AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo Flight ಕ್ಯಾಬಿನ್​ನಲ್ಲಿ ಹೊಗೆ; ಸಿಂಗಾಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನ ಇಂಡೋನೇಷ್ಯಾದಲ್ಲಿ ತುರ್ತು ಭೂಸ್ಪರ್ಶ

ತಮಿಳುನಾಡಿನ ತಿರುಚಿರಾಪಳ್ಳಿಯಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ತುರ್ತ ಕಾರಣಗಳಿಂದಾಗಿ ಇಂಡೋನೇಷ್ಯಾದ ಮೆಡಾನ್​ನ ಕೌಲಾನಾಮು ವಿಮಾನ ನಿಲ್ದಾಣಕ್ಕೆ ಕಳುಹಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಬುಧವಾರ ತಿಳಿಸಿದೆ.

IndiGo Flight ಕ್ಯಾಬಿನ್​ನಲ್ಲಿ ಹೊಗೆ; ಸಿಂಗಾಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನ ಇಂಡೋನೇಷ್ಯಾದಲ್ಲಿ ತುರ್ತು ಭೂಸ್ಪರ್ಶ
ಸಾಂದರ್ಭಿಕ ಚಿತ್ರ
Ganapathi Sharma
|

Updated on: May 10, 2023 | 9:55 PM

Share

ಮುಂಬೈ: ತಮಿಳುನಾಡಿನ ತಿರುಚಿರಾಪಳ್ಳಿಯಿಂದ ಸಿಂಗಾಪುರಕ್ಕೆ (Singapore) ತೆರಳುತ್ತಿದ್ದ ಇಂಡಿಗೋ (IndiGo) ವಿಮಾನವನ್ನು ತುರ್ತ ಕಾರಣಗಳಿಂದಾಗಿ ಇಂಡೋನೇಷ್ಯಾದ ಮೆಡಾನ್​ನ ಕೌಲಾನಾಮು ವಿಮಾನ ನಿಲ್ದಾಣಕ್ಕೆ ಕಳುಹಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಬುಧವಾರ ತಿಳಿಸಿದೆ. ವಿಮಾನದ ಕ್ಯಾಬಿನ್​ನಲ್ಲಿ ಸುಟ್ಟ ವಾಸನೆ ಬಂದಿತ್ತು. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಲ್ಯಾಂಡಿಂಗ್ ಮಾಡಲಾಯಿತು. ಕೌಲಾನಾಮು ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಯಿತು ಎಂದು ಏರ್​​ಲೈನ್ಸ್ ತಿಳಿಸಿದೆ.

ಘಟನೆಯ 12 ಗಂಟೆಗಳ ನಂತರವೂ ವಿಮಾನಯಾನ ಸಂಸ್ಥೆ ನಿರ್ದಿಷ್ಟ ವಿವರಗಳನ್ನು ಹಂಚಿಕೊಂಡಿಲ್ಲ. ವಿಮಾನದಲ್ಲಿದ್ದ ಪ್ರಯಾಣಿಕರ ಸಂಖ್ಯೆ, ಪ್ರಯಾಣಿಕರನ್ನು ಯಾವ ಸಮಯಕ್ಕೆ ಕಳುಹಿಸಿಕೊಡಲಾಗುತ್ತದೆ ಎಂಬ ಮಾಹಿತಿ ನೀಡಿಲ್ಲ. ಪ್ರಯಾಣಿಕರನ್ನು ಕಳುಹಿಸಲು ಪರ್ಯಾಯ ವಿಮಾನವನ್ನು ಕೌಲಾನಾಮುಗೆ ಹಾರಿಸಲಾಗುತ್ತಿದೆ ಎಂದಷ್ಟೇ ಇಂಡಿಗೋ ಹೇಳಿದೆ.

ತಿರುಚಿರಾಪಳ್ಳಿಯಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ಎ320ceo 6ಇ-1007 ಸಂಖ್ಯೆಯ ವಿಮಾನವನ್ನು ಇಂಡೋನೇಷ್ಯಾದ ಕ್ವಾಲಾನಾಮು ವಿಮಾನ ನಿಲ್ದಾಣಕ್ಕೆ ಕಳುಹಿಸಲಾಯಿತು. ಹಾರಾಟದ ಸಮಯದಲ್ಲಿ ಕ್ಯಾಬಿನ್‌ನಲ್ಲಿ ಸುಟ್ಟ ವಾಸನೆಯನ್ನು ಗಮನಿಸಿದ ಸಿಬ್ಬಂದಿ ಈ ಕ್ರಮ ಕೈಗೊಂಡರು ಎಂದು ಇಂಡಿಗೋ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಸೈಕ್ಲೋನ್ ಮೋಚಾ: ಚಂಡಮಾರುತದ ಸಮಯದಲ್ಲಿ ಆರೋಗ್ಯ ಅಪಾಯಗಳು ಮತ್ತು ಸುರಕ್ಷತಾ ಕ್ರಮಗಳು

ಪೈಲಟ್ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೆಕಾದ ಕ್ರಮ ಅನುಸರಿಸಿದರು ಮತ್ತು ಮುನ್ನೆಚ್ಚರಿಕೆಯಾಗಿ ಹತ್ತಿರದ ವಿಮಾನ ನಿಲ್ದಾಣ, ಕ್ವಾಲಾನಾಮುವಲ್ಲಿ ಸುರಕ್ಷಿತವಾಗಿ ಲ್ಯಾಂಡ್​​ ಮಾಡಿದರು ಎಂದು ಪ್ರಕಟಣೆ ತಿಳಿಸಿದೆ.

ಲ್ಯಾಂಡಿಂಗ್ ನಂತರ ನಡೆಸಲಾದ ಆರಂಭಿಕ ತಪಾಸಣೆಗಳು ತೃಪ್ತಿಕರವಾಗಿವೆ ಎಂದು ಅದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು