ಜಮ್ಮು ಕಾಶ್ಮೀರದ ಬಗ್ಗೆ ವಿವಾದಿತ ಹೇಳಿಕೆ ಬೆನ್ನಲ್ಲೇ ಇಂದಿರಾ ಗಾಂಧಿ ಚಿತ್ರ ಪೋಸ್ಟ್ ಮಾಡಿ ವಿವಾದಕ್ಕೀಡಾದ ನವಜೋತ್ ಸಿಂಗ್ ಸಿಧು ಸಲಹೆಗಾರ

| Updated By: ರಶ್ಮಿ ಕಲ್ಲಕಟ್ಟ

Updated on: Aug 23, 2021 | 2:40 PM

Navjot Singh Sidhu: ಮಾಲಿ ಅವರ ಇತ್ತೀಚಿನ ಪೋಸ್ಟ್‌ಗಳಿಗೆ  ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದು 'ರಾಜ್ಯ ಮತ್ತು ದೇಶದ ಶಾಂತಿ ಮತ್ತು ಸ್ಥಿರತೆಗೆ ಅಪಾಯಕಾರಿಯಾದ ಭೀಕರ ಮತ್ತು ಕೆಟ್ಟ ಕಲ್ಪನೆಯ ಟೀಕೆಗಳನ್ನು ಬಳಸದಂತೆ ಎಚ್ಚರಿಕೆ ನೀಡಿದ್ದಾರೆ.

ಜಮ್ಮು ಕಾಶ್ಮೀರದ ಬಗ್ಗೆ ವಿವಾದಿತ ಹೇಳಿಕೆ ಬೆನ್ನಲ್ಲೇ ಇಂದಿರಾ ಗಾಂಧಿ ಚಿತ್ರ ಪೋಸ್ಟ್ ಮಾಡಿ ವಿವಾದಕ್ಕೀಡಾದ ನವಜೋತ್ ಸಿಂಗ್ ಸಿಧು ಸಲಹೆಗಾರ
ನವಜೋತ್ ಸಿಂಗ್ ಸಿಧು -ಅಮರಿಂದರ್ ಸಿಂಗ್ (ಸಂಗ್ರಹ ಚಿತ್ರ)
Follow us on

ಚಂಡೀಗಢ:  ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು (Navjot Singh Sidhu) ಅವರ ಸಲಹೆಗಾರ ಮಾಲ್ವಿಂದರ್ ಸಿಂಗ್ ಮಾಲಿ (Malvinder Singh Mali) ಅವರು ದಿವಂಗತ ಪ್ರಧಾನಿ ಇಂದಿರಾಗಾಂಧಿ ಅವರ ಚಿತ್ರವೊಂದನ್ನು ಪೋಸ್ಟ್ ಮಾಡಿ ವಿವಾದಕ್ಕೀಡಾಗಿದ್ದಾರೆ. ತಲೆಬುರುಡೆಗಳ ರಾಶಿಯ ಬಳಿ ಇಂದಿರಾಗಾಂಧಿ ಗನ್ ಹಿಡಿದುಕೊಂಡು ನಿಂತಿದ್ದು ಗನ್  ತುದಿಯಲ್ಲಿ ತಲೆಬುರುಡೆ ನೇತುಹಾಕಿರುವ ಫೋಟೋ ಆಗಿದೆ ಅದು. ಕಾಶ್ಮೀರ ಪ್ರತ್ಯೇಕ ದೇಶ, ಭಾರತ ಮತ್ತು ಪಾಕಿಸ್ತಾನ ಕಾನೂನುಬಾಹಿರ ನಿವಾಸಿಗಳು ಮತ್ತು ಪಂಜಾಬ್‌ನಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಕ್ಯಾಪ್ಟನ್ ಅಮರಿಂದರ್ ಸಿಂಗ್ ಕಾರಣ ಎಂದು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ಒಂದು ವಾರದ ನಂತರ ಮಾಲಿ ಈ ರೀತಿ ಪೋಸ್ಟ್ ಮಾಡಿದ್ದಾರೆ.

ಮಾಲಿ ಅವರ ಇತ್ತೀಚಿನ ಪೋಸ್ಟ್‌ಗಳಿಗೆ  ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದು ‘ರಾಜ್ಯ ಮತ್ತು ದೇಶದ ಶಾಂತಿ ಮತ್ತು ಸ್ಥಿರತೆಗೆ ಅಪಾಯಕಾರಿಯಾದ ಭೀಕರ ಮತ್ತು ಕೆಟ್ಟ ಕಲ್ಪನೆಯ ಟೀಕೆಗಳನ್ನು ಬಳಸದಂತೆ ಎಚ್ಚರಿಕೆ ನೀಡಿದ್ದಾರೆ.

ಪಿಪಿಸಿಸಿ ಅಧ್ಯಕ್ಷರಿಗೆ ಸಲಹೆ ನೀಡಿ ಸ್ಪಷ್ಟವಾಗಿ ತಿಳಿದಿರದ ಅಥವಾ ಜ್ಞಾನವಿಲ್ಲದ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಬೇಡಿ ಮತ್ತು ನಿಮಗೆ ಪರಿಣಾಮಗಳ ಬಗ್ಗೆ ತಿಳುವಳಿಕೆ ಇಲ್ಲ ಎಂದು ಅಮರಿಂದರ್ ಸಿಂಗ್, ಸಿಧು ಸಲಹೆಗಾರರಿಗೆ ಹೇಳಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ಪಂಜಾಬಿ ನಿಯತಕಾಲಿಕೆಯ ಜೂನ್ 1989 ರ ಸಂಚಿಕೆಯ ಮುಖಪುಟವಾಗಿ ‘ಜಂತಕ್ ಪೈಗಾಂ (ಸಾರ್ವಜನಿಕ ಸಂದೇಶ)’ ಎಂಬ ಶೀರ್ಷಿಕೆಯೊಂದಿಗೆ ಪ್ರಕಟವಾಗಿದ್ದು ಪ್ರತಿ ದಮನವನ್ನು ಸೋಲಿಸಲಾಗಿದೆ ‘ಎಂಬ ಟ್ಯಾಗ್‌ಲೈನ್  ನೀಡಲಾಗಿತ್ತು. ಈ ಚಿತ್ರವನ್ನು ಮಾಲಿ ತನ್ನ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು.

ಈ ಪೋಸ್ಟ್ ಅನ್ನು ಹಲವು ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿವೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರು ಮಾಲಿ ಅವರ ಪೋಸ್ಟ್ ‘ಎಂಭತ್ತರ ದಶಕದಲ್ಲಿ ಕಾಂಗ್ರೆಸ್‌ನ ಹೇಯ ಆಟದ ಯೋಜನೆಯನ್ನು ಬಹಿರಂಗಪಡಿಸಿದೆ’ ಎಂದು ಅಭಿಪ್ರಾಯಪಟ್ಟರು.

“ಪಿಸಿಸಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ಸಲಹೆಗಾರ ಮಾಲ್ವಿಂದರ್ ಸಿಂಗ್ ಮಾಲಿ ಅವರು ಫೇಸ್​​ಬುಕ್​​​ ಪೋಸ್ಟ್  ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು 1984 ರಲ್ಲಿ ಸಿಖ್ಖರನ್ನು ಹೇಗೆ ಟಾರ್ಗೆಟ್ ಮಾಡಿದರು ಎಂಬುದನ್ನು ತೋರಿಸುತ್ತದೆ ಎಂದು ತರುಣ್ ಚುಗ್ ಹೇಳಿರುವುದಾಗಿ ಇಂಡಿಯಾ ಟುಡೇ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸಿಧು ಅವರ ಒತ್ತಾಯದ ಮೇರೆಗೆ ಮಾಲಿ ಪೋಸ್ಟ್ ಅಪ್‌ಲೋಡ್ ಮಾಡಿದ್ದಾರೆಯೇ ಎಂದು ಚುಗ್ ಪ್ರಶ್ನಿಸಿದರು. ಅಮರಿಂದರ್ ಸಿಂಗ್ ನಡುವಿನ ದೀರ್ಘಾವಧಿಯ ಜಟಾಪಟಿ ನಡೆದ ನಂತರ ಸಿಧು ಅವರನ್ನು ಜುಲೈ 23 ರಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಮಾಡಲಾಯಿತು.

ಪಕ್ಷದ ವ್ಯವಹಾರಗಳ ಮೇಲೆ ತನ್ನ ಪ್ರಾಬಲ್ಯವನ್ನು ಪೂರ್ಣಗೊಳಿಸಿದ ನಂತರ ಹೊಸದಾಗಿ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಸೋಮವಾರ ಶಾಸಕ ಪರ್ಗತ್ ಸಿಂಗ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದರು.

ಸಿಧು ಬಿಡುಗಡೆ ಮಾಡಿರುವ ಅಧಿಕೃತ ಪ್ರಕಟಣೆಯಲ್ಲಿ ಹಂಗಾಮಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಮತ್ತು ಪಂಜಾಬ್ ವ್ಯವಹಾರಗಳ ಉಸ್ತುವಾರಿ ಹರೀಶ್ ರಾವತ್ ಅವರ ಅನುಮತಿಯನ್ನು ಪಡೆದು, ಜಲಂಧರ್ ಕಂಟೋನ್ಮೆಂಟ್ ಶಾಸಕ ಪರ್ಗತ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ (ಸಂಸ್ಥೆ) ನೇಮಿಸಲಾಗಿದೆ.

ಪಂಜಾಬ್ ಕಾಂಗ್ರೆಸ್‌ನ ಸಂಪೂರ್ಣ ಉನ್ನತ ಅಧಿಕಾರಿಗಳು ಈಗ ಸಿಧುಗೆ ಹತ್ತಿರವಿರುವ ನಾಯಕರಾಗಿದ್ದಾರೆ. ಪಕ್ಷದ ಮುಖ್ಯಸ್ಥರ ಮುಂದಿನ ಕಾರ್ಯಸೂಚಿಯಲ್ಲಿ ಜಿಲ್ಲಾ ಮಟ್ಟದ ಸಂಯೋಜಕರು ಮತ್ತು ಜಿಲ್ಲಾ ಘಟಕಗಳ ಅಧ್ಯಕ್ಷರು, ಇತರ ಪದಾಧಿಕಾರಿಗಳ ನೇಮಕಾತಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಹೈಕಮಾಂಡ್‌ಗೆ ಅನುಮೋದನೆಗಾಗಿ ಅವರು ಪ್ರಸ್ತಾವನೆಯನ್ನು ಕಳುಹಿಸಿರುವುದರಿಂದ ಈ ನೇಮಕಾತಿಗಳಲ್ಲಿಯೂ ಸಹ ಸಿಧು ಪ್ರಭುತ್ವವಿರಬಹುದು ಎಂದು ಒಳಗಿನವರು ಹೇಳುತ್ತಾರೆ.

ಮೂಲಗಳ ಪ್ರಕಾರ ಪುನರ್ರಚನೆಯ ಹೊರತಾಗಿ 2022 ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆಯಲ್ಲಿ ಸಿಧು ಪ್ರಮುಖ ಪಾತ್ರವನ್ನು ಹೊಂದಲು ಪ್ರಯತ್ನಿಸುತ್ತಾರೆ. ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್  ಸೋನಿಯಾ ಗಾಂಧಿಯವರೊಂದಿಗಿನ ಇತ್ತೀಚಿನ ಸಭೆಯಲ್ಲಿ ಪಕ್ಷವನ್ನು ಪುನರ್ರಚಿಸುವಾಗ ಮತ್ತು ಟಿಕೆಟ್ ಹಂಚಿಕೆಗೆ ಒಮ್ಮತದ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ಒತ್ತಿ ಹೇಳಿದರು.

ಇದನ್ನೂ ಓದಿ:  Haiti Earthquake: ಹುಡುಕಿದಷ್ಟೂ ಸಿಗುತ್ತಿವೆ ಶವಗಳು; ಹೈಟಿ ಭೂಕಂಪ ಭೀಕರತೆ, ಸಾವಿನ ಸಂಖ್ಯೆ 2207ಕ್ಕೆ ಏರಿಕೆ

(Sketch of Indira Gandhi Punjab Congress Chief Navjot Singh Sidhu’s advisor Malvinder Singh Mali sparked off a controversy)