AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ತಿಂಗಳಲ್ಲಿ ಅಯೋಧ್ಯೆಯಲ್ಲಿ ಗಗನಚುಂಬಿ ಮಂದಿರ ನಿರ್ಮಾಣವಾಗುತ್ತೆ -ಅಮಿತ್ ಶಾ

ಜಾರ್ಖಂಡ್: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲೇಬೇಕು ಅನ್ನೋದು ಹಿಂದೂಗಳ ಕನಸು. ಶತಮಾನದ ಕನಸೀಗ ನನಸಾಗುವ ಕಾಲ ಬಂದುಬಿಟ್ಟಿದೆ. ಅಷ್ಟಕ್ಕೂ ಈ ಮಾತು ಹೇಳಿದ್ದು ಬೇಱರೂ ಅಲ್ಲ, ದೇಶದ ಗೃಹಸಚಿವರು. ಇಂಥ ಭರವಸೆಯೊಂದನ್ನ ಅಮಿತ್ ಶಾ ನಿನ್ನೆ ನೀಡಿದ್ದಾರೆ. ಹಾಗೇ ದೇಗುಲ ನಿರ್ಮಾಣಕ್ಕೆ 4 ತಿಂಗಳು ಸಾಕು ಅಂತಾ ಡೆಡ್​ಲೈನ್ ಕೂಡ ಫಿಕ್ಸ್ ಮಾಡಿದ್ದಾರೆ. ದೇಶದಲ್ಲಿ ಅಯೋಧ್ಯೆಯ ವಿವಾದಿತ ಭೂಮಿ ಬಗ್ಗೆ ನಡೆದಷ್ಟು ಚರ್ಚೆ, ಯಾವ ವಿಚಾರದ ಬಗ್ಗೆಯೂ ನಡೆದಿಲ್ಲ. ಇದೇ ಕಾರಣಕ್ಕೆ ಅಯೋಧ್ಯೆ ವಿವಾದ ರಾಷ್ಟ್ರಮಟ್ಟದಲ್ಲಿ ಮಾತ್ರವಲ್ಲದೆ, ಅಂತಾರಾಷ್ಟ್ರೀಯವಾಗಿಯೂ […]

4 ತಿಂಗಳಲ್ಲಿ ಅಯೋಧ್ಯೆಯಲ್ಲಿ ಗಗನಚುಂಬಿ ಮಂದಿರ ನಿರ್ಮಾಣವಾಗುತ್ತೆ -ಅಮಿತ್ ಶಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 17, 2019 | 7:00 AM

Share

ಜಾರ್ಖಂಡ್: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲೇಬೇಕು ಅನ್ನೋದು ಹಿಂದೂಗಳ ಕನಸು. ಶತಮಾನದ ಕನಸೀಗ ನನಸಾಗುವ ಕಾಲ ಬಂದುಬಿಟ್ಟಿದೆ. ಅಷ್ಟಕ್ಕೂ ಈ ಮಾತು ಹೇಳಿದ್ದು ಬೇಱರೂ ಅಲ್ಲ, ದೇಶದ ಗೃಹಸಚಿವರು. ಇಂಥ ಭರವಸೆಯೊಂದನ್ನ ಅಮಿತ್ ಶಾ ನಿನ್ನೆ ನೀಡಿದ್ದಾರೆ. ಹಾಗೇ ದೇಗುಲ ನಿರ್ಮಾಣಕ್ಕೆ 4 ತಿಂಗಳು ಸಾಕು ಅಂತಾ ಡೆಡ್​ಲೈನ್ ಕೂಡ ಫಿಕ್ಸ್ ಮಾಡಿದ್ದಾರೆ.

ದೇಶದಲ್ಲಿ ಅಯೋಧ್ಯೆಯ ವಿವಾದಿತ ಭೂಮಿ ಬಗ್ಗೆ ನಡೆದಷ್ಟು ಚರ್ಚೆ, ಯಾವ ವಿಚಾರದ ಬಗ್ಗೆಯೂ ನಡೆದಿಲ್ಲ. ಇದೇ ಕಾರಣಕ್ಕೆ ಅಯೋಧ್ಯೆ ವಿವಾದ ರಾಷ್ಟ್ರಮಟ್ಟದಲ್ಲಿ ಮಾತ್ರವಲ್ಲದೆ, ಅಂತಾರಾಷ್ಟ್ರೀಯವಾಗಿಯೂ ಸುದ್ದಿಯಾಗಿತ್ತು. ನವೆಂಬರ್ 9ರಂದು ಸುಪ್ರೀಂ ನೀಡಿದ ಅಂತಿಮ ತೀರ್ಪಿನ ಬಳಿಕ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಬೇಕು ಅನ್ನೋ ಹಿಂದೂಗಳ ಶತಮಾನದ ಕನಸು ನನಸಾಗುವ ಕಾಲ ಸನ್ನಿಹಿತವಾಗಿತ್ತು. ಇದೀಗ ಎಲ್ಲಾ ಕುತೂಹಲಗಳಿಗೂ ಅಮಿತ್ ಶಾ ತೆರೆ ಎಳೆದಿದ್ದು, ಮಂದಿರ ಯಾವಾಗ ನಿರ್ಮಾಣವಾಗುತ್ತೆ ಅನ್ನೋದನ್ನ ಬಹಿರಂಗಪಡಿಸಿದ್ದಾರೆ.

4 ತಿಂಗಳ ಒಳಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪಕ್ಕಾ! ಹೌದು ಇಂತಹದ್ದೊಂದು ಘೋಷಣೆ ಮಾಡಿರುವ ಅಮಿತ್ ಶಾ ಹಿಂದೂಗಳ ಬಹುದಿನದ ಕನಸು ನನಸಾಗುವ ಮುನ್ಸೂಚನೆ ನೀಡಿದ್ದಾರೆ. ನಿನ್ನೆ ಜಾರ್ಖಂಡ್ ಪ್ರಚಾರದಲ್ಲಿ ಭಾಗವಹಿಸಿದ್ದ ಅಮಿತ್ ಶಾ, ಪದೇ ಪದೆ ಈ ವಿಚಾರವನ್ನ ಪ್ರಸ್ತಾಪಿಸಿದ್ರು. 4 ತಿಂಗಳೊಳಗೆ ಅಯೋಧ್ಯೆಯಲ್ಲಿ ಗಗನಚುಂಬಿ ಮಂದಿರ ನಿರ್ಮಾಣವಾಗುತ್ತೆ ಅನ್ನೋ ಭರವಸೆಯನ್ನ ನೀಡಿದ್ದಾರೆ. ಆ ಮೂಲಕ ರಾಮಮಂದಿರ ನಿರ್ಮಾಣದ ಶತಮಾನಗಳ ಕೌತುಕಕ್ಕೆ ತೆರೆ ಎಳೆದಿದ್ದಾರೆ.

ಕಪಿಲ್ ಸಿಬಲ್ ವಿರುದ್ಧ ಅಮಿತ್ ಶಾ ಬ್ರಹ್ಮಾಸ್ತ್ರ! ಅಂದಹಾಗೆ ಸುಪ್ರೀಂ ತೀರ್ಪು ನೀಡಿದ 3 ತಿಂಗಳೊಳಗೆ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಟ್ರಸ್ಟ್ ರಚಿಸಬೇಕಾಗಿದೆ. ಬಳಿಕ ಮಂದಿರ ನಿರ್ಮಾಣದ ಕೆಲಸ ಆರಂಭವಾಗಬೇಕು. ಆದರೆ ಗೃಹ ಸಚಿವ ಶಾ, ಇನ್ನೂ ನಾಲ್ಕೇ ತಿಂಗಳಲ್ಲಿ ಮಂದಿರ ನಿರ್ಮಾಣ ಆಗಲಿದೆ ಅಂತಿದ್ದಾರೆ. ಮತ್ತೊಂದ್ಕಡೆ ಮಂದಿರ ನಿರ್ಮಾಣ ಆಗಬೇಕೋ-ಬೇಡವೋ ಅಂತಾ ಜನರನ್ನೇ ಪ್ರಶ್ನಿಸಿದ ಅಮಿತ್ ಶಾ, ಪ್ರಜೆಗಳಿಂದಲೇ ಮಂದಿರ ನಿರ್ಮಾಣದ ಘೋಷಣೆ ಕೂಗಿಸಿ ವಿಪಕ್ಷಗಳಿಗೆ ಸರಿಯಾಗೇ ತಿರುಗೇಟು ನೀಡಿದ್ರು. ಅದ್ರಲ್ಲೂ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಕೀಲ ಕಪಿಲ್ ಸಿಬಲ್ ವಿರುದ್ಧ ಬ್ರಹ್ಮಾಸ್ತ್ರವನ್ನೇ ಪ್ರಯೋಗಿಸಿದ್ರು.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್