AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಇಡಿ ಸ್ಫೋಟಿಸಿ ಭದ್ರತಾ ಸಿಬ್ಬಂದಿ ಹತ್ಯೆಗೆ ಸ್ಕೆಚ್​ ಹಾಕಿದ್ದ 6 ಮಂದಿ ನಕ್ಸಲರನ್ನು ಕೊಂದ ಪೊಲೀಸರು

ಮೃತಪಟ್ಟ ಆರು ಮಂದಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಇವರೆಲ್ಲ ಚೆರ್ಲಾ ಪ್ರದೇಶ ಸಮಿತಿಯವರು ಎಂದು ಹೇಳಲಾಗಿದ್ದು, ನಕ್ಸಲರ ಹಿರಿಯ ನಾಯಕರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಐಇಡಿ ಸ್ಫೋಟಿಸಿ ಭದ್ರತಾ ಸಿಬ್ಬಂದಿ ಹತ್ಯೆಗೆ ಸ್ಕೆಚ್​ ಹಾಕಿದ್ದ 6 ಮಂದಿ ನಕ್ಸಲರನ್ನು ಕೊಂದ ಪೊಲೀಸರು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 27, 2021 | 11:38 AM

Share

ಛತ್ತೀಸ್​ಗಢ್​: ತೆಲಂಗಾಣ ಮತ್ತು ಛತ್ತೀಸ್​ಗಢ್​  ಗಡಿ ಪ್ರದೇಶದ ಕಿಸ್ತಾರಾಮ್ ಪಿಎಸ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆರು ಮಂದಿ ನಕ್ಸಲರನ್ನು ಪೊಲೀಸರು ಹತ್ಯೆ (Naxals killed) ಮಾಡಿದ್ದಾರೆ. ಛತ್ತೀಸ್​ಗಢ್​ ಮತ್ತು ತೆಲಂಗಾಣ ಪೊಲೀಸರು ಹಾಗೂ ಸಿಆರ್​ಪಿಎಫ್​ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು ಎಂದು ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಎಸ್​ಪಿ ಸುನಿಲ್​ ದತ್ತ ತಿಳಿಸಿದ್ದಾರೆ. ಸದ್ಯ ಸ್ಥಳದಲ್ಲಿ ಇನ್ನೂ ನಕ್ಸಲ್​ ವಿರೋಧಿ ಕಾರ್ಯಾಚರಣೆ ನಡೆಯುತ್ತಲೇ ಇದೆ ಎಂದು ಮೂಲಗಳು ತಿಳಿಸಿವೆ.

ಛತ್ತೀಸ್​ಗಢ್​​ನಲ್ಲಿ ನಕ್ಸಲ್​ರ ಕಾಟ ಯಾವಾಗಲೂ ಹೆಚ್ಚು. ಇಲ್ಲಿ ಅದೆಷ್ಟೋ ಮುಗ್ಧ ನಾಗರಿಕರು, ಪೊಲಿಸ್​, ರಕ್ಷಣಾ ಸಿಬ್ಬಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಇಲ್ಲಿ ಪದೇಪದೆ ನಕ್ಸಲರು ಮತ್ತು ರಕ್ಷಣಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ ನಡೆಯುತ್ತಲೇ ಇರುತ್ತದೆ. ಹಾಗೇ ನಿನ್ನೆ ತೆಲಂಗಾಣ ಗ್ರೇ ಹೌಂಡ್ಸ್​ ಪೊಲೀಸರು ಮತ್ತು ನಕ್ಸಲರ ನಡುವೆ ಎನ್​ಕೌಂಟರ್​ ಶುರುವಾಗಿತ್ತು. ಮೊದಲು ಛತ್ತೀಸ್​ಗಢ್​​ನ ನಾರಾಯಣಪುರ ಜಿಲ್ಲೆಯಲ್ಲಿ ತೆಲಂಗಾಣ ಪೊಲೀಸರು ಎರಡು ಸುಧಾರಿತ ಸ್ಫೋಟಕ ಸಾಧಕ (IED)ಗಳನ್ನು ವಶಪಡಿಸಿಕೊಂಡರು. ಅದರ ಬೆನ್ನಲ್ಲೇ  ಆ್ಯಂಟಿ-ನಕ್ಸಲ್​ ಕಾರ್ಯಾಚರಣೆ ಪ್ರಾರಂಭವಾಗಿತ್ತು. ಅಂದಹಾಗೆ ನಕ್ಸಲರು ಈ ಐಇಡಿಯನ್ನು ಭದ್ರತಾ ಸಿಬ್ಬಂದಿಯನ್ನು ಟಾರ್ಗೆಟ್​ ಮಾಡಿಯೇ ಇಟ್ಟಿದ್ದರು ಎಂದು ಹೇಳಲಾಗಿದೆ.

ಮೃತಪಟ್ಟ ಆರು ಮಂದಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಇವರೆಲ್ಲ ಚೆರ್ಲಾ ಪ್ರದೇಶ ಸಮಿತಿಯವರು ಎಂದು ಹೇಳಲಾಗಿದ್ದು, ನಕ್ಸಲರ ಹಿರಿಯ ನಾಯಕರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  ನಿನ್ನೆಯಿಂದಲೂ ನಕ್ಸಲರು ಭದ್ರತಾ ಸಿಬ್ಬಂದಿ ಮೇಲೆ ದಾಳಿ ನಡೆಸಲು ಹೊಂಚು ಹಾಕುತ್ತಿದ್ದರು. ಐಇಡಿ ಸ್ಫೋಟಕ್ಕೂ ಮೊದಲು ಅವರ ಸಂಚಿನ ಸುಳಿವು ಸಿಕ್ಕಿದೆ. ಇಲ್ಲದೆ ಇದ್ದರೆ ಭದ್ರತಾ ಸಿಬ್ಬಂದಿ ಪ್ರಾಣಕ್ಕೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿತ್ತು ಎಂದು ಸುನಿಲ್​ ದತ್ತ ತಿಳಿಸಿದ್ದಾರೆ.

ಇದನ್ನೂ ಓದಿ: GST: ಹೊಸ ವರ್ಷಕ್ಕೆ ಮತ್ತೊಂದು ಶಾಕಿಂಗ್ ನ್ಯೂಸ್: ಜ. 1 ರಿಂದ ಓಲಾ, ಉಬರ್‌, ಸ್ವಿಗ್ಗಿ, ಜೊಮ್ಯಾಟೋ ಸೇವೆ ದುಬಾರಿ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​