AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಪಾಸ್​ಪೋರ್ಟ್​ನಿಂದ ತಂದೆಯ ಹೆಸರು ಅಳಿಸಿಹಾಕಲು ಕೊನೆಗೂ ಸಿಕ್ತು ಅನುಮತಿ

ಪಾಸ್​ಪೋರ್ಟ್(Passport)ನಿಂದ ತಂದೆಯ ಹೆಸರನ್ನು ತೆಗೆದುಹಾಕುವ ಕುರಿತು ದೆಹಲಿ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ.

ಮಗನ ಪಾಸ್​ಪೋರ್ಟ್​ನಿಂದ ತಂದೆಯ ಹೆಸರು ಅಳಿಸಿಹಾಕಲು ಕೊನೆಗೂ ಸಿಕ್ತು ಅನುಮತಿ
ಪಾಸ್​ಪೋರ್ಟ್​
ನಯನಾ ರಾಜೀವ್
|

Updated on:May 02, 2023 | 9:35 AM

Share

ಪಾಸ್​ಪೋರ್ಟ್(Passport)ನಿಂದ ತಂದೆಯ ಹೆಸರನ್ನು ತೆಗೆದುಹಾಕುವ ಕುರಿತು ದೆಹಲಿ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಮಗುವಿನ ಜನನದ ಮೊದಲು ತಂದೆ ಪತ್ನಿಯನ್ನು ತೊರೆದಿದ್ದರೆ , ಮಗುವಿನ ಪಾಸ್​ಪೋರ್ಟ್​ನಿಂದ ತಂದೆಯ ಹೆಸರನ್ನು ತೆಗೆದುಹಾಕಬಹುದು ಎಂದು ಕೋರ್ಟ್​ ಅಭಿಪ್ರಾಯಪಟ್ಟಿದೆ. ಸಿಂಗಲ್ ಮದರ್ ಪರವಾಗಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್​ ತನ್ನ ಅಪ್ರಾಪ್ತ ಮಗನ ಪಾಸ್​ಪೋರ್ಟ್​ನಿಂದ ತಂದೆಯ ಹೆಸರನ್ನು ತೆಗೆದುಹಾಕುವಂತೆ ಪಾಸ್​ಪೋರ್ಟ್​ ಅಧಿಕಾರಿಗಳಿಗೆ ಸೂಚಿಸಿದೆ.

ಅರ್ಜಿದಾರರು (ತಾಯಿ) ಮಗು ಹುಟ್ಟುವ ಮೊದಲೇ ಇಬ್ಬರೂ ಬೇರೆಯಾಗಿದ್ದರು, ಮಗನನ್ನು ಆಕೆ ಒಬ್ಬರೇ ಬೆಳಸಿದ್ದಾರೆ ಎಂದು ನ್ಯಾ. ಪ್ರತಿಭಾ ಎಂ ಸಿಂಗ್ ಹೇಳಿದ್ದಾರೆ. ಮಗುವಿನ ತಂದೆಯ ಹೆಸರನ್ನು ಪಾಸ್‌ಪೋರ್ಟ್‌ನಿಂದ ಅಳಿಸಲು ಮತ್ತು ತಂದೆಯ ಹೆಸರಿಲ್ಲದೆ ಅಪ್ರಾಪ್ತ ಮಗುವಿನ ಪರವಾಗಿ ಪಾಸ್‌ಪೋರ್ಟ್ ಅನ್ನು ಮರು ನೀಡುವಂತೆ ನಿರ್ದೇಶಿಸಲಾಗಿದೆ.

ಮತ್ತಷ್ಟು ಓದಿ: ರಾಜ್ಯದಲ್ಲಿ ಹೆಚ್ಚಿದ ಪಾಸ್​​ಪೋರ್ಟ್​​ ಮಾಡಿಸುವವರ ಸಂಖ್ಯೆ: ಬೆಂಗಳೂರು ಫಸ್ಟ್​​, ಮಂಗಳೂರು ಸೆಕೆಂಡ್​

ಒಂಟಿ ತಾಯಿ ಮತ್ತು ಆಕೆಯ ಅಪ್ರಾಪ್ತ ಮಗ ತಮ್ಮ ಅಸ್ತಿತ್ವದಲ್ಲಿರುವ ಪಾಸ್‌ಪೋರ್ಟ್‌ನಿಂದ ಅಪ್ರಾಪ್ತ ಮಗುವಿನ ತಂದೆಯ ಹೆಸರನ್ನು ಅಳಿಸುವಂತೆ ಕೋರಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಅರ್ಜಿದಾರರು ಪರಸ್ಪರ ಒಪ್ಪಂದ ಮತ್ತು ಮಗುವಿನ ಜನನದ ಮೊದಲೇ ಪತಿ ಆಕೆಯನ್ನು ಬಿಟ್ಟು ಹೋಗಿರುವ ಅಂಶವನ್ನು ಕೂಡ ಕೋರ್ಟ್​ಗೆ ಹೇಳಿದ್ದರು.

Published On - 9:31 am, Tue, 2 May 23

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ