AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಇಡಿ ಸ್ಫೋಟಿಸಿ ಭದ್ರತಾ ಸಿಬ್ಬಂದಿ ಹತ್ಯೆಗೆ ಸ್ಕೆಚ್​ ಹಾಕಿದ್ದ 6 ಮಂದಿ ನಕ್ಸಲರನ್ನು ಕೊಂದ ಪೊಲೀಸರು

ಮೃತಪಟ್ಟ ಆರು ಮಂದಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಇವರೆಲ್ಲ ಚೆರ್ಲಾ ಪ್ರದೇಶ ಸಮಿತಿಯವರು ಎಂದು ಹೇಳಲಾಗಿದ್ದು, ನಕ್ಸಲರ ಹಿರಿಯ ನಾಯಕರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಐಇಡಿ ಸ್ಫೋಟಿಸಿ ಭದ್ರತಾ ಸಿಬ್ಬಂದಿ ಹತ್ಯೆಗೆ ಸ್ಕೆಚ್​ ಹಾಕಿದ್ದ 6 ಮಂದಿ ನಕ್ಸಲರನ್ನು ಕೊಂದ ಪೊಲೀಸರು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 27, 2021 | 11:38 AM

Share

ಛತ್ತೀಸ್​ಗಢ್​: ತೆಲಂಗಾಣ ಮತ್ತು ಛತ್ತೀಸ್​ಗಢ್​  ಗಡಿ ಪ್ರದೇಶದ ಕಿಸ್ತಾರಾಮ್ ಪಿಎಸ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆರು ಮಂದಿ ನಕ್ಸಲರನ್ನು ಪೊಲೀಸರು ಹತ್ಯೆ (Naxals killed) ಮಾಡಿದ್ದಾರೆ. ಛತ್ತೀಸ್​ಗಢ್​ ಮತ್ತು ತೆಲಂಗಾಣ ಪೊಲೀಸರು ಹಾಗೂ ಸಿಆರ್​ಪಿಎಫ್​ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು ಎಂದು ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಎಸ್​ಪಿ ಸುನಿಲ್​ ದತ್ತ ತಿಳಿಸಿದ್ದಾರೆ. ಸದ್ಯ ಸ್ಥಳದಲ್ಲಿ ಇನ್ನೂ ನಕ್ಸಲ್​ ವಿರೋಧಿ ಕಾರ್ಯಾಚರಣೆ ನಡೆಯುತ್ತಲೇ ಇದೆ ಎಂದು ಮೂಲಗಳು ತಿಳಿಸಿವೆ.

ಛತ್ತೀಸ್​ಗಢ್​​ನಲ್ಲಿ ನಕ್ಸಲ್​ರ ಕಾಟ ಯಾವಾಗಲೂ ಹೆಚ್ಚು. ಇಲ್ಲಿ ಅದೆಷ್ಟೋ ಮುಗ್ಧ ನಾಗರಿಕರು, ಪೊಲಿಸ್​, ರಕ್ಷಣಾ ಸಿಬ್ಬಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಇಲ್ಲಿ ಪದೇಪದೆ ನಕ್ಸಲರು ಮತ್ತು ರಕ್ಷಣಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ ನಡೆಯುತ್ತಲೇ ಇರುತ್ತದೆ. ಹಾಗೇ ನಿನ್ನೆ ತೆಲಂಗಾಣ ಗ್ರೇ ಹೌಂಡ್ಸ್​ ಪೊಲೀಸರು ಮತ್ತು ನಕ್ಸಲರ ನಡುವೆ ಎನ್​ಕೌಂಟರ್​ ಶುರುವಾಗಿತ್ತು. ಮೊದಲು ಛತ್ತೀಸ್​ಗಢ್​​ನ ನಾರಾಯಣಪುರ ಜಿಲ್ಲೆಯಲ್ಲಿ ತೆಲಂಗಾಣ ಪೊಲೀಸರು ಎರಡು ಸುಧಾರಿತ ಸ್ಫೋಟಕ ಸಾಧಕ (IED)ಗಳನ್ನು ವಶಪಡಿಸಿಕೊಂಡರು. ಅದರ ಬೆನ್ನಲ್ಲೇ  ಆ್ಯಂಟಿ-ನಕ್ಸಲ್​ ಕಾರ್ಯಾಚರಣೆ ಪ್ರಾರಂಭವಾಗಿತ್ತು. ಅಂದಹಾಗೆ ನಕ್ಸಲರು ಈ ಐಇಡಿಯನ್ನು ಭದ್ರತಾ ಸಿಬ್ಬಂದಿಯನ್ನು ಟಾರ್ಗೆಟ್​ ಮಾಡಿಯೇ ಇಟ್ಟಿದ್ದರು ಎಂದು ಹೇಳಲಾಗಿದೆ.

ಮೃತಪಟ್ಟ ಆರು ಮಂದಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಇವರೆಲ್ಲ ಚೆರ್ಲಾ ಪ್ರದೇಶ ಸಮಿತಿಯವರು ಎಂದು ಹೇಳಲಾಗಿದ್ದು, ನಕ್ಸಲರ ಹಿರಿಯ ನಾಯಕರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  ನಿನ್ನೆಯಿಂದಲೂ ನಕ್ಸಲರು ಭದ್ರತಾ ಸಿಬ್ಬಂದಿ ಮೇಲೆ ದಾಳಿ ನಡೆಸಲು ಹೊಂಚು ಹಾಕುತ್ತಿದ್ದರು. ಐಇಡಿ ಸ್ಫೋಟಕ್ಕೂ ಮೊದಲು ಅವರ ಸಂಚಿನ ಸುಳಿವು ಸಿಕ್ಕಿದೆ. ಇಲ್ಲದೆ ಇದ್ದರೆ ಭದ್ರತಾ ಸಿಬ್ಬಂದಿ ಪ್ರಾಣಕ್ಕೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿತ್ತು ಎಂದು ಸುನಿಲ್​ ದತ್ತ ತಿಳಿಸಿದ್ದಾರೆ.

ಇದನ್ನೂ ಓದಿ: GST: ಹೊಸ ವರ್ಷಕ್ಕೆ ಮತ್ತೊಂದು ಶಾಕಿಂಗ್ ನ್ಯೂಸ್: ಜ. 1 ರಿಂದ ಓಲಾ, ಉಬರ್‌, ಸ್ವಿಗ್ಗಿ, ಜೊಮ್ಯಾಟೋ ಸೇವೆ ದುಬಾರಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್