AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕಂದರಾಬಾದ್‌ನಲ್ಲಿ ಅಗ್ನಿ ದುರಂತ: ಹೋಟೆಲ್​​ನಲ್ಲಿ ತಂಗಿದ್ದ 8 ಜನರ ಸಾವು, ಹಲವರಿಗೆ ಗಾಯ

ಹೈದರಾಬಾದ್​​ನ ರೂಬಿ ಹೋಟೆಲ್​​ನಲ್ಲಿ ಅಗ್ನಿ ಅವಘಡವಾಗಿದ್ದು ಮಹಿಳೆ ಸೇರಿದಂತೆ 8 ಜನರು ಮೃತಪಟ್ಟಿದ್ದಾರೆ. 10 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಗಾಂಧಿ ಆಸ್ಪತ್ರೆ ಮತ್ತು ಇತರ ಹತ್ತಿರದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಿಕಂದರಾಬಾದ್‌ನಲ್ಲಿ ಅಗ್ನಿ ದುರಂತ: ಹೋಟೆಲ್​​ನಲ್ಲಿ ತಂಗಿದ್ದ 8 ಜನರ ಸಾವು, ಹಲವರಿಗೆ ಗಾಯ
ಸಿಕಂದರಾಬಾದ್‌ನಲ್ಲಿ ಅಗ್ನಿ ದುರಂತ
TV9 Web
| Edited By: ಆಯೇಷಾ ಬಾನು|

Updated on:Sep 13, 2022 | 9:09 AM

Share

ಹೈದರಾಬಾದ್: ಸೋಮವಾರ ತಡರಾತ್ರಿ ಹೈದರಾಬಾದ್​ನ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿಕಂದರಾಬಾದ್‌ನಲ್ಲಿ ಅಗ್ನಿ ದುರಂತ ಸಂಭವಿಸಿದೆ. ರೂಬಿ ಹೋಟೆಲ್​​ನಲ್ಲಿ(Hotel Fire) ಆದ ಅಗ್ನಿ ಅವಘಡದಲ್ಲಿ 6 ಜನರು ಮೃತಪಟ್ಟಿದ್ದಾರೆ. ಹಾಗೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು, ಹೈದರಾಬಾದ್ ನಗರ ಪೊಲೀಸ್ ಆಯುಕ್ತ ಸಿ.ವಿ.ಆನಂದ್ ಅಪಘಾತ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಅಗ್ನಿ ದುರಂತದಲ್ಲಿ ಮಹಿಳೆ ಸೇರಿದಂತೆ 8 ಜನರು ಮೃತಪಟ್ಟಿದ್ದು 10 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಗಾಂಧಿ ಆಸ್ಪತ್ರೆ ಮತ್ತು ಇತರ ಹತ್ತಿರದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಟ್ಟಡದ ಗ್ರೌಂಡ್​​ ಫ್ಲೋರ್​​ನಲ್ಲಿನ ಎಲೆಕ್ಟ್ರಿಕ್ ವೆಹಿಕಲ್ ಶೋರೂಂನಲ್ಲಿ ಬ್ಯಾಟರಿ ಸ್ಫೋಟಗೊಂಡು ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಈ ಪರಿಣಾಮ ಕಟ್ಟಡದ ಮೇಲಿನ ಮಹಡಿಯಲ್ಲಿದ್ದ ಹೋಟೆಲ್​​ನಲ್ಲೂ ಅವಘಡ ಸಂಭವಿಸಿದೆ. ಹೋಟೆಲ್​​ನಲ್ಲಿ 25-30 ಪ್ರವಾಸಿಗರು ತಂಗಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಪೈಕಿ 8 ಜನರು ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ರಕ್ಷಣಾ ಸಿಬ್ಬಂದಿ ಹಲವರನ್ನ ಹೋಟೆಲ್​​ನಿಂದ ರಕ್ಷಿಸುವಲ್ಲಿ ಸಫಲರಾಗಿದ್ದಾರೆ. 2 ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿವೆ.

ಇನ್ನು ಅಧಿಕಾರಿಗಳು ಎಲ್ಲಾ ಮಹಡಿಗಳನ್ನು ಪರಿಶೀಲಿಸಿದ ನಂತರ, 8 ಜನರು ಮೃತಪಟ್ಟಿದ್ದಾರೆ. ಹಾಗೂ 5 ಮೃತದೇಹಗಳನ್ನು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ನೀಡಿದರು. ಗಾಯಾಳುಗಳನ್ನು ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಯಶೋದಾ ಆಸ್ಪತ್ರೆಯ ಹಿರಿಯ ಸಿಬ್ಬಂದಿ ತಿಳಿಸಿದ್ದಾರೆ.

ಕೆಲವು ಸ್ಥಳೀಯರು ಶೋರೂಮ್‌ನಿಂದ ಹೊಗೆ ಹೊರ ಬರುವುತ್ತಿರುವುದನ್ನು ಗಮನಿಸಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಬಳಿಕ ಮಾರ್ಕೆಟ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಂಜನೇಯುಲು ತಮ್ಮ ಸಿಬ್ಬಂದಿಯೊಂದಿಗೆ ಹಾಗೂ ಕೆಲವು ಯುವಕರು ಪಕ್ಕದ ಹೋಟೆಲ್ ನಿಂದ ಕಟ್ಟಡದ ಮೇಲಿನ ಮಹಡಿಗೆ ತೆರಳಿ ಅವಘಡ ಸಂಭವಿಸಿದ ಹೋಟೆಲ್​ ಒಳಗೆ ಹೋಗಿದ್ದಾರೆ. ಅಲ್ಲಿ ಕಾರಿಡಾರ್‌ನಲ್ಲಿ ಕೆಲವು ಅತಿಥಿಗಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡಿದ್ದಾರೆ. ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಯುವಕರು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ತಕ್ಷಣ ಕೆಲವರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು.

ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ

ಇನ್ನು ಸಿಕಂದರಾಬಾದ್​​ನಲ್ಲಿ ಹೋಟೆಲ್​​ನಲ್ಲಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿ ಟ್ವಿಟರ್​​ನಲ್ಲಿ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:46 am, Tue, 13 September 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ