ರಾಜ್ಯೋತ್ಸವ ಸಂಭ್ರಮದ ಮಧ್ಯೆ ವಿಷಾದ, ಸಿಂಗರೇಣಿ ಘಟಕದಲ್ಲಿ ನಾಲ್ವರು ಕಾರ್ಮಿಕರ ಸಾವು

ಹೈದರಾಬಾದ್: ಇಡೀ ತೆಲಂಗಾಣ‌, ರಾಜ್ಯೋತ್ಸವ ಆಚರಣೆ ಸಂಭ್ರಮದಲ್ಲಿರುವಾಗ ಪೆದ್ದಪಲ್ಲಿ‌ ಜಿಲ್ಲೆಯಲ್ಲಿ‌ ದಾರುಣ ಘಟನೆಯೊಂದು ನಡೆದಿದೆ. ಸಿಂಗರೇಣಿ ಮೈನಿಂಗ್ ಕೇಂದ್ರದ ಓಪಿಸಿ ಘಟಕ 1ರಲ್ಲಿ ಬ್ಲಾಸ್ಟಿಂಗ್ ಮಾಡುವಾಗ ದುರ್ಘಟನೆ ಸಂಭವಿಸಿದ್ದು, ನಾಲ್ವರು ಗುತ್ತಿಗೆ ಕಾರ್ಮಿಕರು‌ ಸಾವಿಗೀಡಾಗಿದ್ದಾರೆ. ಘಟನೆಗೆ ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಇನ್ನೂ ಇಬ್ಬರು ಕಾರ್ಮಿಕರಿಗೆ ಗಾಯಗಳಾಗಿದ್ದು, ಸ್ಥಳೀಯ (ಗೋದಾವರಿ) ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತ ಕಾರ್ಮಿಕರನ್ನು ಬಂಡಾರಿ ಪ್ರವೀಣ, ರಾಜೇಶ ಕಮಂಪುರ, ಅಂಜಯ್ಯ, ರಾಕೇಶ ಎಂದು ಗುರುತಿಸಲಾಗಿದೆ.

ರಾಜ್ಯೋತ್ಸವ ಸಂಭ್ರಮದ ಮಧ್ಯೆ ವಿಷಾದ, ಸಿಂಗರೇಣಿ ಘಟಕದಲ್ಲಿ ನಾಲ್ವರು ಕಾರ್ಮಿಕರ ಸಾವು
ಸಾಧು ಶ್ರೀನಾಥ್​

Updated on: Jun 02, 2020 | 1:45 PM

ಹೈದರಾಬಾದ್: ಇಡೀ ತೆಲಂಗಾಣ‌, ರಾಜ್ಯೋತ್ಸವ ಆಚರಣೆ ಸಂಭ್ರಮದಲ್ಲಿರುವಾಗ ಪೆದ್ದಪಲ್ಲಿ‌ ಜಿಲ್ಲೆಯಲ್ಲಿ‌ ದಾರುಣ ಘಟನೆಯೊಂದು ನಡೆದಿದೆ. ಸಿಂಗರೇಣಿ ಮೈನಿಂಗ್ ಕೇಂದ್ರದ ಓಪಿಸಿ ಘಟಕ 1ರಲ್ಲಿ ಬ್ಲಾಸ್ಟಿಂಗ್ ಮಾಡುವಾಗ ದುರ್ಘಟನೆ ಸಂಭವಿಸಿದ್ದು, ನಾಲ್ವರು ಗುತ್ತಿಗೆ ಕಾರ್ಮಿಕರು‌ ಸಾವಿಗೀಡಾಗಿದ್ದಾರೆ. ಘಟನೆಗೆ ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.

ಇನ್ನೂ ಇಬ್ಬರು ಕಾರ್ಮಿಕರಿಗೆ ಗಾಯಗಳಾಗಿದ್ದು, ಸ್ಥಳೀಯ (ಗೋದಾವರಿ) ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತ ಕಾರ್ಮಿಕರನ್ನು ಬಂಡಾರಿ ಪ್ರವೀಣ, ರಾಜೇಶ ಕಮಂಪುರ, ಅಂಜಯ್ಯ, ರಾಕೇಶ ಎಂದು ಗುರುತಿಸಲಾಗಿದೆ.

Published On - 1:06 pm, Tue, 2 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us