AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rail Roko Agitation: ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್​ ಮಿಶ್ರಾ ವಜಾಕ್ಕೆ ಆಗ್ರಹಿಸಿ ಇಂದು ರೈಲು ತಡೆ ಆಂದೋಲನ

ಅಜಯ್​ ಮಿಶ್ರಾ ಕೇಂದ್ರ ಗೃಹ ಇಲಾಖೆಯಲ್ಲಿ ಇದ್ದಾರೆ. ಅವರನ್ನು ಅಲ್ಲಿಂದ ವಜಾಗೊಳಿಸಿದಂತೂ ನಮಗೆ ನ್ಯಾಯ ಸಿಗುವುದಿಲ್ಲ. ಅವರು ತಮ್ಮ ದ್ವೇಷ, ಶತ್ರುತ್ವ, ಕೋಮು ಸೌಹಾರ್ದತೆ ಕದಡುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

Rail Roko Agitation: ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್​ ಮಿಶ್ರಾ ವಜಾಕ್ಕೆ ಆಗ್ರಹಿಸಿ ಇಂದು ರೈಲು ತಡೆ ಆಂದೋಲನ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 18, 2021 | 9:28 AM

Share

ದೆಹಲಿ: ಲಖಿಂಪುರ ಖೇರಿ ಹಿಂಸಾಚಾರ(Lakhimpur Kheri Violence) ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರಾಗಿರುವ ಆಶೀಶ್ ಮಿಶ್ರಾ ತಂದೆ, ಕೇಂದ್ರ ಸಚಿವ ಅಜಯ್​ ಮಿಶ್ರಾ ತೇನಿಯವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಇಂದು ಸಂಯುಕ್ತ ಕಿಸಾನ್​ ಮೋರ್ಚಾ (SKM) ರೈತ ಸಂಘಟನೆ ರಾಷ್ಟ್ರಾದ್ಯಂತ ರೈಲು ತಡೆ (Rail Roko)ಆಂದೋಲನಕ್ಕೆ ಕರೆ ನೀಡಿದೆ.   ಈ ಬಗ್ಗೆ ಎಸ್​​ಕೆಎಂ ಹೇಳಿಕೆ ಬಿಡುಗಡೆ ಮಾಡಿದ್ದು, ದೇಶಾದ್ಯಂತ ರೈತ ಸಂಘಟನೆಗಳು ಬೆಳಗ್ಗೆ 10ಗಂಟೆಯಿಂದ ಸಂಜೆ ನಾಲ್ಕು ಗಂಟೆವರೆಗೆ ಅಂದರೆ ಸುಮಾರು 6ತಾಸು ರೈಲು ತಡೆ ನಡೆಸಬೇಕು. ಆದರೆ ಪ್ರತಿಭಟನೆ ಶಾಂತಿಯುತವಾಗಿ ನಡೆಯಬೇಕು. ರೈಲ್ವೆ ಇಲಾಖೆಯ ಆಸ್ತಿಗೆ ಯಾವುದೇ ಹಾನಿಯಾಗಬಾರದು ಎಂದು ತಿಳಿಸಿದೆ. 

ಅಜಯ್​ ಮಿಶ್ರಾ ಕೇಂದ್ರ ಗೃಹ ಇಲಾಖೆಯಲ್ಲಿ ಇದ್ದಾರೆ. ಅವರನ್ನು ಅಲ್ಲಿಂದ ವಜಾಗೊಳಿಸಿದಂತೂ ನಮಗೆ ನ್ಯಾಯ ಸಿಗುವುದಿಲ್ಲ. ಅವರು ತಮ್ಮ ದ್ವೇಷ, ಶತ್ರುತ್ವ, ಕೋಮು ಸೌಹಾರ್ದತೆ ಕದಡುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ. ಹಿಂದೂ-ಸಿಖ್​​ರ ನಡುವೆ ದ್ವೇಷ ಹುಟ್ಟುಹಾಕುವಂತೆ ಮಾತನಾಡಿದ್ದಾರೆ. ಹಾಗೇ, ಪ್ರತಿಭಟನಾನಿರತ ಗುಂಪಿಗೆ ಡಿಕ್ಕಿ ಹೊಡೆಯಲು ಅವರ ವಾಹನ ಬಳಕೆಯಾಗಿದೆ ಮತ್ತು ಅವರ ಪುತ್ರ ರೈತನೊಬ್ಬನಿಗೆ ಗುಂಡುಹಾರಿಸಿದ್ದಾರೆ ಎಂದು ಸಂಯುಕ್ತ ಕಿಸಾನ್​ ಮೋರ್ಚಾ ತಮ್ಮ ಹೇಳಿಕೆಯಲ್ಲಿ ತಿಳಿಸಿದೆ.

ಆದರೆ ಅಜಯ್ ಮಿಶ್ರಾ ತೇನಿ ಈಗಲೂ ಕೂಡ ತನ್ನ ಪುತ್ರ ಘಟನೆ ನಡೆದ ಸಂದರ್ಭದಲ್ಲಿ ಅಲ್ಲಿರಲಿಲ್ಲ ಎಂದೇ ಪ್ರತಿಪಾದಿಸುತ್ತಿದ್ದಾರೆ. ಇನ್ನು ಈ ಮಧ್ಯೆ ಬಿಕೆಯು ನಾಯಕ ರಾಕೇಶ್​ ಟಿಕಾಯತ್​ ಕೂಡ ಲಖಿಂಪುರ ಖೇರಿ ಹಿಂಸಾಚಾರ ತನಿಖೆ ಬಗ್ಗೆ ಕೆಲವು ಅಸಮಾಧಾನ ಹೊರಹಾಕಿದ್ದಾರೆ. ಅಜಯ್​ ಮಿಶ್ರಾ ತೇನಿಯನ್ನು ಸ್ಥಾನದಿಂದ ತೆಗೆದುಹಾಕದ ವಿನಃ ನ್ಯಾಯಸಮ್ಮತ ತನಿಖೆ ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ. ಅಜಯ್​ ಮಿಶ್ರಾ ವಜಾಕ್ಕೆ ಕಾಂಗ್ರೆಸ್​ ಕೂಡ ಒತ್ತಾಯ ಮಾಡುತ್ತಿದೆ.

ಇದನ್ನೂ ಓದಿ: ನಟಿ ಸವಿ ಮಾದಪ್ಪ ಸಾವಿನ ಸತ್ಯ ಬಯಲು; ಪೊಲೀಸರ ಕೈ ಸೇರಿದ ಮರಣೋತ್ತರ ಪರೀಕ್ಷೆ ವರದಿ

ನೀರಾವರಿ ಯೋಜನೆಯ ವಿಚಾರಕ್ಕೆ ಭುಗಿಲೆದ್ದ ಅಸಮಾಧಾನ, ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ದೂರು ನೀಡುವುದಾಗಿ ಸುರೇಶ್‌ಗೌಡ ಎಚ್ಚರಿಕೆ

Published On - 8:46 am, Mon, 18 October 21

Follow Us
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ