World Youth Skill Day 2021: ಯುವಜನರ ಕೌಶಲಾಭಿವೃದ್ಧಿ ರಾಷ್ಟ್ರೀಯ ಅಗತ್ಯತೆ: ಪ್ರಧಾನಿ ಮೋದಿ

ದೈನಂದಿನ ಅಗತ್ಯಗಳಿಗೆ ಕೌಶಲ ಅದೆಷ್ಟು ಮುಖ್ಯ ಎಂಬುದನ್ನು ವಿವರಿಸಿದ ಪ್ರಧಾನಿ ಮೋದಿ, ಗಳಿಕೆಯೊಂದಿಗೆ ಕಲಿಕೆ ನಿಲ್ಲಬಾರದು. ಕೌಶಲಗಳನ್ನು ರೂಢಿಸಿಕೊಂಡು, ನುರಿತಿರುವ ವ್ಯಕ್ತಿ ಅದ್ಭುತವಾಗಿ ಬೆಳೆಯುತ್ತಾನೆ ಎಂದು ಹೇಳಿದ್ದಾರೆ.

World Youth Skill Day 2021: ಯುವಜನರ ಕೌಶಲಾಭಿವೃದ್ಧಿ ರಾಷ್ಟ್ರೀಯ ಅಗತ್ಯತೆ: ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
| Updated By: Lakshmi Hegde

Updated on: Jul 15, 2021 | 6:17 PM

ಈಗಿನ ಹೊಸ ಪೀಳಿಗೆಯ ಯುವಜನರ ಕೌಶಲಾಭಿವೃದ್ಧಿ ಮಾಡುವುದು ರಾಷ್ಟ್ರೀಯ ಅಗತ್ಯಗಳಲ್ಲಿ ಒಂದು. ನಮ್ಮ ನೂತನ ಯೋಜನೆ ಆತ್ಮನಿರ್ಭರ ಭಾರತಕ್ಕೆ ಬಹುದೊಡ್ಡ ಅಡಿಪಾಯವೂ ಹೌದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಹೇಳಿದರು. ಇಂದು ವಿಶ್ವ ಯುವ ಕೌಶಲಾಭಿವೃದ್ಧಿ ದಿನದ ನಿಮಿತ್ತ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪಿಎಂ ಮೋದಿ, ಕೊರೊನಾ ಸಾಂಕ್ರಾಮಿಕ ಕಾರಣದ ಮಧ್ಯೆ ಇಂದು ಎರಡನೇ ಬಾರಿಗೆ ವಿಶ್ವ ಯುವ ಕೌಶಲ್ಯ ದಿನವನ್ನು ಆಚರಿಸುತ್ತಿದ್ದೇವೆ. ಈ ಜಾಗತಿಕ ಸಾಂಕ್ರಾಮಿಕ ರೋಗ ವಿಶ್ವ ಯುವ ಕೌಶಲ್ಯ ದಿನದ ಮಹತ್ವವನ್ನು ಹೆಚ್ಚಿಸಿದೆ ಎಂದರು.

ನಮ್ಮ ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆಯಡಿ ಸುಮಾರು 1.25 ಕೋಟಿ ಯುವಕರು ತರಬೇತಿ ಪಡೆಯುತ್ತಿದ್ದಾರೆ. ಇದು ತುಂಬ ಸಂತೋಷದ ವಿಷಯ ಎಂದು ಹೇಳಿದ ಪ್ರಧಾನಿ ಮೋದಿ, ಕೌಶಲ, ಮರು ಕೌಶಲ ಮತ್ತು ಕೌಶಲ ವೃದ್ಧಿಯ ಬಗ್ಗೆ ಮರು ಉಚ್ಚರಿಸಿದರು. ಈ ದೇಶದ ಯುವಕರಲ್ಲಿ ಕೌಶಲಾಭಿವೃದ್ಧಿ ಮಾಡುವ ಅಗತ್ಯತೆ ಎಷ್ಟಿದೆ ಎಂಬುದರ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.  ಯುವಜನರನ್ನು ಕೌಶಲ, ಮರುಕೌಶಲ, ಕೌಶಲ ವೃದ್ಧಿಗೆ ತೆರೆದುಕೊಳ್ಳುವಂತೆ ಮಾಡುವ ಯೋಜನೆ ಅವಿರತವಾಗಿ ಸಾಗಬೇಕು. ತಂತ್ರಜ್ಞಾನ ವೇಗವಾಗಿ ಬದಲಾಗುತ್ತಿರುವುದರಿಂದ ಕೌಶಲಾಭಿವೃದ್ಧಿ ಕಾರ್ಯ ತ್ವರಿತವಾಗಿ, ಆದ್ಯತೆ ಮೇರೆಗೆ ನಡೆಯಬೇಕು ಎಂದೂ ತಿಳಿಸಿದರು.

ದೈನಂದಿನ ಅಗತ್ಯಗಳಿಗೆ ಕೌಶಲ ಅದೆಷ್ಟು ಮುಖ್ಯ ಎಂಬುದನ್ನು ವಿವರಿಸಿದ ಪ್ರಧಾನಿ ಮೋದಿ, ಗಳಿಕೆಯೊಂದಿಗೆ ಕಲಿಕೆ ನಿಲ್ಲಬಾರದು. ಕೌಶಲಗಳನ್ನು ರೂಢಿಸಿಕೊಂಡು, ನುರಿತಿರುವ ವ್ಯಕ್ತಿ ಅದ್ಭುತವಾಗಿ ಬೆಳೆಯುತ್ತಾನೆ. ಕೌಶಲಯುತ ಮತ್ತು ಸ್ಮಾರ್ಟ್ ಆಗಿರುವ ಮಾನವ ಶಕ್ತಿಯನ್ನು ಜಗತ್ತಿಗೆ ನೀಡುವ ಭಾರತದ ಪರಿಕಲ್ಪನೆ ಸಾಕಾರವಾಗಲು ಯುವಜನರಲ್ಲಿ ಸ್ಕಿಲ್ ಡೆವಲಪ್ಮೆಂಟ್ ತುಂಬ ಮುಖ್ಯ ಎಂದು ನರೇಂದ್ರ ಮೋದಿ ಹೇಳಿದರು. ಹಾಗೇ, ದುರ್ಬಲ ವರ್ಗದವರಲ್ಲಿ ಕೌಶಲ ಬೆಳೆಸಲು ಒತ್ತುಕೊಟ್ಟ ಬಾಬಾ ಸಾಹೇಬ್​ ಅಂಬೇಡ್ಕರ್​ ಅವರನ್ನೂ ಉಲ್ಲೇಖಿಸಿದರು.

ಇದನ್ನೂ ಓದಿ: Jair Bolsonaro: 10 ದಿನಗಳಿಂದಲೂ ನಿಲ್ಲದ ಬಿಕ್ಕಳಿಕೆ; ಆಸ್ಪತ್ರೆಗೆ ದಾಖಲಾದ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೋನಾರೋ

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?