AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gang-Rape Case ಸಾಮೂಹಿಕ ಅತ್ಯಾಚಾರ ಪ್ರಕರಣ: ಹಿರಿಯ ಐಎಎಸ್‌ ಅಧಿಕಾರಿ ಅರೆಸ್ಟ್

ಸಾಮೂಹಿಕ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಪ್ರಕರಣದಲ್ಲಿ ಹಿರಿಯ ಐಎಎಸ್ ಅಧಿಕಾರಿಯನ್ನು ಎಸ್​ಐಟಿ ಅರೆಸ್ಟ್ ಮಾಡಿದೆ.

Gang-Rape Case ಸಾಮೂಹಿಕ ಅತ್ಯಾಚಾರ ಪ್ರಕರಣ: ಹಿರಿಯ ಐಎಎಸ್‌ ಅಧಿಕಾರಿ ಅರೆಸ್ಟ್
Jitendra Narain
TV9 Web
| Edited By: |

Updated on:Nov 10, 2022 | 8:14 PM

Share

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ (Gang-Rape Case) ಕೇಂದ್ರಾಡಳಿತ ಪ್ರದೇಶ ಅಂಡಮಾನ್ ಮತ್ತು ನಿಕೋಬಾರ್ (Andaman & Nicobar) ಮುಖ್ಯಕಾರ್ಯದರ್ಶಿಯಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ಜಿತೇಂದ್ರ ನರೇನ್​ ಅವರನ್ನ ಎಸ್​ಐಟಿ ಬಂಧಿಸಿದೆ. ಕೋರ್ಟ್ ಜಾಮೀನು ಅರ್ಜಿ ವಜಾ ಮಾಡಿದ ಬೆನ್ನಲ್ಲೇ ವಿಶೇಷ ತನಿಖಾ ತಂಡ (ಎಸ್‌ಐಟಿ) ಜಿತೇಂದ್ರ ನರೇನ್​ ಅವರನ್ನು ಇಂದು(ನ.10) ಅರೆಸ್ಟ್ ಮಾಡಿದೆ.

ಮುರುಘಾ ಶ್ರೀಗಳ ಮತ್ತಷ್ಟು ಕಾಮಕೂಟ ಬಿಚ್ಚಿಟ್ಟ ಆಪ್ತರು: ಅಡುಗೆಭಟ್ಟ, ಸಹಾಯಕ, ಆಫೀಸ್ ಬಾಯ್ ಹೇಳಿಕೆ ಇಲ್ಲಿದೆ

ಜಾಮೀನಿಗಾಗಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಜಿತೇಂದ್ರ ನರೈನ್​ ಪರ ವಕೀಲರಿಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಅದರಂತೆ ಜಿತೇಂದ್ರ ನರೇನ್ ಪರ ವಕೀಲರು ಸ್ಥಳೀಯ ನ್ಯಾಯಾಲಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದ್ರೆ, ಕೋರ್ಟ್ ಅವರು ಜಾಮೀನು ಅರ್ಜಿಯನ್ನು ವಜಾ ಮಾಡಿದೆ.

ಪ್ರಕರಣದ ಹಿನ್ನೆಲೆ 21 ವರ್ಷದ ಯುವತಿಯೊಬ್ಬರು ಜಿತೇಂದ್ರ ಹಾಗೂ ಕಾರ್ಮಿಕ ಆಯುಕ್ತ RL ರಿಷಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ ನಂತರ ನರೇನ್ ಹೆಸರು ಬೆಳಕಿಗೆ ಬಂದಿತ್ತು. ನರೇನ್‌ ಮತ್ತು ಕಾರ್ಮಿಕ ಆಯುಕ್ತ ಆರ್‌ ಎಲ್‌ ರಿಷಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಯುವತಿ ದೂರು ನೀಡಿದ್ದಳು.

ಹೋಟೆಲ್‌ ಮಾಲೀಕರೊಬ್ಬ ಮೂಲಕ ಯುವತಿಗೆ ರಿಷಿ ಪರಿಚಯವಾಗಿತ್ತು, ನಂತರ ರಿಷಿ ನರೇನ್‌ರ ಮನೆಗೆ ಕರೆದುಕೊಂಡು ಹೋದರು. ಅದಾದ ಬಳಿಕ ಅಲ್ಲಿ ಮದ್ಯಪಾನ ಮಾಡುವಂತೆ ನರೇನ್‌ ಹೇಳಿದರು. ಯುವತಿ ಅದನ್ನು ತಿರಸ್ಕರಿಸಿದರು. ಸರ್ಕಾರಿ ನೌಕರಿ ನೀಡುವುದಾಗಿ ಭರವಸೆ ನೀಡಿದ ಅವರು ನಂತರ ಅತ್ಯಾಚಾರ ಮಾಡಿದ್ದಾರೆ ಎಂದು ದೂರು ನೀಡಲಾಗಿತ್ತು. ಈ ದೂರಿನ ನಂತರ ತನಿಖೆ ನಡೆದಿದ್ದು ಅದರ ವರದಿಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಯುವತಿಯರನ್ನು ಇದೇ ರೀತಿ ಲೈಂಗಿಕವಾಗಿ ಬಳಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ತನಿಖೆಯಲ್ಲಿ ಆರೋಪ ಸಾಬೀತಾದ ಬೆನ್ನಲ್ಲೇ ನರೇನ್‌ರನ್ನು ಅಮಾನತ್ತು ಮಾಡಲಾಗಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:14 pm, Thu, 10 November 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?