AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಡಿಸೆಂಬರ್​ ಕೊನೆಯಲ್ಲಿ ಬಳಕೆಗೆ ಸಿಗಲಿದೆ ಒಂದೇ ಡೋಸ್​​ನ ಕೊವಿಡ್ ಲಸಿಕೆ ಸ್ಪುಟ್ನಿಕ್​ ಲೈಟ್​ !

ಸ್ಪುಟ್ನಿಕ್​ ಲೈಟ್​ ಏಕ ಡೋಸ್ ಲಸಿಕೆಯಾಗಿದ್ದರೂ ಹಲವು ಎರಡು ಡೋಸ್​ಗಳ ಲಸಿಕೆಗಳಿಗಿಂತ ಶೇ.80ರಷ್ಟು ಪರಿಣಾಮಕಾರಿಯಾಗಿದೆ. ಇದು ಕೊರೊನಾ ಸೋಂಕು ಸೇರಿ ಅದರ ಎಲ್ಲ ರೀತಿಯ ರೂಪಾಂತರಗಳ ವಿರುದ್ಧವೂ ಹೋರಾಡಬಲ್ಲದು ಎಂದು ಆರ್​ಡಿಐಎಫ್​ ಭರವಸೆ ನೀಡಿದೆ. 

ಭಾರತದಲ್ಲಿ ಡಿಸೆಂಬರ್​ ಕೊನೆಯಲ್ಲಿ ಬಳಕೆಗೆ ಸಿಗಲಿದೆ ಒಂದೇ ಡೋಸ್​​ನ ಕೊವಿಡ್ ಲಸಿಕೆ ಸ್ಪುಟ್ನಿಕ್​ ಲೈಟ್​ !
ಸ್ಪುಟ್ನಿಕ್​ ಲೈಟ್​
TV9 Web
| Edited By: |

Updated on:Nov 25, 2021 | 8:55 AM

Share

ದೆಹಲಿ: ಭಾರತದಲ್ಲಿ ಸದ್ಯ ನೀಡಲಾಗುತ್ತಿರುವ ಎಲ್ಲ ಕೊವಿಡ್​ 19 ಲಸಿಕೆಗಳೂ ಎರಡು ಡೋಸ್​​ಗಳದ್ದಾಗಿವೆ. ಈ ಮಧ್ಯೆ ಡಿಸೆಂಬರ್​ ಅಂತ್ಯದ ವೇಳೆಗೆ ಒಂದೇ ಡೋಸ್​​ನ ಕೊವಿಡ್​ 19 ಲಸಿಕೆ ಸ್ಪುಟ್ನಿಕ್​ ಲೈಟ್​ ಭಾರತದಲ್ಲಿ ಬಳಕೆಗೆ ಲಭ್ಯವಾಗಲಿದೆ ಎಂದು ರಷ್ಯಾದ ನೇರ ಹೂಡಿಕೆ ನಿಧಿ (RDIF)ಸಿಇಒ ಕಿರಿಲ್​ ಡಿಮಿಟ್ರಿವ್​ ತಿಳಿಸಿದ್ದಾರೆ.  ಸದ್ಯ ಈ ಸಿಂಗಲ್​ ಡೋಸ್​ ಲಸಿಕೆ ಕ್ಲಿನಿಕಲ್​ ಪ್ರಯೋಗದ ಹಂತದಲ್ಲಿದೆ.  

ಈ ಸ್ಪುಟ್ನಿಕ್​ ಲೈಟ್​ ಲಸಿಕೆಯನ್ನು ಹಾಕಿದ ಮೂರು ತಿಂಗಳವರೆಗೆ ಡೆಲ್ಟಾ ರೂಪಾಂತರದ ವಿರುದ್ಧ ಶೇ.70ರಷ್ಟು ಪರಿಣಾಮಕಾರಿಯಾಗುತ್ತದೆ ಎಂದು ಕಳೆದ ತಿಂಗಳು ಆರ್​ಡಿಐಎಫ್​ ತಿಳಿಸಿತ್ತು. ಅಷ್ಟೇ ಅಲ್ಲ, 60ವರ್ಷಕ್ಕಿಂತ ಕೆಳಗಿನವರಲ್ಲಿ ಶೇ.75ರಷ್ಟು ಪರಿಣಾಮಕಾರಿಯಾಗಿದ್ದು, ಇದು ಕೊವಿಡ್​ ತೀವ್ರ ಸ್ವರೂಪಕ್ಕೆ ಹೋಗುವುದನ್ನು ಮತ್ತು ರೋಗಿಗಳು ಆಸ್ಪತ್ರೆಗೆ ದಾಖಲಾಗುವುದನ್ನು ತಡೆಯುತ್ತದೆ ಎಂದು ಹೇಳಿಕೆಯಲ್ಲಿ ಮಾಹಿತಿ ನೀಡಿದೆ. ಈ ಲಸಿಕೆಯ ಮೂರನೇ ಹಂತದ ಪ್ರಯೋಗ ನಡೆಸಲು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣಾ ಸಂಸ್ಥೆಯ ವಿಷಯ ತಜ್ಞರ ಸಮಿತಿ ಸೆಪ್ಟೆಂಬರ್​​ನಲ್ಲಿ ಶಿಫಾರಸ್ಸು ಮಾಡಿತ್ತು.

ಸ್ಪುಟ್ನಿಕ್​ ಲೈಟ್​ ಏಕ ಡೋಸ್ ಲಸಿಕೆಯಾಗಿದ್ದರೂ ಹಲವು ಎರಡು ಡೋಸ್​ಗಳ ಲಸಿಕೆಗಳಿಗಿಂತ ಶೇ.80ರಷ್ಟು ಪರಿಣಾಮಕಾರಿಯಾಗಿದೆ. ಇದು ಕೊರೊನಾ ಸೋಂಕು ಸೇರಿ ಅದರ ಎಲ್ಲ ರೀತಿಯ ರೂಪಾಂತರಗಳ ವಿರುದ್ಧವೂ ಹೋರಾಡಬಲ್ಲದು ಎಂದು ಆರ್​ಡಿಐಎಫ್​ ಭರವಸೆ ನೀಡಿದೆ.  ಈಗಾಗಲೇ ಸುಮಾರು 15 ದೇಶಗಳಲ್ಲಿ ಈ ಏಕ ಡೋಸ್​ ಲಸಿಕೆಯನ್ನು ನೀಡಲಾಗುತ್ತಿದ್ದು, ಇನ್ನೂ 30 ದೇಶಗಳಲ್ಲಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಅಂದಹಾಗೆ ಸ್ಪುಟ್ನಿಕ್​ ಲೈಟ್​ ಲಸಿಕೆಯನ್ನು ಬೂಸ್ಟರ್​ ಡೋಸ್​​ನಂತೆಯೂ ಕೊಡಬಹುದು ಎಂದು ಸಿಇಒ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪೇಜಾವರ ಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ವಿಚಾರ; ಬಸವನಗುಡಿ ಠಾಣೆಗೆ ಇಂದು ಹಂಸಲೇಖ ಹಾಜರು ಸಾಧ್ಯತೆ

Published On - 8:55 am, Thu, 25 November 21

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?