AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ತಿಂಗಳ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದೆ ಜಮ್ಮು-ಕಾಶ್ಮೀರ

ದೆಹಲಿ: ಜಮ್ಮು-ಕಾಶ್ಮೀರ. ಒಂದು ಕಾಲದಲ್ಲಿ ಕಲ್ಲು ತೂರಾಟ, ಪ್ರತಿಭಟನೆ, ಸಂಘರ್ಷಗಳಿಂದಲೇ ಸುದ್ದಿಯಾಗ್ತಿದ್ದ ಕಣಿವೆ ಈಗ ಶಾಂತವಾಗಿದೆ. ಪ್ರತ್ಯೇಕತಾವಾದಿಗಳ ಬಾಲ ಕಟ್ ಆಗಿದೆ. ಕಿಡಿಗೇಡಿಗಳ ಕಾಟ ಕಮ್ಮಿ ಆಗಿದೆ. ಇದಕ್ಕೆಲ್ಲಾ ಕಾರಣ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370 ರದ್ದು ಮಾಡಿದ್ದು. ಸಹಜ ಸ್ಥಿತಿಯತ್ತ ಮರಳುತ್ತಿದೆ ಜಮ್ಮು-ಕಾಶ್ಮೀರ: ಯೆಸ್, ಆಗಸ್ಟ್ 5ರಂದು ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಬಳಿಕ ಜಮ್ಮು ಕಾಶ್ಮೀರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಮಾಜಿ ಸಿಎಂಗಳು ಸೇರಿ ಹಲವು ರಾಜಕೀಯ ಮುಖಂಡರನ್ನ ಗೃಹಬಂಧನದಲ್ಲಿ ಇಡಲಾಗಿತ್ತು. […]

5 ತಿಂಗಳ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದೆ ಜಮ್ಮು-ಕಾಶ್ಮೀರ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Jan 02, 2020 | 7:11 AM

Share

ದೆಹಲಿ: ಜಮ್ಮು-ಕಾಶ್ಮೀರ. ಒಂದು ಕಾಲದಲ್ಲಿ ಕಲ್ಲು ತೂರಾಟ, ಪ್ರತಿಭಟನೆ, ಸಂಘರ್ಷಗಳಿಂದಲೇ ಸುದ್ದಿಯಾಗ್ತಿದ್ದ ಕಣಿವೆ ಈಗ ಶಾಂತವಾಗಿದೆ. ಪ್ರತ್ಯೇಕತಾವಾದಿಗಳ ಬಾಲ ಕಟ್ ಆಗಿದೆ. ಕಿಡಿಗೇಡಿಗಳ ಕಾಟ ಕಮ್ಮಿ ಆಗಿದೆ. ಇದಕ್ಕೆಲ್ಲಾ ಕಾರಣ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370 ರದ್ದು ಮಾಡಿದ್ದು.

ಸಹಜ ಸ್ಥಿತಿಯತ್ತ ಮರಳುತ್ತಿದೆ ಜಮ್ಮು-ಕಾಶ್ಮೀರ: ಯೆಸ್, ಆಗಸ್ಟ್ 5ರಂದು ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಬಳಿಕ ಜಮ್ಮು ಕಾಶ್ಮೀರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಮಾಜಿ ಸಿಎಂಗಳು ಸೇರಿ ಹಲವು ರಾಜಕೀಯ ಮುಖಂಡರನ್ನ ಗೃಹಬಂಧನದಲ್ಲಿ ಇಡಲಾಗಿತ್ತು. ಇಂಟರ್​ನೆಟ್​, ಎಸ್​ಎಂಎಸ್​ ಸೇವೆಗಳು ಸ್ಥಗಿತಗೊಂಡಿದ್ದವು.

ಇದೆಲ್ಲಾ ಆಗಿ ಬರೋಬ್ಬರಿ 5 ತಿಂಗಳ ಬಳಿಕ ಕಣಿವೆಯಲ್ಲೀಗ ಒಂದೊಂದೇ ಸೇವೆಗಳು ಪುನಾರಂಭಗೊಳ್ತಿವೆ. ಹೊಸ ವರ್ಷದ ಮೊದಲ ದಿನವಾದ ನಿನ್ನೆ ಎಸ್​ಎಂಎಸ್​ ಮತ್ತು ಇಂಟರ್​​ನೆಟ್ ಸರ್ವಿಸ್ ಮತ್ತೆ ಆರಂಭವಾಗಿದೆ. ಹೌಸ್ ಅರೆಸ್ಟ್​ನಲ್ಲಿದ್ದ ಕೆಲ ಮುಖಂಡರನ್ನ ಬಿಡುಗಡೆ ಮಾಡಲಾಗಿದೆ. ಆದ್ರೆ, ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಮತ್ತು ಒಮರ್​ ಅಬ್ದುಲ್ಲಾಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಸಧ್ಯದಲ್ಲೇ ಇವರೂ ಕೂಡ ಗೃಹಬಂಧನದಿಂದ ಮುಕ್ತವಾಗುವ ಸಾಧ್ಯತೆ ಇದೆ.

ಇನ್ನು ಜಮ್ಮು-ಕಾಶ್ಮೀರ ಮತ್ತು ಲಡಾಖ್​ನ ವಿವಿಧ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇದ್ದ 33 ನಾನ್​ ಗೆಜೆಟೆಡ್​ ಹುದ್ದೆಗಳನ್ನ ಇಡೀ ಭಾರತೀಯರಿಗೆ ಮುಕ್ತಗೊಳಿಸಿ ಹೊರಡಿಸಿದ್ದ ನೇಮಕಾತಿ ಆದೇಶವನ್ನ ಹೈಕೋರ್ಟ್​ ಹಿಂಪಡೆದಿದೆ. ಡಿಸೆಂಬರ್ 26ರಂದು ಜಮ್ಮು-ಕಾಶ್ಮೀರ ಹೈಕೋರ್ಟ್ ಈ ಜಾಹೀರಾತು ಪ್ರಕಟಿಸಿತ್ತು. ಹೈಕೋರ್ಟ್ ನಡೆಗೆ ದೇಶದ ಜನ ಪ್ರಶಂಸೆ ವ್ಯಕ್ತಪಡಿಸಿದ್ರು. ಆದ್ರೀಗ ಇದ್ದಕ್ಕಿದ್ದಂತೆ ಅದನ್ನ ಹಿಂಪಡೆದುಕೊಂಡಿದೆ. ಒಟ್ನಲ್ಲಿ, ಅದೇನೇ ಇದ್ರೂ ವಿಶೇಷ ಸ್ಥಾನಮಾನ ರದ್ದುಗೊಂಡ ಬಳಿಕ ಒಂದ್​ ರೀತಿ ಬಂಧನದಲ್ಲಿದ್ದ ಕಣಿವೆ ನಿಧಾನವಾಗಿ ಮುಕ್ತವಾಗ್ತಿದೆ. ಸ್ಥಗಿತಕೊಂಡಿದ್ದ ವಿವಿಧ ಸೇವೆಗಳು ಒಂದೊಂದಾಗಿ ಪುನಾರಂಭಗೊಳ್ಳುತ್ತಿವೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?