Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಇಡಿ ಸ್ಫೋಟಿಸಿ ಭದ್ರತಾ ಸಿಬ್ಬಂದಿ ಹತ್ಯೆಗೆ ಸ್ಕೆಚ್​ ಹಾಕಿದ್ದ 6 ಮಂದಿ ನಕ್ಸಲರನ್ನು ಕೊಂದ ಪೊಲೀಸರು

ಮೃತಪಟ್ಟ ಆರು ಮಂದಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಇವರೆಲ್ಲ ಚೆರ್ಲಾ ಪ್ರದೇಶ ಸಮಿತಿಯವರು ಎಂದು ಹೇಳಲಾಗಿದ್ದು, ನಕ್ಸಲರ ಹಿರಿಯ ನಾಯಕರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಐಇಡಿ ಸ್ಫೋಟಿಸಿ ಭದ್ರತಾ ಸಿಬ್ಬಂದಿ ಹತ್ಯೆಗೆ ಸ್ಕೆಚ್​ ಹಾಕಿದ್ದ 6 ಮಂದಿ ನಕ್ಸಲರನ್ನು ಕೊಂದ ಪೊಲೀಸರು
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Dec 27, 2021 | 11:38 AM

ಛತ್ತೀಸ್​ಗಢ್​: ತೆಲಂಗಾಣ ಮತ್ತು ಛತ್ತೀಸ್​ಗಢ್​  ಗಡಿ ಪ್ರದೇಶದ ಕಿಸ್ತಾರಾಮ್ ಪಿಎಸ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆರು ಮಂದಿ ನಕ್ಸಲರನ್ನು ಪೊಲೀಸರು ಹತ್ಯೆ (Naxals killed) ಮಾಡಿದ್ದಾರೆ. ಛತ್ತೀಸ್​ಗಢ್​ ಮತ್ತು ತೆಲಂಗಾಣ ಪೊಲೀಸರು ಹಾಗೂ ಸಿಆರ್​ಪಿಎಫ್​ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು ಎಂದು ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಎಸ್​ಪಿ ಸುನಿಲ್​ ದತ್ತ ತಿಳಿಸಿದ್ದಾರೆ. ಸದ್ಯ ಸ್ಥಳದಲ್ಲಿ ಇನ್ನೂ ನಕ್ಸಲ್​ ವಿರೋಧಿ ಕಾರ್ಯಾಚರಣೆ ನಡೆಯುತ್ತಲೇ ಇದೆ ಎಂದು ಮೂಲಗಳು ತಿಳಿಸಿವೆ.

ಛತ್ತೀಸ್​ಗಢ್​​ನಲ್ಲಿ ನಕ್ಸಲ್​ರ ಕಾಟ ಯಾವಾಗಲೂ ಹೆಚ್ಚು. ಇಲ್ಲಿ ಅದೆಷ್ಟೋ ಮುಗ್ಧ ನಾಗರಿಕರು, ಪೊಲಿಸ್​, ರಕ್ಷಣಾ ಸಿಬ್ಬಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಇಲ್ಲಿ ಪದೇಪದೆ ನಕ್ಸಲರು ಮತ್ತು ರಕ್ಷಣಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ ನಡೆಯುತ್ತಲೇ ಇರುತ್ತದೆ. ಹಾಗೇ ನಿನ್ನೆ ತೆಲಂಗಾಣ ಗ್ರೇ ಹೌಂಡ್ಸ್​ ಪೊಲೀಸರು ಮತ್ತು ನಕ್ಸಲರ ನಡುವೆ ಎನ್​ಕೌಂಟರ್​ ಶುರುವಾಗಿತ್ತು. ಮೊದಲು ಛತ್ತೀಸ್​ಗಢ್​​ನ ನಾರಾಯಣಪುರ ಜಿಲ್ಲೆಯಲ್ಲಿ ತೆಲಂಗಾಣ ಪೊಲೀಸರು ಎರಡು ಸುಧಾರಿತ ಸ್ಫೋಟಕ ಸಾಧಕ (IED)ಗಳನ್ನು ವಶಪಡಿಸಿಕೊಂಡರು. ಅದರ ಬೆನ್ನಲ್ಲೇ  ಆ್ಯಂಟಿ-ನಕ್ಸಲ್​ ಕಾರ್ಯಾಚರಣೆ ಪ್ರಾರಂಭವಾಗಿತ್ತು. ಅಂದಹಾಗೆ ನಕ್ಸಲರು ಈ ಐಇಡಿಯನ್ನು ಭದ್ರತಾ ಸಿಬ್ಬಂದಿಯನ್ನು ಟಾರ್ಗೆಟ್​ ಮಾಡಿಯೇ ಇಟ್ಟಿದ್ದರು ಎಂದು ಹೇಳಲಾಗಿದೆ.

ಮೃತಪಟ್ಟ ಆರು ಮಂದಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಇವರೆಲ್ಲ ಚೆರ್ಲಾ ಪ್ರದೇಶ ಸಮಿತಿಯವರು ಎಂದು ಹೇಳಲಾಗಿದ್ದು, ನಕ್ಸಲರ ಹಿರಿಯ ನಾಯಕರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  ನಿನ್ನೆಯಿಂದಲೂ ನಕ್ಸಲರು ಭದ್ರತಾ ಸಿಬ್ಬಂದಿ ಮೇಲೆ ದಾಳಿ ನಡೆಸಲು ಹೊಂಚು ಹಾಕುತ್ತಿದ್ದರು. ಐಇಡಿ ಸ್ಫೋಟಕ್ಕೂ ಮೊದಲು ಅವರ ಸಂಚಿನ ಸುಳಿವು ಸಿಕ್ಕಿದೆ. ಇಲ್ಲದೆ ಇದ್ದರೆ ಭದ್ರತಾ ಸಿಬ್ಬಂದಿ ಪ್ರಾಣಕ್ಕೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿತ್ತು ಎಂದು ಸುನಿಲ್​ ದತ್ತ ತಿಳಿಸಿದ್ದಾರೆ.

ಇದನ್ನೂ ಓದಿ: GST: ಹೊಸ ವರ್ಷಕ್ಕೆ ಮತ್ತೊಂದು ಶಾಕಿಂಗ್ ನ್ಯೂಸ್: ಜ. 1 ರಿಂದ ಓಲಾ, ಉಬರ್‌, ಸ್ವಿಗ್ಗಿ, ಜೊಮ್ಯಾಟೋ ಸೇವೆ ದುಬಾರಿ

ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್