಳ್ಳಿಯಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ಎ320ceo 6ಇ-1007 ಸಂಖ್ಯೆಯ ವಿಮಾನವನ್ನು ಇಂಡೋನೇಷ್ಯಾದ ಕ್ವಾಲಾನಾಮು ವಿಮಾನ ನಿಲ್ದಾಣಕ್ಕೆ ಕಳುಹಿಸಲಾಯಿತು. ಹಾರಾಟದ ಸಮಯದಲ್ಲಿ ಕ್ಯಾಬಿನ್‌ನಲ್ಲಿ ಸುಟ್ಟ ವಾಸನೆಯನ್ನು ಗಮನಿಸಿದ ಸಿಬ್ಬಂದಿ ಈ ಕ್ರಮ ಕೈಗೊಂಡರು ಎಂದು ಇಂಡಿಗೋ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಸೈಕ್ಲೋನ್ ಮೋಚಾ: ಚಂಡಮಾರುತದ ಸಮಯದಲ್ಲಿ ಆರೋಗ್ಯ ಅಪಾಯಗಳು ಮತ್ತು ಸುರಕ್ಷತಾ ಕ್ರಮಗಳು

ಪೈಲಟ್ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೆಕಾದ ಕ್ರಮ ಅನುಸರಿಸಿದರು ಮತ್ತು ಮುನ್ನೆಚ್ಚರಿಕೆಯಾಗಿ ಹತ್ತಿರದ ವಿಮಾನ ನಿಲ್ದಾಣ, ಕ್ವಾಲಾನಾಮುವಲ್ಲಿ ಸುರಕ್ಷಿತವಾಗಿ ಲ್ಯಾಂಡ್​​ ಮಾಡಿದರು ಎಂದು ಪ್ರಕಟಣೆ ತಿಳಿಸಿದೆ.

ಲ್ಯಾಂಡಿಂಗ್ ನಂತರ ನಡೆಸಲಾದ ಆರಂಭಿಕ ತಪಾಸಣೆಗಳು ತೃಪ್ತಿಕರವಾಗಿವೆ ಎಂದು ಅದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ