AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Visakhapatnam Encounter: ವಿಶಾಖಪಟ್ಟಣಂನಲ್ಲಿ 6 ಮಂದಿ ನಕ್ಸಲರ ಹತ್ಯೆ ಮಾಡಿದ ಗ್ರೇಹೌಂಡ್ಸ್ ಪೊಲೀಸ್​ ಪಡೆ; ಬೆಳಗ್ಗೆಯಿಂದಲೂ ಕಾರ್ಯಾಚರಣೆ

Naxal in Andhra Pradesh: ಪೊಲೀಸ್​ ಸಿಬ್ಬಂದಿ ಜೀವಕ್ಕೆ ಯಾವುದೇ ಅಪಾಯವಾಗಿಲ್ಲ. ಈ ಎನ್​ಕೌಂಟರ್ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಇಂದು ಸಂಜೆ ವೇಳೆಗೆ ತಿಳಿಸಲಾಗುವುದು ಎಂದು ಎಸ್​ಪಿ ಬಿವಿ ಕೃಷ್ಣರಾವ್​ ತಿಳಿಸಿದ್ದಾರೆ.

Visakhapatnam Encounter: ವಿಶಾಖಪಟ್ಟಣಂನಲ್ಲಿ 6 ಮಂದಿ ನಕ್ಸಲರ ಹತ್ಯೆ ಮಾಡಿದ ಗ್ರೇಹೌಂಡ್ಸ್ ಪೊಲೀಸ್​ ಪಡೆ; ಬೆಳಗ್ಗೆಯಿಂದಲೂ ಕಾರ್ಯಾಚರಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 16, 2021 | 3:50 PM

Share

ವಿಶಾಖಪಟ್ಟಣಂನಲ್ಲಿ ಇಂದು ಆರು ಮಂದಿ ನಕ್ಸಲರನ್ನು ಗ್ರೇಹೌಂಡ್ಸ್ ಪೊಲೀಸ್​ ಪಡೆ ಹೊಡೆದುರುಳಿಸಿದೆ. ಇಂದು ಬೆಳಗ್ಗೆಯಿಂದಲೂ ಮಾವೋವಾದಿಗಳು ಮತ್ತು ಪೊಲೀಸ್​ ಸಿಬ್ಬಂದಿ ನಡುವೆ ಗುಂಡಿನ ವಿನಿಮಯ ನಡೆಯುತ್ತಿತ್ತು. ಈ ಎನ್​ಕೌಂಟರ್​​ನಲ್ಲಿ ಆರು ಮಂದಿ ನಕ್ಸಲರನ್ನು ಗ್ರೇಹೌಂಡ್ಸ್​ ಪೊಲೀಸರು ಹತ್ಯೆಗೈದಿದ್ದಾರೆ ಎಂದು ವಿಶಾಖ ಗ್ರಾಮೀಣ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಬಿ.ವಿ.ಕೃಷ್ಣರಾವ್​ ತಿಳಿಸಿದ್ದಾರೆ.

ಆ್ಯಂಟಿ ನಕ್ಸಲ್​ ವಿಶೇಷ ಪಡೆ ಗ್ರೇಹೌಂಡ್ಸ್​ ಪೊಲೀಸರು ಮತ್ತು ಸಿಪಿಐ (ಮಾವೋವಾದಿಗಳು) ಸಿಬ್ಬಂದಿ ನಡುವೆ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಮಾಂಪಾದಲ್ಲಿರುವ ಕೊಯಿರು ಸುತ್ತಲಿನ ಅರಣ್ಯಪ್ರದೇಶವಾದ ತೀಲಗಮೆಟ್ಟದಲ್ಲಿ ಬೆಳಗ್ಗೆ ಗುಂಡಿನಚಕಮಕಿ ನಡೆದಿತ್ತು. ಆರು ಮಂದಿ ಮೃತಪಟ್ಟವರಲ್ಲಿ ಮಹಿಳಾ ನಕ್ಸಲರೂ ಸೇರಿದ್ದಾರೆ. ಮೃತಪಟ್ಟವರ ಬಳಿಯಿದ್ದ ಒಂದು ಎಕೆ 47, ಮೂರು 303 ರೈಫಲ್ಸ್​, ಒಂದು ಎಸ್​ಎಲ್​ಆರ್​ ಸೇರಿ ಹಲವು ವಿಧದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕೃಷ್ಣರಾವ್​ ಮಾಹಿತಿ ನೀಡಿದ್ದಾರೆ.

ಪೊಲೀಸ್​ ಸಿಬ್ಬಂದಿ ಜೀವಕ್ಕೆ ಯಾವುದೇ ಅಪಾಯವಾಗಿಲ್ಲ. ಈ ಎನ್​ಕೌಂಟರ್ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಇಂದು ಸಂಜೆ ವೇಳೆಗೆ ತಿಳಿಸಲಾಗುವುದು ಎಂದು ಹೇಳಿದ್ದಾರೆ. ಇತ್ತೀಚೆಗೆ ನಕ್ಸಲರ ಹಾವಳಿ ಜಾಸ್ತಿಯಾಗುತ್ತಿದೆ. ಛತ್ತೀಸ್​ಗಢ್​​ನಲ್ಲಂತೂ ನಕ್ಸಲರ ದಾಳಿಗೆ ಅದೆಷ್ಟೋ ಪೊಲೀಸರು ಜೀವಕಳೆದುಕೊಳ್ಳುತ್ತಿದ್ದಾರೆ. ಈ ಮಧ್ಯೆ ಆ್ಯಂಟಿ ನಕ್ಸಲ್​​ ಪಡೆಗಳು ತಮ್ಮ ಕಾರ್ಯವನ್ನು ಚುರುಕುಗೊಳಿಸಿವೆ.

ಇದನ್ನೂ ಓದಿ: ಡ್ರಗ್ಸ್ ವಿಚಾರದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ; ನನಗೆ ಕಾಸ್ಟಿಂಗ್ ಕೌಚ್ ಎಕ್ಸ್​​ಪೀರಿಯನ್ಸ್ ಆಗಿಲ್ಲ: ರಾಗಿಣಿ ದ್ವಿವೇದಿ

Six Naxals killed in by Greyhounds police in Visakhapatnam

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ