AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Youth Skill Day 2021: ಯುವಜನರ ಕೌಶಲಾಭಿವೃದ್ಧಿ ರಾಷ್ಟ್ರೀಯ ಅಗತ್ಯತೆ: ಪ್ರಧಾನಿ ಮೋದಿ

ದೈನಂದಿನ ಅಗತ್ಯಗಳಿಗೆ ಕೌಶಲ ಅದೆಷ್ಟು ಮುಖ್ಯ ಎಂಬುದನ್ನು ವಿವರಿಸಿದ ಪ್ರಧಾನಿ ಮೋದಿ, ಗಳಿಕೆಯೊಂದಿಗೆ ಕಲಿಕೆ ನಿಲ್ಲಬಾರದು. ಕೌಶಲಗಳನ್ನು ರೂಢಿಸಿಕೊಂಡು, ನುರಿತಿರುವ ವ್ಯಕ್ತಿ ಅದ್ಭುತವಾಗಿ ಬೆಳೆಯುತ್ತಾನೆ ಎಂದು ಹೇಳಿದ್ದಾರೆ.

World Youth Skill Day 2021: ಯುವಜನರ ಕೌಶಲಾಭಿವೃದ್ಧಿ ರಾಷ್ಟ್ರೀಯ ಅಗತ್ಯತೆ: ಪ್ರಧಾನಿ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on: Jul 15, 2021 | 6:17 PM

Share

ಈಗಿನ ಹೊಸ ಪೀಳಿಗೆಯ ಯುವಜನರ ಕೌಶಲಾಭಿವೃದ್ಧಿ ಮಾಡುವುದು ರಾಷ್ಟ್ರೀಯ ಅಗತ್ಯಗಳಲ್ಲಿ ಒಂದು. ನಮ್ಮ ನೂತನ ಯೋಜನೆ ಆತ್ಮನಿರ್ಭರ ಭಾರತಕ್ಕೆ ಬಹುದೊಡ್ಡ ಅಡಿಪಾಯವೂ ಹೌದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಹೇಳಿದರು. ಇಂದು ವಿಶ್ವ ಯುವ ಕೌಶಲಾಭಿವೃದ್ಧಿ ದಿನದ ನಿಮಿತ್ತ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪಿಎಂ ಮೋದಿ, ಕೊರೊನಾ ಸಾಂಕ್ರಾಮಿಕ ಕಾರಣದ ಮಧ್ಯೆ ಇಂದು ಎರಡನೇ ಬಾರಿಗೆ ವಿಶ್ವ ಯುವ ಕೌಶಲ್ಯ ದಿನವನ್ನು ಆಚರಿಸುತ್ತಿದ್ದೇವೆ. ಈ ಜಾಗತಿಕ ಸಾಂಕ್ರಾಮಿಕ ರೋಗ ವಿಶ್ವ ಯುವ ಕೌಶಲ್ಯ ದಿನದ ಮಹತ್ವವನ್ನು ಹೆಚ್ಚಿಸಿದೆ ಎಂದರು.

ನಮ್ಮ ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆಯಡಿ ಸುಮಾರು 1.25 ಕೋಟಿ ಯುವಕರು ತರಬೇತಿ ಪಡೆಯುತ್ತಿದ್ದಾರೆ. ಇದು ತುಂಬ ಸಂತೋಷದ ವಿಷಯ ಎಂದು ಹೇಳಿದ ಪ್ರಧಾನಿ ಮೋದಿ, ಕೌಶಲ, ಮರು ಕೌಶಲ ಮತ್ತು ಕೌಶಲ ವೃದ್ಧಿಯ ಬಗ್ಗೆ ಮರು ಉಚ್ಚರಿಸಿದರು. ಈ ದೇಶದ ಯುವಕರಲ್ಲಿ ಕೌಶಲಾಭಿವೃದ್ಧಿ ಮಾಡುವ ಅಗತ್ಯತೆ ಎಷ್ಟಿದೆ ಎಂಬುದರ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.  ಯುವಜನರನ್ನು ಕೌಶಲ, ಮರುಕೌಶಲ, ಕೌಶಲ ವೃದ್ಧಿಗೆ ತೆರೆದುಕೊಳ್ಳುವಂತೆ ಮಾಡುವ ಯೋಜನೆ ಅವಿರತವಾಗಿ ಸಾಗಬೇಕು. ತಂತ್ರಜ್ಞಾನ ವೇಗವಾಗಿ ಬದಲಾಗುತ್ತಿರುವುದರಿಂದ ಕೌಶಲಾಭಿವೃದ್ಧಿ ಕಾರ್ಯ ತ್ವರಿತವಾಗಿ, ಆದ್ಯತೆ ಮೇರೆಗೆ ನಡೆಯಬೇಕು ಎಂದೂ ತಿಳಿಸಿದರು.

ದೈನಂದಿನ ಅಗತ್ಯಗಳಿಗೆ ಕೌಶಲ ಅದೆಷ್ಟು ಮುಖ್ಯ ಎಂಬುದನ್ನು ವಿವರಿಸಿದ ಪ್ರಧಾನಿ ಮೋದಿ, ಗಳಿಕೆಯೊಂದಿಗೆ ಕಲಿಕೆ ನಿಲ್ಲಬಾರದು. ಕೌಶಲಗಳನ್ನು ರೂಢಿಸಿಕೊಂಡು, ನುರಿತಿರುವ ವ್ಯಕ್ತಿ ಅದ್ಭುತವಾಗಿ ಬೆಳೆಯುತ್ತಾನೆ. ಕೌಶಲಯುತ ಮತ್ತು ಸ್ಮಾರ್ಟ್ ಆಗಿರುವ ಮಾನವ ಶಕ್ತಿಯನ್ನು ಜಗತ್ತಿಗೆ ನೀಡುವ ಭಾರತದ ಪರಿಕಲ್ಪನೆ ಸಾಕಾರವಾಗಲು ಯುವಜನರಲ್ಲಿ ಸ್ಕಿಲ್ ಡೆವಲಪ್ಮೆಂಟ್ ತುಂಬ ಮುಖ್ಯ ಎಂದು ನರೇಂದ್ರ ಮೋದಿ ಹೇಳಿದರು. ಹಾಗೇ, ದುರ್ಬಲ ವರ್ಗದವರಲ್ಲಿ ಕೌಶಲ ಬೆಳೆಸಲು ಒತ್ತುಕೊಟ್ಟ ಬಾಬಾ ಸಾಹೇಬ್​ ಅಂಬೇಡ್ಕರ್​ ಅವರನ್ನೂ ಉಲ್ಲೇಖಿಸಿದರು.

ಇದನ್ನೂ ಓದಿ: Jair Bolsonaro: 10 ದಿನಗಳಿಂದಲೂ ನಿಲ್ಲದ ಬಿಕ್ಕಳಿಕೆ; ಆಸ್ಪತ್ರೆಗೆ ದಾಖಲಾದ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೋನಾರೋ

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್