AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್​ ಹೈರಿಸ್ಕ್​ ದೇಶಗಳಿಂದ ಬಂದ 6 ಮಂದಿಯಲ್ಲಿ ಕೊವಿಡ್​ 19 ದೃಢ; ಎಲ್ಲರ ಮಾದರಿಗಳೂ ಲ್ಯಾಬ್​​ಗೆ ರವಾನೆ

ಬುಧವಾರ ಮಧ್ಯಾಹ್ನ 4ಗಂಟೆಯವರೆಗೆ ಒಟ್ಟು 11 ಅಂತಾರಾಷ್ಟ್ರೀಯ ವಿಮಾನಗಳು ಭಾರತದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಲ್ಯಾಂಡ್​ ಆಗಿವೆ. ಇವುಗಳಿಂದ  3476 ಪ್ರಯಾಣಿಕರು ಆಗಮಿಸಿದ್ದಾರೆ.

ಒಮಿಕ್ರಾನ್​ ಹೈರಿಸ್ಕ್​ ದೇಶಗಳಿಂದ ಬಂದ 6 ಮಂದಿಯಲ್ಲಿ ಕೊವಿಡ್​ 19 ದೃಢ; ಎಲ್ಲರ ಮಾದರಿಗಳೂ ಲ್ಯಾಬ್​​ಗೆ ರವಾನೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 02, 2021 | 7:34 AM

Share

ಒಮಿಕ್ರಾನ್​ ಸೋಂಕು ಹೆಚ್ಚಾದ ಬೆನ್ನಲ್ಲೇ ಭಾರತ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಲ್ಲೂ ಒಮಿಕ್ರಾನ್​ ಹೈ ರಿಸ್ಕ್​ ದೇಶಗಳು ಎಂದು ವಿಂಗಡಿಸಿಕೊಂಡು, ಅಂಥ ದೇಶಗಳಿಂದ ಭಾರತಕ್ಕೆ ಬರುವವರು ಕಡ್ಡಾಯವಾಗಿ ಕೆಲವು ನಿಯಮಗಳ ಪಾಲನೆ ಮಾಡಬೇಕಿದೆ. ಆದರೆ ಈಗೊಂದು ಆತಂಕ ಎದುರಾಗಿದೆ.  ಒಮಿಕ್ರಾನ್​ ಹೈರಿಸ್ಕ್​ ಇರುವ ದೇಶಗಳಿಂದ ಬುಧವಾರ ಒಟ್ಟಾರೆ 3 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಭಾರತಕ್ಕೆ ಬಂದಿದ್ದು, ಅವರಲ್ಲಿ ಆರು ಮಂದಿಯಲ್ಲಿ ಬುಧವಾರ ಕೊವಿಡ್​ 19 ವೈರಸ್ ದೃಢಪಟ್ಟಿದೆ. ಇದು ಒಮಿಕ್ರಾನ್​ ಸೋಂಕಿರಬಹುದಾ ಎಂದು ಪತ್ತೆ ಹಚ್ಚಲು ಸೋಂಕಿತರ ಮಾದರಿಯನ್ನು ಜಿನೋಮಿಕ್​ ಸಿಕ್ವೆನ್ಸಿಂಗ್​​ಗೆ ಕಳಿಸಲಾಗಿದೆ. 

ಬುಧವಾರ ಮಧ್ಯಾಹ್ನ 4ಗಂಟೆಯವರೆಗೆ ಒಟ್ಟು 11 ಅಂತಾರಾಷ್ಟ್ರೀಯ ವಿಮಾನಗಳು ಭಾರತದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಲ್ಯಾಂಡ್​ ಆಗಿವೆ. ಇವುಗಳಿಂದ  3476 ಪ್ರಯಾಣಿಕರು ಆಗಮಿಸಿದ್ದಾರೆ. ಹೀಗೆ ತಲುಪಿದ ಎಲ್ಲ ಪ್ರಯಾಣಿಕರಿಗೂ ನಿಯಮದಂತೆ ಆರ್​ಟಿಪಿಸಿಆರ್​ ಟೆಸ್ಟ್​ ಮಾಡಲಾಗಿದೆ. ಅದರಲ್ಲಿ 6ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ನೆದರ್​​ಲ್ಯಾಂಡ್ ಮತ್ತು ಯುಕೆಯಿಂದ ದೆಹಲಿಗೆ ಬಂದ ಒಟ್ಟು ನಾಲ್ವರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಇವೆರಡೂ ಕೂಡ ಒಮಿಕ್ರಾನ್​ ಹೈರಿಸ್ಕ್​ ದೇಶಗಳ ಪಟ್ಟಿಗೇ ಸೇರುತ್ತವೆ.  ಹೀಗೆ ಕೊರೊನಾ ದೃಢಪಟ್ಟವರನ್ನು ಸದ್ಯ ಎಲ್​ಎನ್​ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗೇ, ಅಂತಾರಾಷ್ಟ್ರೀಯ ಪ್ರಯಾಣಿಕರ ತಪಾಸಣೆ ವಿಚಾರದಲ್ಲಿ ಗಮನಹರಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಕೇಂದ್ರ ಸರ್ಕಾರದ ಜತೆಗೆ ಕೆಲವು ರಾಜ್ಯಸರ್ಕಾರಗಳೂ ಕೂಡ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಪಡಿಸಿವೆ. ಈ ಸಾಲಿನಲ್ಲಿ ಮಹಾರಾಷ್ಟ್ರವೂ ಒಂದು. ಮಹಾರಾಷ್ಟ್ರಕ್ಕೆ ಹೈರಿಸ್ಕ್​ ದೇಶಗಳಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರು ಕಡ್ಡಾಯವಾಗಿ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್​​ಗೆ ಒಳಗಾಗಬೇಕು. 2, 4 ಮತ್ತು 7ನೇ ದಿನ ಆರ್​ಟಿಪಿಸಿಆರ್​ ಟೆಸ್ಟ್​ ಆಗಬೇಕು. ಈ ಮೂರು ಟೆಸ್ಟ್​​ಗಳಲ್ಲಿ ಒಂದು ಟೆಸ್ಟ್​​ನಲ್ಲಿ ವರದಿ ಪಾಸಿಟಿವ್ ಬಂದರೂ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗುವುದು ಎಂದು ಮಹಾ ಸರ್ಕಾರ ಹೇಳಿದೆ.  ಕರ್ನಟಕ ಕೂಡ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ನಿಯಮ ಪ್ರಕಟಿಸಿದೆ. ಒಮಿಕ್ರಾನ್​ ಹೈರಿಸ್ಕ್​ ದೇಶಗಳಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಆರ್​ಟಿಸಿಪಿಆರ್ ಟೆಸ್ಟ್​ ಮಾಡಲಾಗುವುದು. ಯಾರಲ್ಲೇ ಕೊವಿಡ್ 19 ಕಂಡುಬಂದರೂ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗುವುದು. ಯಾರಲ್ಲಾದರೂ ನೆಗೆಟಿವ್​ ಬಂದರೂ ಕೂಡ ಅವರು ಏಳು ದಿನಗಳ ಕಾಲ ಮನೆಯಲ್ಲೇ ಕ್ವಾರಂಟೈನ್​ ಆಗಬೇಕು. ಕ್ವಾರಂಟೈನ್​ನ 5ನೇ ದಿನಕ್ಕೆ ಒಂದು ಆರ್​ಟಿಪಿಸಿಆರ್​ ತಪಾಸಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.

ಇದನ್ನೂ ಓದಿ: Karnataka Weather Today: ಇಂದಿನಿಂದ 3 ದಿನ ಕರ್ನಾಟಕದಲ್ಲಿ ವ್ಯಾಪಕ ಮಳೆ; ಆಂಧ್ರ ಪ್ರದೇಶ, ಒಡಿಶಾದಲ್ಲಿ ಚಂಡಮಾರುತದ ಭೀತಿ

Published On - 7:34 am, Thu, 2 December 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ