Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನ ಎಸ್​ಕೆಎಸ್​ಎಸ್​ಎಫ್ ಕನ್ನಡ ಸಂಘಟನೆ ವತಿಯಿಂದ ತಾಯಿನಾಡಿಗೆ ಆಕ್ಸಿಜನ್ ಸಿಲಿಂಡರ್ ಮತ್ತು ಮೆಡಿಕಲ್ ಕಿಟ್​ ರವಾನೆ

ಮೇ 22ರ ಶನಿವಾರ ಬೆಳಿಗ್ಗೆ SKSSF ಕರ್ನಾಟಕ ಯುಎಇ ಸಮಿತಿಯ ಅಧ್ಯಕ್ಷರಾದ ಸಯ್ಯದ್ ಅಸ್ಗರ್ ಅಲೀ ತಂಙಲ್ ಅವರ ನೇತೃತ್ವದಲ್ಲಿ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಹುಮಾನ್ಯ ಸುಲೈಮಾನ್ ಮೌಲವಿ ಕಲ್ಲೆಗ ಅವರು ದುವಾದೊಂದಿಗೆ ಆಕ್ಸಿಜನ್ ಸಿಲಿಂಡರ್ ಮತ್ತು ಮೆಡಿಕಲ್ ಕಿಟ್​ಗಳನ್ನು ಕಾರ್ಗೊ ಮೂಲಕ ತಾಯಿನಾಡಿಗೆ ಕಳುಹಿಸಿಕೊಟ್ಟಿದ್ದಾರೆ.

ದುಬೈನ ಎಸ್​ಕೆಎಸ್​ಎಸ್​ಎಫ್ ಕನ್ನಡ ಸಂಘಟನೆ ವತಿಯಿಂದ ತಾಯಿನಾಡಿಗೆ ಆಕ್ಸಿಜನ್ ಸಿಲಿಂಡರ್ ಮತ್ತು ಮೆಡಿಕಲ್ ಕಿಟ್​ ರವಾನೆ
ದುಬೈನ ಎಸ್​ಕೆಎಸ್​ಎಸ್​ಎಫ್ ಕನ್ನಡ ಸಂಘಟನೆ
Follow us
preethi shettigar
|

Updated on:May 23, 2021 | 6:25 PM

ದುಬೈ: ಕೊರೊನಾ ಎರಡನೇ ಅಲೆಯಿಂದಾಗಿ ದೇಶದೆಲ್ಲೇಡೆ ಸಂಕಷ್ಟ ಎದುರಾಗಿದೆ. ಹೀಗಾಗಿ ಕೊರೊನಾ ಆತಂಕವನ್ನು ದೂರ ಮಾಡಲು ದುಬೈನ ಎಸ್​ಕೆಎಸ್​ಎಸ್​ಎಫ್ ಕನ್ನಡ ಸಂಘಟನೆಯ ಸೇವಾ ತಂಡವಾದ ವಿಖಾಯ ಕರ್ನಾಟಕ ಸಹಾಯ ಹಸ್ತ ನೀಡಿದೆ. ಯುಎಇ ವತಿಯಿಂದ #SupportIndia’sCovidFight ಇದರ ಭಾಗವಾಗಿ ತಾಯಿನಾಡಿನಲ್ಲಿ ಕೊವಿಡ್ ರೋಗಿಗಳಿಗೆ ಅತ್ಯಗತ್ಯವಾಗಿರುವ ಆಕ್ಸಿಜನ್ ಸಿಲಿಂಡರ್ ಮತ್ತು ಮೆಡಿಕಲ್ ಕಿಟ್​ಗಳನ್ನು ಕಳುಹಿಸಿ ಕೊಡಲು ನಿರ್ಧರಿಸಿದ್ದು, ಡೊನೆಟ್ ಆಕ್ಸಿಜನ್ ಮತ್ತು ಸೆವ್​ ಲೈಫ್​ ಅಭಿಯಾನವನ್ನು ದುಬೈಯಲ್ಲಿ ಆನ್​ಲೈನ್ ಮೂಲಕ ಆಯೋಜಿಸಲಾಗಿದೆ.

ಈ ಅಭಿಯಾನವನ್ನು ಯಶಸ್ಸಿಗೊಳಿಸಲು ಅನಿವಾಸಿ ಉದ್ಯಮಿಗಳು, ಉದಾರಿ ಧಾನಿಗಳು, ಸಮಿತಿಯ ಪದಾಧಿಕರಿಗಳು ಉತ್ತಮ ರೀತಿಯಲ್ಲಿ ಸಹಕರಿಸಿದರು. ಜನಾಬ್ ಶೆರೀಫ್ ಕಾವು ಮತ್ತು ಜನಾಬ್ ರಫೀಕ್ ಸುರತ್ಕಲ್ ಅವರು ಅಭಿಯಾನದ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಶಿಪ್ ವೇ ಇದರ ಮಾಲೀಕರಾದ ಜನಾಬ್ ಮುಹಮ್ಮದ್ ಹಾರಿಸ್ ಅವರು ದುಬೈನಿಂದ ಮಂಗಳೂರಿಗೆ ಉಚಿತ ಕಾರ್ಗೊ ವ್ಯವಸ್ಥೆ ಏರ್ಪಡಿಸಿ ಸಹಕರಿಸಿದರು.

ಮೇ 22ರ ಶನಿವಾರ ಬೆಳಿಗ್ಗೆ SKSSF ಕರ್ನಾಟಕ ಯುಎಇ ಸಮಿತಿಯ ಅಧ್ಯಕ್ಷರಾದ ಸಯ್ಯದ್ ಅಸ್ಗರ್ ಅಲೀ ತಂಙಲ್ ಅವರ ನೇತೃತ್ವದಲ್ಲಿ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಹುಮಾನ್ಯ ಸುಲೈಮಾನ್ ಮೌಲವಿ ಕಲ್ಲೆಗ ಅವರು ದುವಾದೊಂದಿಗೆ ಆಕ್ಸಿಜನ್ ಸಿಲಿಂಡರ್ ಮತ್ತು ಮೆಡಿಕಲ್ ಕಿಟ್​ಗಳನ್ನು ಕಾರ್ಗೊ ಮೂಲಕ ತಾಯಿನಾಡಿಗೆ ಕಳುಹಿಸಿಕೊಟ್ಟಿದ್ದಾರೆ.

medical kit and oxygen

ಆಕ್ಸಿಜನ್ ಸಿಲಿಂಡರ್ ಮತ್ತು ಮೆಡಿಕಲ್ ಕಿಟ್

ಈ ಸಂದರ್ಭದಲ್ಲಿ SKSSF ಕರ್ನಾಟಕ ಯುಎಇ ಟ್ರೆಂಡ್ ಚೆರ್​ಮೆನ್​ ನೂರ್ ಮುಹಮ್ಮದ್ ನೀರ್ಕಜೆ, SKSSF ವಿಖಾಯ ಯುಎಇ ಚಯರ್ ಚೆರ್​ಮೆನ್ ನವಾಝ್ ಬಿಸಿ ರೋಡ್, ಕಾರ್ಯದರ್ಶಿ ಜನಾಬ್ ನಾಸಿರ್ ಬಪ್ಪಲಿಗೆ, ಕೋಶಾದಿಕಾರಿ ಜನಾಬ್ ಸಿರಾಜ್ ಬಿಸಿ ರೋಡ್, ಕನ್ವೀನರ್ ಜನಾಬ್ ಅಬ್ದುಲ್ ಅಝೀಝ್ ಸೋಂಪಾಡಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಶೆರೀಫ್ ಕೊಡಿನೀರು, ಜನಾಬ್ ನಿಝಾಮ್ ತೋಡಾರು, ಶಬೀರ್ ಪರಂಗಿಪೇಟೆ, ಜೌಹರ್ ಉರುಮನೆ, ರಫೀಕಲಿ ಕೊಡಗು ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ:

ಕೊರೊನಾ ಸೋಂಕಿನಿಂದ ಸಾಯುತ್ತಿದ್ದ ತನ್ನ ತಾಯಿಗೆ ವಿಡಿಯೋ ಕರೆಯಲ್ಲಿ ಹಾಡು ಹೇಳಿ ವಿದಾಯ ಹೇಳಿದ ಮಗ; ಮನಕಲಕುವ ಕಥೆ ಹಂಚಿಕೊಂಡ ವೈದ್ಯರು

ಕೊರೊನಾ ಚಿಕಿತ್ಸೆಗೆ ನೆರವು, ಆರ್ಥಿಕ ಸಹಾಯ, ಅರ್ಹ ಮಕ್ಕಳಿಗೆ ಉಚಿತ ಶಿಕ್ಷಣ; ಸುತ್ತೂರು ಮಠದಿಂದ ಹಲವು ಸತ್ಕಾರ್ಯ

Published On - 6:21 pm, Sun, 23 May 21

VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ