AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಡಿಸೆಂಬರ್​ ಕೊನೆಯಲ್ಲಿ ಬಳಕೆಗೆ ಸಿಗಲಿದೆ ಒಂದೇ ಡೋಸ್​​ನ ಕೊವಿಡ್ ಲಸಿಕೆ ಸ್ಪುಟ್ನಿಕ್​ ಲೈಟ್​ !

ಸ್ಪುಟ್ನಿಕ್​ ಲೈಟ್​ ಏಕ ಡೋಸ್ ಲಸಿಕೆಯಾಗಿದ್ದರೂ ಹಲವು ಎರಡು ಡೋಸ್​ಗಳ ಲಸಿಕೆಗಳಿಗಿಂತ ಶೇ.80ರಷ್ಟು ಪರಿಣಾಮಕಾರಿಯಾಗಿದೆ. ಇದು ಕೊರೊನಾ ಸೋಂಕು ಸೇರಿ ಅದರ ಎಲ್ಲ ರೀತಿಯ ರೂಪಾಂತರಗಳ ವಿರುದ್ಧವೂ ಹೋರಾಡಬಲ್ಲದು ಎಂದು ಆರ್​ಡಿಐಎಫ್​ ಭರವಸೆ ನೀಡಿದೆ. 

ಭಾರತದಲ್ಲಿ ಡಿಸೆಂಬರ್​ ಕೊನೆಯಲ್ಲಿ ಬಳಕೆಗೆ ಸಿಗಲಿದೆ ಒಂದೇ ಡೋಸ್​​ನ ಕೊವಿಡ್ ಲಸಿಕೆ ಸ್ಪುಟ್ನಿಕ್​ ಲೈಟ್​ !
ಸ್ಪುಟ್ನಿಕ್​ ಲೈಟ್​
Follow us
TV9 Web
| Updated By: Lakshmi Hegde

Updated on:Nov 25, 2021 | 8:55 AM

ದೆಹಲಿ: ಭಾರತದಲ್ಲಿ ಸದ್ಯ ನೀಡಲಾಗುತ್ತಿರುವ ಎಲ್ಲ ಕೊವಿಡ್​ 19 ಲಸಿಕೆಗಳೂ ಎರಡು ಡೋಸ್​​ಗಳದ್ದಾಗಿವೆ. ಈ ಮಧ್ಯೆ ಡಿಸೆಂಬರ್​ ಅಂತ್ಯದ ವೇಳೆಗೆ ಒಂದೇ ಡೋಸ್​​ನ ಕೊವಿಡ್​ 19 ಲಸಿಕೆ ಸ್ಪುಟ್ನಿಕ್​ ಲೈಟ್​ ಭಾರತದಲ್ಲಿ ಬಳಕೆಗೆ ಲಭ್ಯವಾಗಲಿದೆ ಎಂದು ರಷ್ಯಾದ ನೇರ ಹೂಡಿಕೆ ನಿಧಿ (RDIF)ಸಿಇಒ ಕಿರಿಲ್​ ಡಿಮಿಟ್ರಿವ್​ ತಿಳಿಸಿದ್ದಾರೆ.  ಸದ್ಯ ಈ ಸಿಂಗಲ್​ ಡೋಸ್​ ಲಸಿಕೆ ಕ್ಲಿನಿಕಲ್​ ಪ್ರಯೋಗದ ಹಂತದಲ್ಲಿದೆ.  

ಈ ಸ್ಪುಟ್ನಿಕ್​ ಲೈಟ್​ ಲಸಿಕೆಯನ್ನು ಹಾಕಿದ ಮೂರು ತಿಂಗಳವರೆಗೆ ಡೆಲ್ಟಾ ರೂಪಾಂತರದ ವಿರುದ್ಧ ಶೇ.70ರಷ್ಟು ಪರಿಣಾಮಕಾರಿಯಾಗುತ್ತದೆ ಎಂದು ಕಳೆದ ತಿಂಗಳು ಆರ್​ಡಿಐಎಫ್​ ತಿಳಿಸಿತ್ತು. ಅಷ್ಟೇ ಅಲ್ಲ, 60ವರ್ಷಕ್ಕಿಂತ ಕೆಳಗಿನವರಲ್ಲಿ ಶೇ.75ರಷ್ಟು ಪರಿಣಾಮಕಾರಿಯಾಗಿದ್ದು, ಇದು ಕೊವಿಡ್​ ತೀವ್ರ ಸ್ವರೂಪಕ್ಕೆ ಹೋಗುವುದನ್ನು ಮತ್ತು ರೋಗಿಗಳು ಆಸ್ಪತ್ರೆಗೆ ದಾಖಲಾಗುವುದನ್ನು ತಡೆಯುತ್ತದೆ ಎಂದು ಹೇಳಿಕೆಯಲ್ಲಿ ಮಾಹಿತಿ ನೀಡಿದೆ. ಈ ಲಸಿಕೆಯ ಮೂರನೇ ಹಂತದ ಪ್ರಯೋಗ ನಡೆಸಲು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣಾ ಸಂಸ್ಥೆಯ ವಿಷಯ ತಜ್ಞರ ಸಮಿತಿ ಸೆಪ್ಟೆಂಬರ್​​ನಲ್ಲಿ ಶಿಫಾರಸ್ಸು ಮಾಡಿತ್ತು.

ಸ್ಪುಟ್ನಿಕ್​ ಲೈಟ್​ ಏಕ ಡೋಸ್ ಲಸಿಕೆಯಾಗಿದ್ದರೂ ಹಲವು ಎರಡು ಡೋಸ್​ಗಳ ಲಸಿಕೆಗಳಿಗಿಂತ ಶೇ.80ರಷ್ಟು ಪರಿಣಾಮಕಾರಿಯಾಗಿದೆ. ಇದು ಕೊರೊನಾ ಸೋಂಕು ಸೇರಿ ಅದರ ಎಲ್ಲ ರೀತಿಯ ರೂಪಾಂತರಗಳ ವಿರುದ್ಧವೂ ಹೋರಾಡಬಲ್ಲದು ಎಂದು ಆರ್​ಡಿಐಎಫ್​ ಭರವಸೆ ನೀಡಿದೆ.  ಈಗಾಗಲೇ ಸುಮಾರು 15 ದೇಶಗಳಲ್ಲಿ ಈ ಏಕ ಡೋಸ್​ ಲಸಿಕೆಯನ್ನು ನೀಡಲಾಗುತ್ತಿದ್ದು, ಇನ್ನೂ 30 ದೇಶಗಳಲ್ಲಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಅಂದಹಾಗೆ ಸ್ಪುಟ್ನಿಕ್​ ಲೈಟ್​ ಲಸಿಕೆಯನ್ನು ಬೂಸ್ಟರ್​ ಡೋಸ್​​ನಂತೆಯೂ ಕೊಡಬಹುದು ಎಂದು ಸಿಇಒ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪೇಜಾವರ ಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ವಿಚಾರ; ಬಸವನಗುಡಿ ಠಾಣೆಗೆ ಇಂದು ಹಂಸಲೇಖ ಹಾಜರು ಸಾಧ್ಯತೆ

Published On - 8:55 am, Thu, 25 November 21

ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್