AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಇಡಿ ಸ್ಫೋಟಿಸಿ ಭದ್ರತಾ ಸಿಬ್ಬಂದಿ ಹತ್ಯೆಗೆ ಸ್ಕೆಚ್​ ಹಾಕಿದ್ದ 6 ಮಂದಿ ನಕ್ಸಲರನ್ನು ಕೊಂದ ಪೊಲೀಸರು

ಮೃತಪಟ್ಟ ಆರು ಮಂದಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಇವರೆಲ್ಲ ಚೆರ್ಲಾ ಪ್ರದೇಶ ಸಮಿತಿಯವರು ಎಂದು ಹೇಳಲಾಗಿದ್ದು, ನಕ್ಸಲರ ಹಿರಿಯ ನಾಯಕರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಐಇಡಿ ಸ್ಫೋಟಿಸಿ ಭದ್ರತಾ ಸಿಬ್ಬಂದಿ ಹತ್ಯೆಗೆ ಸ್ಕೆಚ್​ ಹಾಕಿದ್ದ 6 ಮಂದಿ ನಕ್ಸಲರನ್ನು ಕೊಂದ ಪೊಲೀಸರು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 27, 2021 | 11:38 AM

Share

ಛತ್ತೀಸ್​ಗಢ್​: ತೆಲಂಗಾಣ ಮತ್ತು ಛತ್ತೀಸ್​ಗಢ್​  ಗಡಿ ಪ್ರದೇಶದ ಕಿಸ್ತಾರಾಮ್ ಪಿಎಸ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆರು ಮಂದಿ ನಕ್ಸಲರನ್ನು ಪೊಲೀಸರು ಹತ್ಯೆ (Naxals killed) ಮಾಡಿದ್ದಾರೆ. ಛತ್ತೀಸ್​ಗಢ್​ ಮತ್ತು ತೆಲಂಗಾಣ ಪೊಲೀಸರು ಹಾಗೂ ಸಿಆರ್​ಪಿಎಫ್​ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು ಎಂದು ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಎಸ್​ಪಿ ಸುನಿಲ್​ ದತ್ತ ತಿಳಿಸಿದ್ದಾರೆ. ಸದ್ಯ ಸ್ಥಳದಲ್ಲಿ ಇನ್ನೂ ನಕ್ಸಲ್​ ವಿರೋಧಿ ಕಾರ್ಯಾಚರಣೆ ನಡೆಯುತ್ತಲೇ ಇದೆ ಎಂದು ಮೂಲಗಳು ತಿಳಿಸಿವೆ.

ಛತ್ತೀಸ್​ಗಢ್​​ನಲ್ಲಿ ನಕ್ಸಲ್​ರ ಕಾಟ ಯಾವಾಗಲೂ ಹೆಚ್ಚು. ಇಲ್ಲಿ ಅದೆಷ್ಟೋ ಮುಗ್ಧ ನಾಗರಿಕರು, ಪೊಲಿಸ್​, ರಕ್ಷಣಾ ಸಿಬ್ಬಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಇಲ್ಲಿ ಪದೇಪದೆ ನಕ್ಸಲರು ಮತ್ತು ರಕ್ಷಣಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ ನಡೆಯುತ್ತಲೇ ಇರುತ್ತದೆ. ಹಾಗೇ ನಿನ್ನೆ ತೆಲಂಗಾಣ ಗ್ರೇ ಹೌಂಡ್ಸ್​ ಪೊಲೀಸರು ಮತ್ತು ನಕ್ಸಲರ ನಡುವೆ ಎನ್​ಕೌಂಟರ್​ ಶುರುವಾಗಿತ್ತು. ಮೊದಲು ಛತ್ತೀಸ್​ಗಢ್​​ನ ನಾರಾಯಣಪುರ ಜಿಲ್ಲೆಯಲ್ಲಿ ತೆಲಂಗಾಣ ಪೊಲೀಸರು ಎರಡು ಸುಧಾರಿತ ಸ್ಫೋಟಕ ಸಾಧಕ (IED)ಗಳನ್ನು ವಶಪಡಿಸಿಕೊಂಡರು. ಅದರ ಬೆನ್ನಲ್ಲೇ  ಆ್ಯಂಟಿ-ನಕ್ಸಲ್​ ಕಾರ್ಯಾಚರಣೆ ಪ್ರಾರಂಭವಾಗಿತ್ತು. ಅಂದಹಾಗೆ ನಕ್ಸಲರು ಈ ಐಇಡಿಯನ್ನು ಭದ್ರತಾ ಸಿಬ್ಬಂದಿಯನ್ನು ಟಾರ್ಗೆಟ್​ ಮಾಡಿಯೇ ಇಟ್ಟಿದ್ದರು ಎಂದು ಹೇಳಲಾಗಿದೆ.

ಮೃತಪಟ್ಟ ಆರು ಮಂದಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಇವರೆಲ್ಲ ಚೆರ್ಲಾ ಪ್ರದೇಶ ಸಮಿತಿಯವರು ಎಂದು ಹೇಳಲಾಗಿದ್ದು, ನಕ್ಸಲರ ಹಿರಿಯ ನಾಯಕರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  ನಿನ್ನೆಯಿಂದಲೂ ನಕ್ಸಲರು ಭದ್ರತಾ ಸಿಬ್ಬಂದಿ ಮೇಲೆ ದಾಳಿ ನಡೆಸಲು ಹೊಂಚು ಹಾಕುತ್ತಿದ್ದರು. ಐಇಡಿ ಸ್ಫೋಟಕ್ಕೂ ಮೊದಲು ಅವರ ಸಂಚಿನ ಸುಳಿವು ಸಿಕ್ಕಿದೆ. ಇಲ್ಲದೆ ಇದ್ದರೆ ಭದ್ರತಾ ಸಿಬ್ಬಂದಿ ಪ್ರಾಣಕ್ಕೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿತ್ತು ಎಂದು ಸುನಿಲ್​ ದತ್ತ ತಿಳಿಸಿದ್ದಾರೆ.

ಇದನ್ನೂ ಓದಿ: GST: ಹೊಸ ವರ್ಷಕ್ಕೆ ಮತ್ತೊಂದು ಶಾಕಿಂಗ್ ನ್ಯೂಸ್: ಜ. 1 ರಿಂದ ಓಲಾ, ಉಬರ್‌, ಸ್ವಿಗ್ಗಿ, ಜೊಮ್ಯಾಟೋ ಸೇವೆ ದುಬಾರಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್