AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಯುನಿಂದ ಬಿಜೆಪಿಗೆ ಆರು ಶಾಸಕರು; ನಿತೀಶ್​ ಕುಮಾರ್​ಗೆ ಭಾರಿ ಮುಖಭಂಗ

60 ಸದಸ್ಯರಿರುವ ಅರುಣಾಚಲ ಪ್ರದೇಶದಲ್ಲಿ ಜೆಡಿಯು 7 ಸ್ಥಾನಗಳನ್ನು ಗೆದ್ದಿತ್ತು. ಈ ಪೈಕಿ ಆರು ಶಾಸಕರು ಬಿಜೆಪಿ ಸೇರಿದ್ದಾರೆ. ಹೀಗಾಗಿ, ಪಕ್ಷಾಂತರ ಕಾಯ್ದೆ ಕೂಡ ಇದಕ್ಕೆ ಅನ್ವಯ ಆಗುವುದಿಲ್ಲ. ಪೀಪಲ್​ ಪಾರ್ಟಿ ಆಫ್​ ಅರುಣಾಚಲ ಪಕ್ಷದ ಬೆಂಬಲವೂ ಸೇರಿ ಬಿಜೆಪಿ ಈಗ 48 ಸದಸ್ಯ ಬಲವನ್ನು ಹೊಂದಿದಂತಾಗಿದೆ.

ಜೆಡಿಯುನಿಂದ ಬಿಜೆಪಿಗೆ ಆರು ಶಾಸಕರು; ನಿತೀಶ್​ ಕುಮಾರ್​ಗೆ ಭಾರಿ ಮುಖಭಂಗ
ಬಿಹಾರ ಸಿಎಂ ನಿತೀಶ್​ ಕುಮಾರ್
ರಾಜೇಶ್ ದುಗ್ಗುಮನೆ
| Edited By: |

Updated on: Dec 25, 2020 | 4:14 PM

Share

ಪಾಟ್ನಾ: ಅರುಣಾಚಲ ಪ್ರದೇಶ ವಿಧಾನಸಭೆಯ 7 ಜೆಡಿಯು ಶಾಸಕರ ಪೈಕಿ ಆರು ಮಂದಿ ಬಿಜೆಪಿಗೆ ಪಕ್ಷಾಂತರ ಮಾಡಿದ್ದಾರೆ. ಈ ಮೂಲಕ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ಗೆ ಭಾರೀ ಮುಖಭಂಗವಾಗಿದೆ.

60 ಸದಸ್ಯರಿರುವ ಅರುಣಾಚಲ ಪ್ರದೇಶದಲ್ಲಿ ಜೆಡಿಯು 7 ಸ್ಥಾನಗಳನ್ನು ಗೆದ್ದಿತ್ತು. ಈ ಪೈಕಿ ಆರು ಶಾಸಕರು ಬಿಜೆಪಿ ಸೇರಿದ್ದಾರೆ. ಹೀಗಾಗಿ, ಪಕ್ಷಾಂತರ ಕಾಯ್ದೆ ಕೂಡ ಇದಕ್ಕೆ ಅನ್ವಯ ಆಗುವುದಿಲ್ಲ. ಪೀಪಲ್​ ಪಾರ್ಟಿ ಆಫ್​ ಅರುಣಾಚಲ ಪಕ್ಷದ ಬೆಂಬಲವೂ ಸೇರಿ ಬಿಜೆಪಿ ಈಗ 48 ಸದಸ್ಯ ಬಲವನ್ನು ಹೊಂದಿದಂತಾಗಿದೆ.

ಹಯೇಂಗ್​ ಮಂಗ್​ಫಿ, ಜಿಕ್ಕೆ ತಕೊ, ಡೊಂಗ್ರು ಸಿಯೊಂಗ್ಜು, ತಲೇಮ್ ತಬೋಹ್, ಕಾಂಗ್ಗಾಂಗ್ ಟಕು ಮತ್ತು ಡೋರ್ಜಿ ವಾಂಗ್ಡಿ ಖರ್ಮಾ ಬಿಜೆಪಿ ಸೇರಿದ ಶಾಸಕರು. ಪಕ್ಷ ವಿರೋಧಿ ಕಾರ್ಯದಲ್ಲಿ ತೊಡಗಿದ ಆರೋಪದ ಮೇಲೆ ಮೂವರನ್ನು ಸಸ್ಪೆಂಡ್​ ಮಾಡಲಾಗಿತ್ತು ಮತ್ತು ನೋಟಿಸ್​ ಕೂಡ ನೀಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಮೆಚ್ಚಿ ಈ ಆರು ಶಾಸಕರು ಬಿಜೆಪಿ ಸೇರಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಹೇಳಿದೆ.

ನಿತೀಶ್​ ಕುಮಾರ್​ ಅಸಮಾಧಾನ ಅರುಣಾಚಲ ರಾಜಕೀಯ ಬೆಳವಣಿಗೆಯಿಂದ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಅಸಮಾಧಾನ ಹೊರ ಹಾಕಿದ್ದಾರೆ. ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಅರುಣಾಚಲ ಪ್ರದೇಶದಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಬಿಜೆಪಿ (41) ನಂತರ ಅತಿ ಹೆಚ್ಚು ಸ್ಥಾನ ಗಳಿಸಿದ ಹೆಗ್ಗಳಿಕೆ ಜೆಡಿಯುನದ್ದಾಗಿತ್ತು. ಇನ್ನು, ಬಿಹಾರದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಜೆಡಿಯು ಸರ್ಕಾರ ರಚನೆ ಮಾಡಿದೆ. ಅರುಣಾಚಲದ ಈ ಬೆಳವಣಿಗೆ ಜೆಡಿಯುಗೆ ನುಂಗಲಾರದ ತುತ್ತಾಗಿದೆ.

ಬಿಹಾರದಲ್ಲಿ ಹೊಸ ರಾಜಕೀಯ ಸಂಚಲನ: ಎನ್​ಡಿಎ ಬಿಟ್ಟುಹೋಗಿದ್ದ ಉಪೇಂದ್ರ ಕುಶ್ವಾಹಾ ಜೊತೆ ನಿತೀಶ್​ ಚರ್ಚೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ