AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rail Roko Agitation: ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್​ ಮಿಶ್ರಾ ವಜಾಕ್ಕೆ ಆಗ್ರಹಿಸಿ ಇಂದು ರೈಲು ತಡೆ ಆಂದೋಲನ

ಅಜಯ್​ ಮಿಶ್ರಾ ಕೇಂದ್ರ ಗೃಹ ಇಲಾಖೆಯಲ್ಲಿ ಇದ್ದಾರೆ. ಅವರನ್ನು ಅಲ್ಲಿಂದ ವಜಾಗೊಳಿಸಿದಂತೂ ನಮಗೆ ನ್ಯಾಯ ಸಿಗುವುದಿಲ್ಲ. ಅವರು ತಮ್ಮ ದ್ವೇಷ, ಶತ್ರುತ್ವ, ಕೋಮು ಸೌಹಾರ್ದತೆ ಕದಡುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

Rail Roko Agitation: ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್​ ಮಿಶ್ರಾ ವಜಾಕ್ಕೆ ಆಗ್ರಹಿಸಿ ಇಂದು ರೈಲು ತಡೆ ಆಂದೋಲನ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Oct 18, 2021 | 9:28 AM

Share

ದೆಹಲಿ: ಲಖಿಂಪುರ ಖೇರಿ ಹಿಂಸಾಚಾರ(Lakhimpur Kheri Violence) ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರಾಗಿರುವ ಆಶೀಶ್ ಮಿಶ್ರಾ ತಂದೆ, ಕೇಂದ್ರ ಸಚಿವ ಅಜಯ್​ ಮಿಶ್ರಾ ತೇನಿಯವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಇಂದು ಸಂಯುಕ್ತ ಕಿಸಾನ್​ ಮೋರ್ಚಾ (SKM) ರೈತ ಸಂಘಟನೆ ರಾಷ್ಟ್ರಾದ್ಯಂತ ರೈಲು ತಡೆ (Rail Roko)ಆಂದೋಲನಕ್ಕೆ ಕರೆ ನೀಡಿದೆ.   ಈ ಬಗ್ಗೆ ಎಸ್​​ಕೆಎಂ ಹೇಳಿಕೆ ಬಿಡುಗಡೆ ಮಾಡಿದ್ದು, ದೇಶಾದ್ಯಂತ ರೈತ ಸಂಘಟನೆಗಳು ಬೆಳಗ್ಗೆ 10ಗಂಟೆಯಿಂದ ಸಂಜೆ ನಾಲ್ಕು ಗಂಟೆವರೆಗೆ ಅಂದರೆ ಸುಮಾರು 6ತಾಸು ರೈಲು ತಡೆ ನಡೆಸಬೇಕು. ಆದರೆ ಪ್ರತಿಭಟನೆ ಶಾಂತಿಯುತವಾಗಿ ನಡೆಯಬೇಕು. ರೈಲ್ವೆ ಇಲಾಖೆಯ ಆಸ್ತಿಗೆ ಯಾವುದೇ ಹಾನಿಯಾಗಬಾರದು ಎಂದು ತಿಳಿಸಿದೆ. 

ಅಜಯ್​ ಮಿಶ್ರಾ ಕೇಂದ್ರ ಗೃಹ ಇಲಾಖೆಯಲ್ಲಿ ಇದ್ದಾರೆ. ಅವರನ್ನು ಅಲ್ಲಿಂದ ವಜಾಗೊಳಿಸಿದಂತೂ ನಮಗೆ ನ್ಯಾಯ ಸಿಗುವುದಿಲ್ಲ. ಅವರು ತಮ್ಮ ದ್ವೇಷ, ಶತ್ರುತ್ವ, ಕೋಮು ಸೌಹಾರ್ದತೆ ಕದಡುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ. ಹಿಂದೂ-ಸಿಖ್​​ರ ನಡುವೆ ದ್ವೇಷ ಹುಟ್ಟುಹಾಕುವಂತೆ ಮಾತನಾಡಿದ್ದಾರೆ. ಹಾಗೇ, ಪ್ರತಿಭಟನಾನಿರತ ಗುಂಪಿಗೆ ಡಿಕ್ಕಿ ಹೊಡೆಯಲು ಅವರ ವಾಹನ ಬಳಕೆಯಾಗಿದೆ ಮತ್ತು ಅವರ ಪುತ್ರ ರೈತನೊಬ್ಬನಿಗೆ ಗುಂಡುಹಾರಿಸಿದ್ದಾರೆ ಎಂದು ಸಂಯುಕ್ತ ಕಿಸಾನ್​ ಮೋರ್ಚಾ ತಮ್ಮ ಹೇಳಿಕೆಯಲ್ಲಿ ತಿಳಿಸಿದೆ.

ಆದರೆ ಅಜಯ್ ಮಿಶ್ರಾ ತೇನಿ ಈಗಲೂ ಕೂಡ ತನ್ನ ಪುತ್ರ ಘಟನೆ ನಡೆದ ಸಂದರ್ಭದಲ್ಲಿ ಅಲ್ಲಿರಲಿಲ್ಲ ಎಂದೇ ಪ್ರತಿಪಾದಿಸುತ್ತಿದ್ದಾರೆ. ಇನ್ನು ಈ ಮಧ್ಯೆ ಬಿಕೆಯು ನಾಯಕ ರಾಕೇಶ್​ ಟಿಕಾಯತ್​ ಕೂಡ ಲಖಿಂಪುರ ಖೇರಿ ಹಿಂಸಾಚಾರ ತನಿಖೆ ಬಗ್ಗೆ ಕೆಲವು ಅಸಮಾಧಾನ ಹೊರಹಾಕಿದ್ದಾರೆ. ಅಜಯ್​ ಮಿಶ್ರಾ ತೇನಿಯನ್ನು ಸ್ಥಾನದಿಂದ ತೆಗೆದುಹಾಕದ ವಿನಃ ನ್ಯಾಯಸಮ್ಮತ ತನಿಖೆ ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ. ಅಜಯ್​ ಮಿಶ್ರಾ ವಜಾಕ್ಕೆ ಕಾಂಗ್ರೆಸ್​ ಕೂಡ ಒತ್ತಾಯ ಮಾಡುತ್ತಿದೆ.

ಇದನ್ನೂ ಓದಿ: ನಟಿ ಸವಿ ಮಾದಪ್ಪ ಸಾವಿನ ಸತ್ಯ ಬಯಲು; ಪೊಲೀಸರ ಕೈ ಸೇರಿದ ಮರಣೋತ್ತರ ಪರೀಕ್ಷೆ ವರದಿ

ನೀರಾವರಿ ಯೋಜನೆಯ ವಿಚಾರಕ್ಕೆ ಭುಗಿಲೆದ್ದ ಅಸಮಾಧಾನ, ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ದೂರು ನೀಡುವುದಾಗಿ ಸುರೇಶ್‌ಗೌಡ ಎಚ್ಚರಿಕೆ

Published On - 8:46 am, Mon, 18 October 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!