AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Visakhapatnam Encounter: ವಿಶಾಖಪಟ್ಟಣಂನಲ್ಲಿ 6 ಮಂದಿ ನಕ್ಸಲರ ಹತ್ಯೆ ಮಾಡಿದ ಗ್ರೇಹೌಂಡ್ಸ್ ಪೊಲೀಸ್​ ಪಡೆ; ಬೆಳಗ್ಗೆಯಿಂದಲೂ ಕಾರ್ಯಾಚರಣೆ

Naxal in Andhra Pradesh: ಪೊಲೀಸ್​ ಸಿಬ್ಬಂದಿ ಜೀವಕ್ಕೆ ಯಾವುದೇ ಅಪಾಯವಾಗಿಲ್ಲ. ಈ ಎನ್​ಕೌಂಟರ್ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಇಂದು ಸಂಜೆ ವೇಳೆಗೆ ತಿಳಿಸಲಾಗುವುದು ಎಂದು ಎಸ್​ಪಿ ಬಿವಿ ಕೃಷ್ಣರಾವ್​ ತಿಳಿಸಿದ್ದಾರೆ.

Visakhapatnam Encounter: ವಿಶಾಖಪಟ್ಟಣಂನಲ್ಲಿ 6 ಮಂದಿ ನಕ್ಸಲರ ಹತ್ಯೆ ಮಾಡಿದ ಗ್ರೇಹೌಂಡ್ಸ್ ಪೊಲೀಸ್​ ಪಡೆ; ಬೆಳಗ್ಗೆಯಿಂದಲೂ ಕಾರ್ಯಾಚರಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 16, 2021 | 3:50 PM

Share

ವಿಶಾಖಪಟ್ಟಣಂನಲ್ಲಿ ಇಂದು ಆರು ಮಂದಿ ನಕ್ಸಲರನ್ನು ಗ್ರೇಹೌಂಡ್ಸ್ ಪೊಲೀಸ್​ ಪಡೆ ಹೊಡೆದುರುಳಿಸಿದೆ. ಇಂದು ಬೆಳಗ್ಗೆಯಿಂದಲೂ ಮಾವೋವಾದಿಗಳು ಮತ್ತು ಪೊಲೀಸ್​ ಸಿಬ್ಬಂದಿ ನಡುವೆ ಗುಂಡಿನ ವಿನಿಮಯ ನಡೆಯುತ್ತಿತ್ತು. ಈ ಎನ್​ಕೌಂಟರ್​​ನಲ್ಲಿ ಆರು ಮಂದಿ ನಕ್ಸಲರನ್ನು ಗ್ರೇಹೌಂಡ್ಸ್​ ಪೊಲೀಸರು ಹತ್ಯೆಗೈದಿದ್ದಾರೆ ಎಂದು ವಿಶಾಖ ಗ್ರಾಮೀಣ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಬಿ.ವಿ.ಕೃಷ್ಣರಾವ್​ ತಿಳಿಸಿದ್ದಾರೆ.

ಆ್ಯಂಟಿ ನಕ್ಸಲ್​ ವಿಶೇಷ ಪಡೆ ಗ್ರೇಹೌಂಡ್ಸ್​ ಪೊಲೀಸರು ಮತ್ತು ಸಿಪಿಐ (ಮಾವೋವಾದಿಗಳು) ಸಿಬ್ಬಂದಿ ನಡುವೆ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಮಾಂಪಾದಲ್ಲಿರುವ ಕೊಯಿರು ಸುತ್ತಲಿನ ಅರಣ್ಯಪ್ರದೇಶವಾದ ತೀಲಗಮೆಟ್ಟದಲ್ಲಿ ಬೆಳಗ್ಗೆ ಗುಂಡಿನಚಕಮಕಿ ನಡೆದಿತ್ತು. ಆರು ಮಂದಿ ಮೃತಪಟ್ಟವರಲ್ಲಿ ಮಹಿಳಾ ನಕ್ಸಲರೂ ಸೇರಿದ್ದಾರೆ. ಮೃತಪಟ್ಟವರ ಬಳಿಯಿದ್ದ ಒಂದು ಎಕೆ 47, ಮೂರು 303 ರೈಫಲ್ಸ್​, ಒಂದು ಎಸ್​ಎಲ್​ಆರ್​ ಸೇರಿ ಹಲವು ವಿಧದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕೃಷ್ಣರಾವ್​ ಮಾಹಿತಿ ನೀಡಿದ್ದಾರೆ.

ಪೊಲೀಸ್​ ಸಿಬ್ಬಂದಿ ಜೀವಕ್ಕೆ ಯಾವುದೇ ಅಪಾಯವಾಗಿಲ್ಲ. ಈ ಎನ್​ಕೌಂಟರ್ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಇಂದು ಸಂಜೆ ವೇಳೆಗೆ ತಿಳಿಸಲಾಗುವುದು ಎಂದು ಹೇಳಿದ್ದಾರೆ. ಇತ್ತೀಚೆಗೆ ನಕ್ಸಲರ ಹಾವಳಿ ಜಾಸ್ತಿಯಾಗುತ್ತಿದೆ. ಛತ್ತೀಸ್​ಗಢ್​​ನಲ್ಲಂತೂ ನಕ್ಸಲರ ದಾಳಿಗೆ ಅದೆಷ್ಟೋ ಪೊಲೀಸರು ಜೀವಕಳೆದುಕೊಳ್ಳುತ್ತಿದ್ದಾರೆ. ಈ ಮಧ್ಯೆ ಆ್ಯಂಟಿ ನಕ್ಸಲ್​​ ಪಡೆಗಳು ತಮ್ಮ ಕಾರ್ಯವನ್ನು ಚುರುಕುಗೊಳಿಸಿವೆ.

ಇದನ್ನೂ ಓದಿ: ಡ್ರಗ್ಸ್ ವಿಚಾರದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ; ನನಗೆ ಕಾಸ್ಟಿಂಗ್ ಕೌಚ್ ಎಕ್ಸ್​​ಪೀರಿಯನ್ಸ್ ಆಗಿಲ್ಲ: ರಾಗಿಣಿ ದ್ವಿವೇದಿ

Six Naxals killed in by Greyhounds police in Visakhapatnam

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ