AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣೆಕಟ್ಟಿನ ನೀರು ಬತ್ತಿದ್ದರಿಂದ ಮುಳುಗಿದ್ದ ಕಾರು ಮೇಲೆ ಬಂತು, ಇಬ್ಬರ ಅಸ್ಥಿಪಂಜರ ಪತ್ತೆ

ಮಧ್ಯಪ್ರದೇಶದ ನದಿಯೊಂದರಲ್ಲಿ ಕಾರೊಂದು ಗೋಚರವಾಗಿದ್ದು, ಅದರಲ್ಲಿ ಇಬ್ಬರ ಅಸ್ಥಿಪಂಜರ ಪತ್ತೆಯಾಗಿದೆ. ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದವರ ಅಸ್ಥಿಪಂಜರ ಇದು ಎಂಬುದು ತಿಳಿದುಬಂದಿದೆ.

ಅಣೆಕಟ್ಟಿನ ನೀರು ಬತ್ತಿದ್ದರಿಂದ ಮುಳುಗಿದ್ದ ಕಾರು ಮೇಲೆ ಬಂತು, ಇಬ್ಬರ ಅಸ್ಥಿಪಂಜರ ಪತ್ತೆ
ಕಾರುImage Credit source: Patrika.com
ನಯನಾ ರಾಜೀವ್
|

Updated on: Jun 19, 2024 | 11:24 AM

Share

ಮಧ್ಯಪ್ರದೇಶ(Madhya Pradesh)ದ ಮೊರೆನಾ ಜಿಲ್ಲೆಯ ಕುವಾರಿ ನದಿಯ ಗೋಪಿ ಗ್ರಾಮದ ಬಳಿ ನಿರ್ಮಿಸಲಾದ ಸ್ಟಾಪ್ ಅಣೆಕಟ್ಟಿನಲ್ಲಿ ನೀರು ಕಡಿಮೆಯಾದ ಕಾರಣ,  ಕಾರು ಕಾಣಿಸಿಕೊಂಡಿದೆ. ಕಾರಿನ ಮಧ್ಯದ ಸೀಟಿನಲ್ಲಿ ಮಹಿಳೆ ಹಾಗೂ ಪುರುಷರೊಬ್ಬರ ಅಸ್ಥಿಪಂಜರ ಪತ್ತೆಯಾಗಿದೆ ಪೊಲೀಸರು ಸ್ಥಳಕ್ಕಾಗಮಿಸಿ ಕಾರಿನ ಸಮೇತ ಅಸ್ಥಿಪಂಜರಗಳನ್ನು ಹೊರತೆಗೆದಿದ್ದಾರೆ. ಮೊದಲು ಯಾರ ಅಸ್ಥಿಪಂಜರಗಳು ಎಂಬುದು ತಿಳಿದುಬಂದಿರಲಿಲ್ಲ.

ಮೃತರ ಗ್ರಾಮ ಸಮೀಪದಲ್ಲೇ ಇದ್ದುದರಿಂದ ಗ್ರಾಮಸ್ಥರು ಅವರನ್ನು ಪತ್ತೆಹಚ್ಚಿದ್ದಾರೆ. ಮಾಹಿತಿ ಪಡೆದ ಸಿಹೋನಿಯಾ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಪತ್ತೆಯಾದ ಅಸ್ಥಿಪಂಜರಗಳಲ್ಲಿ ಛಟ್ ಕಾ ಪುರದ ನಿವಾಸಿ ಜಗದೀಶ್ ಜಾತವ್ ಅವರ ಪುತ್ರ 26 ವರ್ಷದ ನೀರಜ್ ಮತ್ತು ಛಟ್ ಕಾ ಪುರ ನಿವಾಸಿ ಮುಖೇಶ್ ಜಾತವ್ ಅವರ ಪತ್ನಿ 32 ವರ್ಷದ ಮಿಥಿಲೇಶ್ ಅವರು ಗುರುದ್ವಾರ ಮೊಹಲ್ಲಾ ಅಂಬಾಹ್ ನವರು ಎಂದು ಪೊಲೀಸರು ತಿಳಿಸಿದ್ದಾರೆ.

ನೀರಜ್ ಜಾತವ್ ಮತ್ತು ಮಹಿಳೆಯ ಪತಿ ಮುಖೇಶ್ ಜಾತವ್ ಸೋದರ ಸಂಬಂಧಿಗಳು. ಮಹಿಳೆಯ ಪತಿ ಅಂಬಾದಲ್ಲಿ ಸರ್ಕಾರಿ ಶಿಕ್ಷಕರಾಗಿದ್ದು, ಗುರುದ್ವಾರ ಮೊಹಲ್ಲಾ ಅಂಬಾದಲ್ಲಿ ಬಾಡಿಗೆಗೆ ವಾಸಿಸುತ್ತಿದ್ದರು. ಶಿಕ್ಷಕ ಮುಖೇಶ್ ಜಾತವ್ ಫೆಬ್ರವರಿ ತಿಂಗಳಲ್ಲಿ ಅಂಬಾಹ್ ಪೊಲೀಸ್ ಠಾಣೆಯಲ್ಲಿ ಪತ್ನಿ ಮಿಥಿಲೇಶ್ ನಾಪತ್ತೆ ದೂರು ದಾಖಲಿಸಿದ್ದರು.

ಮತ್ತಷ್ಟು ಓದಿ: ಕಾವೇರಿ ನದಿಯಲ್ಲಿ ತೇಲಿ ಬಂದ ಮಹಿಳೆ-ಪುರುಷನ ಮೃತದೇಹ: ನೋಡಲು ಮುಗಿಬಿದ್ದ ಜನರು

ಅದೇ ಸಮಯದಲ್ಲಿ ನೀರಜ್ ಜಾತವ್ ಕೂಡ ಮನೆಯಿಂದ ನಾಪತ್ತೆಯಾಗಿದ್ದರು. ಮಹಿಳೆಯ ಪತಿ ಅಂಬಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು, ಆದರೆ ಯುವಕನ ಕುಟುಂಬವು ಯಾವುದೇ ದೂರು ನೀಡಿರಲಿಲ್ಲ. ಇದು ಮರ್ಯಾದಾ ಹತ್ಯೆಯೋ ಅಥವಾ ಅಕಸ್ಮಾತ್​ ಆಗಿ ಕಾರು ನದಿಗೆ ಬಿದ್ದಿದೆಯೋ ಎಂಬುದು ತಿಳಿದುಬಂದಿಲ್ಲ.

ಪ್ರತಿ ವರ್ಷ ಮಳೆಗಾಲದ ಮೊದಲು, ಈ ಸ್ಟಾಪ್ ಅಣೆಕಟ್ಟಿನ ಗೇಟ್‌ಗಳನ್ನು ತೆರೆಯಲಾಗುತ್ತದೆ ಮತ್ತು ನದಿಯಿಂದ ನೀರನ್ನು ಹೊರತೆಗೆಯಲಾಗುತ್ತದೆ, ಇದು ನದಿಯನ್ನು ಸಹ ಸ್ವಚ್ಛಗೊಳಿಸುತ್ತದೆ.

ಮಂಗಳವಾರ ಬೆಳಗ್ಗೆ ಸ್ಟಾಪ್ ಡ್ಯಾಂನ ಗೇಟ್ ತೆರೆಯಲಾಯಿತು. ಮಧ್ಯಾಹ್ನದ ವೇಳೆಗೆ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾದಾಗ ನದಿಯ ಮಧ್ಯದಲ್ಲಿ ಪಾಚಿ ಹಾಗೂ ನದಿಯಲ್ಲಿ ಗಿಡಗಳು ಬೆಳೆದು ನಿಂತಿದ್ದ ಕಾರೊಂದು ಕಾಣಿಸಿಕೊಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ