AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ; ಎಸ್‌ಐಟಿ ತನಿಖೆ ತಾತ್ಕಾಲಿಕವಾಗಿ ಸ್ಥಗಿತ: ಆಂಧ್ರ ಡಿಜಿಪಿ

"ಮೊದಲು ಅವರು (ಎಸ್‌ಐಟಿ) ಪ್ರಕ್ರಿಯೆಯನ್ನು ಅರ್ಥಮಾಡಿಕೊಳ್ಳಬೇಕು, ಅದನ್ನು ಅಧ್ಯಯನ ಮಾಡಬೇಕು ಮತ್ತು ಎಲ್ಲಾ ಮಾಹಿತಿಯನ್ನು ತೆಗೆದುಕೊಳ್ಳಬೇಕು, ಆದರೆ ಈ ಮಧ್ಯೆ, ಸುಪ್ರೀಂಕೋರ್ಟ್‌ನಿಂದ ಆದೇಶ ಬಂದಿದೆ ಮತ್ತು ಅದಕ್ಕೆ ಅನುಗುಣವಾಗಿ ನಾವು ಅದನ್ನು (ತನಿಖೆ) ನಿಲ್ಲಿಸಿದ್ದೇವೆ" ಎಂದು ಆಂಧ್ರದ ಉನ್ನತ ಪೊಲೀಸ್ ಅಧಿಕಾರಿ ದ್ವಾರಕಾ ತಿರುಮಲ ರಾವ್ ಹೇಳಿದ್ದಾರೆ.

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ; ಎಸ್‌ಐಟಿ ತನಿಖೆ ತಾತ್ಕಾಲಿಕವಾಗಿ ಸ್ಥಗಿತ: ಆಂಧ್ರ ಡಿಜಿಪಿ
ತಿರುಪತಿ ಲಡ್ಡು
ರಶ್ಮಿ ಕಲ್ಲಕಟ್ಟ
|

Updated on: Oct 01, 2024 | 4:51 PM

Share

ದೆಹಲಿ ಅಕ್ಟೋಬರ್ 01: ತಿರುಪತಿ ಲಡ್ಡುಗಳ ಕಲಬೆರಕೆ ಪ್ರಕರಣವು ಸುಪ್ರೀಂಕೋರ್ಟ್‌ನ ವ್ಯಾಪ್ತಿಯಲ್ಲಿರುವುದರಿಂದ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಆಂಧ್ರಪ್ರದೇಶ ಡಿಜಿಪಿ ಮಂಗಳವಾರ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. “ಮೊದಲು ಅವರು (ಎಸ್‌ಐಟಿ) ಪ್ರಕ್ರಿಯೆಯನ್ನು ಅರ್ಥಮಾಡಿಕೊಳ್ಳಬೇಕು, ಅದನ್ನು ಅಧ್ಯಯನ ಮಾಡಬೇಕು ಮತ್ತು ಎಲ್ಲಾ ಮಾಹಿತಿಯನ್ನು ತೆಗೆದುಕೊಳ್ಳಬೇಕು, ಆದರೆ ಈ ಮಧ್ಯೆ, ಸುಪ್ರೀಂಕೋರ್ಟ್‌ನಿಂದ ಆದೇಶ ಬಂದಿದೆ ಮತ್ತು ಅದಕ್ಕೆ ಅನುಗುಣವಾಗಿ ನಾವು ಅದನ್ನು (ತನಿಖೆ) ನಿಲ್ಲಿಸಿದ್ದೇವೆ” ಎಂದು ಆಂಧ್ರದ ಉನ್ನತ ಪೊಲೀಸ್ ಅಧಿಕಾರಿ ದ್ವಾರಕಾ ತಿರುಮಲ ರಾವ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಸೋಮವಾರ, ಎಸ್‌ಐಟಿ ತಿರುಮಲದ ಹಿಟ್ಟಿನ ಗಿರಣಿಯಲ್ಲಿ ತುಪ್ಪವನ್ನು ಸಂಗ್ರಹಿಸಿ, ಲಡ್ಡುಗಳನ್ನು ತಯಾರಿಸಲು ಬಳಸುವ ಮೊದಲು ಲ್ಯಾಬ್‌ನಲ್ಲಿ ಪರೀಕ್ಷಿಸಲಾಯಿತು.

‘ದೇವರುಗಳನ್ನು ರಾಜಕೀಯದಿಂದ ದೂರವಿಡಿ’: ಲಡ್ಡು ವಿವಾದ ಬಗ್ಗೆ ಸುಪ್ರೀಂಕೋರ್ಟ್

ಹಿಂದಿನ ಜಗನ್ ಮೋಹನ್ ರೆಡ್ಡಿ ಸರ್ಕಾರದಲ್ಲಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿತ್ತು ಎಂಬ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಬಹಿರಂಗ ಹೇಳಿಕೆಯನ್ನು ಸೋಮವಾರ, ಸುಪ್ರೀಂಕೋರ್ಟ್ ಗಮನಿಸಿದಾಗ, ರಾಜಕೀಯದಿಂದ ದೇವರುಗಳನ್ನು ದೂರವಿಡಬೇಕು ಎಂದಿದೆ.

“ಇದು ಬಳಸಿದ ತುಪ್ಪ ಅಲ್ಲ ಎಂಬುದು ವರದಿಯಿಂದ ಸ್ಪಷ್ಟವಾಗಿದೆ, ನಿಮಗೆ ಖಚಿತವಾಗದಿದ್ದರೆ, ನೀವು ಅದನ್ನು ಹೇಗೆ ಸಾರ್ವಜನಿಕವಾಗಿ ಹೇಳಿದ್ದೀರಿ?” ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರ ಪೀಠ ಹೇಳಿದೆ.

ಇದನ್ನೂ ಓದಿ: ಸೋನಮ್ ವಾಂಗ್‌ಚುಕ್​​ನ್ನು ಪೊಲೀಸ್ ಠಾಣೆಯಲ್ಲಿ ಭೇಟಿಯಾಗಲು ಬಿಡಲಿಲ್ಲ: ದೆಹಲಿ ಸಿಎಂ ಅತಿಶಿ

ಕೇವಲ ಪ್ರಸಾದ ವಿಚಾರವಲ್ಲ: ಆಂಧ್ರ ಉಪ ಮುಖ್ಯಮಂತ್ರಿ

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್, “ಅವರು ಹಾಗೆ ಹೇಳಿದ್ದಾರೆಂದು ನಾನು ಭಾವಿಸುತ್ತೇನೆ, ಅವರು ಅದನ್ನು ಕಲಬೆರಕೆ ಮಾಡಿಲ್ಲ ಎಂದು ಅವರು ಎಂದಿಗೂ ಹೇಳಲಿಲ್ಲ. ಅವರ ಕೈಯಲ್ಲಿರುವ ಮಾಹಿತಿ ಆಧಾರದಲ್ಲಿ ಅದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದರು.

“ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಇದು ಕಲಬೆರಕೆಯಿಲ್ಲ ಎಂದು ಹೇಳಲಿಲ್ಲ, ನಮ್ಮ ಸರ್ಕಾರ ಅದನ್ನು ಮುಂದಕ್ಕೆ ಕೊಂಡೊಯ್ಯುತ್ತದೆ. ಕಳೆದ 5 ವರ್ಷಗಳಲ್ಲಿ ಯಾವ ರೀತಿಯ ಉಲ್ಲಂಘನೆಗಳು ಸಂಭವಿಸಿವೆ? ಇದು ಕೇವಲ ಪ್ರಸಾದದ ವಿಷಯವಲ್ಲ, ”ಎಂದು ಅವರು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ