AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಮಾಧ್ಯಮ, ಮನರಂಜನಾ ಉದ್ಯಮ 2025ರ ವೇಳೆಗೆ 4 ಲಕ್ಷ ಕೋಟಿ ತಲುಪುವ ನಿರೀಕ್ಷೆ: ಅನುರಾಗ್ ಠಾಕೂರ್

ದೇಶದ ಮಾಧ್ಯಮ ಮತ್ತು ಮನರಂಜನಾ ವಲಯವು ಗ್ರಾಹಕ ಮತ್ತು ಜಾಹೀರಾತು ವೆಚ್ಚಗಳೆರಡರಲ್ಲೂ ಜಾಗತಿಕವಾಗಿ ವೇಗವಾಗಿ ಬೆಳೆಯುತ್ತಿರುವ ಉದ್ಯಮವಾಗಿದೆ ಮತ್ತು 2025 ರ ವೇಳೆಗೆ 4 ಲಕ್ಷ ಕೋಟಿಗೆ ತಲುಪುವ ನಿರೀಕ್ಷೆ ಇದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ.

ಭಾರತದ ಮಾಧ್ಯಮ, ಮನರಂಜನಾ ಉದ್ಯಮ 2025ರ ವೇಳೆಗೆ 4 ಲಕ್ಷ ಕೋಟಿ ತಲುಪುವ ನಿರೀಕ್ಷೆ: ಅನುರಾಗ್ ಠಾಕೂರ್
Anurag Singh Thakur
TV9 Web
| Edited By: |

Updated on: Jun 26, 2022 | 5:02 PM

Share

ದೇಶದ ಮಾಧ್ಯಮ ಮತ್ತು ಮನರಂಜನಾ  ವಲಯವು ಗ್ರಾಹಕ ಮತ್ತು ಜಾಹೀರಾತು ವೆಚ್ಚಗಳೆರಡರಲ್ಲೂ ಜಾಗತಿಕವಾಗಿ ವೇಗವಾಗಿ ಬೆಳೆಯುತ್ತಿರುವ ಉದ್ಯಮವಾಗಿದೆ ಮತ್ತು 2025 ರ ವೇಳೆಗೆ 4 ಲಕ್ಷ ಕೋಟಿಗೆ ತಲುಪುವ ನಿರೀಕ್ಷೆ ಇದೆ ಎಂದು  ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ.

ಪುಣೆಯಲ್ಲಿ ಸಿಂಬಯಾಸಿಸ್ ಸ್ಕಿಲ್ ಮತ್ತು ಪ್ರೊಫೆಷನಲ್ ಯೂನಿವರ್ಸಿಟಿ ಆಯೋಜಿಸಿದ್ದ ಚೇಂಜಿಂಗ್ ಲ್ಯಾಂಡ್​ಸ್ಕೇಪ್ ಆಫ್ ಮೀಡಿಯಾ ಆಫ್ ಮೀಡಿಯಾ ಆಂಡ್ ಎಂಟರ್​ಟೈನ್ಮೆಂಟ್ 2022 ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದರು.

ಗ್ರಾಹಕರು ಮತ್ತು ಜಾಹೀರಾತು ಆದಾಯದ ದೃಷ್ಟಿಯಿಂದ ಭಾರತವು ಜಾಗತಿಕವಾಗಿ ವೇಗವಾಗಿ ಬೆಳೆಯುತ್ತಿರುವ ಮನರಂಜನೆ ಮತ್ತು ಮಾಧ್ಯಮ ಮಾರುಕಟ್ಟೆಯಾಗಲಿದೆ ಎಂದು ಅವರು ಹೇಳಿದರು.

ದೇಶೀಯ ಮತ್ತು ಜಾಗತಿಕ ಬೇಡಿಕೆಯನ್ನು ಪೂರೈಸಲು ವಿಶ್ವ ದರ್ಜೆಯ ಸೃಜನಶೀಲ ಪ್ರತಿಭೆಯನ್ನು ಅಭಿವೃದ್ಧಿಪಡಿಸಲು ಸರ್ಕಾರವು AVGC ವಲಯಕ್ಕಾಗಿ ಕಾರ್ಯಪಡೆಯನ್ನು ಸ್ಥಾಪಿಸಿದೆ ಎಂದರು.

ಮಾಧ್ಯಮ ಮತ್ತು ಮನರಂಜನಾ ವಲಯವು 2025 ರ ವೇಳೆಗೆ ವಾರ್ಷಿಕವಾಗಿ 4 ಲಕ್ಷ ಕೋಟಿ ರೂಪಾಯಿಗಳನ್ನು ಉತ್ಪಾದಿಸುವ ನಿರೀಕ್ಷೆಯಿದೆ ಮತ್ತು 2030 ರ ವೇಳೆಗೆ $ 100 ಬಿಲಿಯನ್ ಅಥವಾ 7.5 ಲಕ್ಷ ಕೋಟಿ ಉದ್ಯಮವನ್ನು ತಲುಪುವ ನಿರೀಕ್ಷೆಯಿದೆ ಎಂದು ಸಚಿವರು ಹೇಳಿದರು.

ಸಾಂಕ್ರಾಮಿಕ ರೋಗದ ಹೊರತಾಗಿಯೂ, ಭಾರತದಲ್ಲಿ ಟಿವಿ ಜಾಹೀರಾತು 2020 ರಲ್ಲಿ 35,015 ಕೋಟಿ ರೂ.ಗೆ ಬೆಳೆದಿದೆ ಮತ್ತು 7.6 ಶೇಕಡಾ ಬೆಳವಣಿಗೆಯೊಂದಿಗೆ ಒಟ್ಟು ಮಾರುಕಟ್ಟೆಗೆ 50,000 ಕೋಟಿ ರೂ.ಗೂ ಹೆಚ್ಚು ಕೊಡುಗೆ ನೀಡಲಿದೆ ಎಂದು ವರದಿ ಹೇಳಿದೆ.

ಭಾರತದಲ್ಲಿ ಮೊಬೈಲ್ ಇಂಟರ್ನೆಟ್ ಜಾಹೀರಾತು ಆದಾಯ 2020 ರಲ್ಲಿ 7,331 ಕೋಟಿ ರೂಪಾಯಿಗಳಷ್ಟಿತ್ತು ಮತ್ತು 2025 ರ ವೇಳೆಗೆ 22,350 ಕೋಟಿ ರೂಪಾಯಿಗಳಿಗೆ ಏರಿಕೆಯಾಗಲಿದೆ ಎಂದು ವರದಿ ಹೇಳಿದೆ, ಇದು 25.4 ಶೇಕಡಾ ಬೆಳವಣಿಗೆಯನ್ನು ತೋರಿಸುತ್ತದೆ.

ಆದಾಗ್ಯೂ, ವಾರ್ತಾಪತ್ರಿಕೆ ಮತ್ತು ಗ್ರಾಹಕ ನಿಯತಕಾಲಿಕೆ ಉದ್ಯಮವು 2025 ರ ವೇಳೆಗೆ 1.82 ರಷ್ಟು ಸಾಧಾರಣ ಬೆಳವಣಿಗೆಯೊಂದಿಗೆ 26.299 ಕೋಟಿಗೆ ಬೆಳೆಯುವ ನಿರೀಕ್ಷೆಯಿದೆ. 2020 ರಲ್ಲಿ, ಸಾಂಕ್ರಾಮಿಕ ರೋಗದಿಂದಾಗಿ, ಮುದ್ರಣ ಜಾಹೀರಾತಿನ ಆದಾಯದಲ್ಲಿ ಶೇಕಡಾ 12 ರಷ್ಟು ಕಡಿಮೆಯಾಗಿದೆ ಮತ್ತು ಪತ್ರಿಕೆಗಳು ಮತ್ತು ನಿಯತಕಾಲಿಕೆಗಳಿಂದ ಪಡೆದ ಆದಾಯವು ನಾಲ್ಕು ಶೇಕಡಾ ಕಡಿಮೆಯಾಗಿದೆ ಎಂದು  ಹೇಳಿದ್ದಾರೆ.

ವರದಿಯ ಪ್ರಕಾರ, 2025 ರ ಅಂತ್ಯದ ವೇಳೆಗೆ ಚಿತ್ರಮಂದಿರಗಳಿಂದ ಆದಾಯವು 13,857 ಕೋಟಿ ರೂ.ಗಳಾಗಿದ್ದು, ಸಂಯುಕ್ತ ವಾರ್ಷಿಕ ಬೆಳವಣಿಗೆ ದರ 39.3 ಶೇಕಡಾ. ಸಂಗೀತ, ರೇಡಿಯೋ ಮತ್ತು ಪಾಡ್‌ಕ್ಯಾಸ್ಟ್ ಮಾರುಕಟ್ಟೆಯಿಂದ ಭಾರತದ ಒಟ್ಟು ಆದಾಯವು 2020 ರಲ್ಲಿ 4,626 ಕೋಟಿ ರೂ.ಗೆ ಕುಸಿದಿದೆ ಏಕೆಂದರೆ ದೇಶದ ಲೈವ್ ಸಂಗೀತ ಕ್ಷೇತ್ರವು ಸಾಂಕ್ರಾಮಿಕ ರೋಗದಿಂದಾಗಿ ಸುಮಾರು 522 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದೆ.

ಸಂಗೀತ, ರೇಡಿಯೋ ಮತ್ತು ಪಾಡ್‌ಕಾಸ್ಟ್ ಉದ್ಯಮವು 2025 ರ ವೇಳೆಗೆ 19.1 ರಷ್ಟು ವಾರ್ಷಿಕ ಬೆಳವಣಿಗೆಯೊಂದಿಗೆ 11.026 ಕೋಟಿ ರೂಪಾಯಿಗಳಿಗೆ ಬೆಳೆಯಲಿದೆ ಎಂದು ಸಲಹಾ ಸಂಸ್ಥೆ ಹೇಳಿದೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ