AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Visakhapatnam Encounter: ವಿಶಾಖಪಟ್ಟಣಂನಲ್ಲಿ 6 ಮಂದಿ ನಕ್ಸಲರ ಹತ್ಯೆ ಮಾಡಿದ ಗ್ರೇಹೌಂಡ್ಸ್ ಪೊಲೀಸ್​ ಪಡೆ; ಬೆಳಗ್ಗೆಯಿಂದಲೂ ಕಾರ್ಯಾಚರಣೆ

Naxal in Andhra Pradesh: ಪೊಲೀಸ್​ ಸಿಬ್ಬಂದಿ ಜೀವಕ್ಕೆ ಯಾವುದೇ ಅಪಾಯವಾಗಿಲ್ಲ. ಈ ಎನ್​ಕೌಂಟರ್ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಇಂದು ಸಂಜೆ ವೇಳೆಗೆ ತಿಳಿಸಲಾಗುವುದು ಎಂದು ಎಸ್​ಪಿ ಬಿವಿ ಕೃಷ್ಣರಾವ್​ ತಿಳಿಸಿದ್ದಾರೆ.

Visakhapatnam Encounter: ವಿಶಾಖಪಟ್ಟಣಂನಲ್ಲಿ 6 ಮಂದಿ ನಕ್ಸಲರ ಹತ್ಯೆ ಮಾಡಿದ ಗ್ರೇಹೌಂಡ್ಸ್ ಪೊಲೀಸ್​ ಪಡೆ; ಬೆಳಗ್ಗೆಯಿಂದಲೂ ಕಾರ್ಯಾಚರಣೆ
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on: Jun 16, 2021 | 3:50 PM

Share

ವಿಶಾಖಪಟ್ಟಣಂನಲ್ಲಿ ಇಂದು ಆರು ಮಂದಿ ನಕ್ಸಲರನ್ನು ಗ್ರೇಹೌಂಡ್ಸ್ ಪೊಲೀಸ್​ ಪಡೆ ಹೊಡೆದುರುಳಿಸಿದೆ. ಇಂದು ಬೆಳಗ್ಗೆಯಿಂದಲೂ ಮಾವೋವಾದಿಗಳು ಮತ್ತು ಪೊಲೀಸ್​ ಸಿಬ್ಬಂದಿ ನಡುವೆ ಗುಂಡಿನ ವಿನಿಮಯ ನಡೆಯುತ್ತಿತ್ತು. ಈ ಎನ್​ಕೌಂಟರ್​​ನಲ್ಲಿ ಆರು ಮಂದಿ ನಕ್ಸಲರನ್ನು ಗ್ರೇಹೌಂಡ್ಸ್​ ಪೊಲೀಸರು ಹತ್ಯೆಗೈದಿದ್ದಾರೆ ಎಂದು ವಿಶಾಖ ಗ್ರಾಮೀಣ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಬಿ.ವಿ.ಕೃಷ್ಣರಾವ್​ ತಿಳಿಸಿದ್ದಾರೆ.

ಆ್ಯಂಟಿ ನಕ್ಸಲ್​ ವಿಶೇಷ ಪಡೆ ಗ್ರೇಹೌಂಡ್ಸ್​ ಪೊಲೀಸರು ಮತ್ತು ಸಿಪಿಐ (ಮಾವೋವಾದಿಗಳು) ಸಿಬ್ಬಂದಿ ನಡುವೆ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಮಾಂಪಾದಲ್ಲಿರುವ ಕೊಯಿರು ಸುತ್ತಲಿನ ಅರಣ್ಯಪ್ರದೇಶವಾದ ತೀಲಗಮೆಟ್ಟದಲ್ಲಿ ಬೆಳಗ್ಗೆ ಗುಂಡಿನಚಕಮಕಿ ನಡೆದಿತ್ತು. ಆರು ಮಂದಿ ಮೃತಪಟ್ಟವರಲ್ಲಿ ಮಹಿಳಾ ನಕ್ಸಲರೂ ಸೇರಿದ್ದಾರೆ. ಮೃತಪಟ್ಟವರ ಬಳಿಯಿದ್ದ ಒಂದು ಎಕೆ 47, ಮೂರು 303 ರೈಫಲ್ಸ್​, ಒಂದು ಎಸ್​ಎಲ್​ಆರ್​ ಸೇರಿ ಹಲವು ವಿಧದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕೃಷ್ಣರಾವ್​ ಮಾಹಿತಿ ನೀಡಿದ್ದಾರೆ.

ಪೊಲೀಸ್​ ಸಿಬ್ಬಂದಿ ಜೀವಕ್ಕೆ ಯಾವುದೇ ಅಪಾಯವಾಗಿಲ್ಲ. ಈ ಎನ್​ಕೌಂಟರ್ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಇಂದು ಸಂಜೆ ವೇಳೆಗೆ ತಿಳಿಸಲಾಗುವುದು ಎಂದು ಹೇಳಿದ್ದಾರೆ. ಇತ್ತೀಚೆಗೆ ನಕ್ಸಲರ ಹಾವಳಿ ಜಾಸ್ತಿಯಾಗುತ್ತಿದೆ. ಛತ್ತೀಸ್​ಗಢ್​​ನಲ್ಲಂತೂ ನಕ್ಸಲರ ದಾಳಿಗೆ ಅದೆಷ್ಟೋ ಪೊಲೀಸರು ಜೀವಕಳೆದುಕೊಳ್ಳುತ್ತಿದ್ದಾರೆ. ಈ ಮಧ್ಯೆ ಆ್ಯಂಟಿ ನಕ್ಸಲ್​​ ಪಡೆಗಳು ತಮ್ಮ ಕಾರ್ಯವನ್ನು ಚುರುಕುಗೊಳಿಸಿವೆ.

ಇದನ್ನೂ ಓದಿ: ಡ್ರಗ್ಸ್ ವಿಚಾರದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ; ನನಗೆ ಕಾಸ್ಟಿಂಗ್ ಕೌಚ್ ಎಕ್ಸ್​​ಪೀರಿಯನ್ಸ್ ಆಗಿಲ್ಲ: ರಾಗಿಣಿ ದ್ವಿವೇದಿ

Six Naxals killed in by Greyhounds police in Visakhapatnam

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ