AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ತಿಂಗಳಲ್ಲಿ ಅಯೋಧ್ಯೆಯಲ್ಲಿ ಗಗನಚುಂಬಿ ಮಂದಿರ ನಿರ್ಮಾಣವಾಗುತ್ತೆ -ಅಮಿತ್ ಶಾ

ಜಾರ್ಖಂಡ್: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲೇಬೇಕು ಅನ್ನೋದು ಹಿಂದೂಗಳ ಕನಸು. ಶತಮಾನದ ಕನಸೀಗ ನನಸಾಗುವ ಕಾಲ ಬಂದುಬಿಟ್ಟಿದೆ. ಅಷ್ಟಕ್ಕೂ ಈ ಮಾತು ಹೇಳಿದ್ದು ಬೇಱರೂ ಅಲ್ಲ, ದೇಶದ ಗೃಹಸಚಿವರು. ಇಂಥ ಭರವಸೆಯೊಂದನ್ನ ಅಮಿತ್ ಶಾ ನಿನ್ನೆ ನೀಡಿದ್ದಾರೆ. ಹಾಗೇ ದೇಗುಲ ನಿರ್ಮಾಣಕ್ಕೆ 4 ತಿಂಗಳು ಸಾಕು ಅಂತಾ ಡೆಡ್​ಲೈನ್ ಕೂಡ ಫಿಕ್ಸ್ ಮಾಡಿದ್ದಾರೆ. ದೇಶದಲ್ಲಿ ಅಯೋಧ್ಯೆಯ ವಿವಾದಿತ ಭೂಮಿ ಬಗ್ಗೆ ನಡೆದಷ್ಟು ಚರ್ಚೆ, ಯಾವ ವಿಚಾರದ ಬಗ್ಗೆಯೂ ನಡೆದಿಲ್ಲ. ಇದೇ ಕಾರಣಕ್ಕೆ ಅಯೋಧ್ಯೆ ವಿವಾದ ರಾಷ್ಟ್ರಮಟ್ಟದಲ್ಲಿ ಮಾತ್ರವಲ್ಲದೆ, ಅಂತಾರಾಷ್ಟ್ರೀಯವಾಗಿಯೂ […]

4 ತಿಂಗಳಲ್ಲಿ ಅಯೋಧ್ಯೆಯಲ್ಲಿ ಗಗನಚುಂಬಿ ಮಂದಿರ ನಿರ್ಮಾಣವಾಗುತ್ತೆ -ಅಮಿತ್ ಶಾ
ಸಾಧು ಶ್ರೀನಾಥ್​
|

Updated on: Dec 17, 2019 | 7:00 AM

Share

ಜಾರ್ಖಂಡ್: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲೇಬೇಕು ಅನ್ನೋದು ಹಿಂದೂಗಳ ಕನಸು. ಶತಮಾನದ ಕನಸೀಗ ನನಸಾಗುವ ಕಾಲ ಬಂದುಬಿಟ್ಟಿದೆ. ಅಷ್ಟಕ್ಕೂ ಈ ಮಾತು ಹೇಳಿದ್ದು ಬೇಱರೂ ಅಲ್ಲ, ದೇಶದ ಗೃಹಸಚಿವರು. ಇಂಥ ಭರವಸೆಯೊಂದನ್ನ ಅಮಿತ್ ಶಾ ನಿನ್ನೆ ನೀಡಿದ್ದಾರೆ. ಹಾಗೇ ದೇಗುಲ ನಿರ್ಮಾಣಕ್ಕೆ 4 ತಿಂಗಳು ಸಾಕು ಅಂತಾ ಡೆಡ್​ಲೈನ್ ಕೂಡ ಫಿಕ್ಸ್ ಮಾಡಿದ್ದಾರೆ.

ದೇಶದಲ್ಲಿ ಅಯೋಧ್ಯೆಯ ವಿವಾದಿತ ಭೂಮಿ ಬಗ್ಗೆ ನಡೆದಷ್ಟು ಚರ್ಚೆ, ಯಾವ ವಿಚಾರದ ಬಗ್ಗೆಯೂ ನಡೆದಿಲ್ಲ. ಇದೇ ಕಾರಣಕ್ಕೆ ಅಯೋಧ್ಯೆ ವಿವಾದ ರಾಷ್ಟ್ರಮಟ್ಟದಲ್ಲಿ ಮಾತ್ರವಲ್ಲದೆ, ಅಂತಾರಾಷ್ಟ್ರೀಯವಾಗಿಯೂ ಸುದ್ದಿಯಾಗಿತ್ತು. ನವೆಂಬರ್ 9ರಂದು ಸುಪ್ರೀಂ ನೀಡಿದ ಅಂತಿಮ ತೀರ್ಪಿನ ಬಳಿಕ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಬೇಕು ಅನ್ನೋ ಹಿಂದೂಗಳ ಶತಮಾನದ ಕನಸು ನನಸಾಗುವ ಕಾಲ ಸನ್ನಿಹಿತವಾಗಿತ್ತು. ಇದೀಗ ಎಲ್ಲಾ ಕುತೂಹಲಗಳಿಗೂ ಅಮಿತ್ ಶಾ ತೆರೆ ಎಳೆದಿದ್ದು, ಮಂದಿರ ಯಾವಾಗ ನಿರ್ಮಾಣವಾಗುತ್ತೆ ಅನ್ನೋದನ್ನ ಬಹಿರಂಗಪಡಿಸಿದ್ದಾರೆ.

4 ತಿಂಗಳ ಒಳಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪಕ್ಕಾ! ಹೌದು ಇಂತಹದ್ದೊಂದು ಘೋಷಣೆ ಮಾಡಿರುವ ಅಮಿತ್ ಶಾ ಹಿಂದೂಗಳ ಬಹುದಿನದ ಕನಸು ನನಸಾಗುವ ಮುನ್ಸೂಚನೆ ನೀಡಿದ್ದಾರೆ. ನಿನ್ನೆ ಜಾರ್ಖಂಡ್ ಪ್ರಚಾರದಲ್ಲಿ ಭಾಗವಹಿಸಿದ್ದ ಅಮಿತ್ ಶಾ, ಪದೇ ಪದೆ ಈ ವಿಚಾರವನ್ನ ಪ್ರಸ್ತಾಪಿಸಿದ್ರು. 4 ತಿಂಗಳೊಳಗೆ ಅಯೋಧ್ಯೆಯಲ್ಲಿ ಗಗನಚುಂಬಿ ಮಂದಿರ ನಿರ್ಮಾಣವಾಗುತ್ತೆ ಅನ್ನೋ ಭರವಸೆಯನ್ನ ನೀಡಿದ್ದಾರೆ. ಆ ಮೂಲಕ ರಾಮಮಂದಿರ ನಿರ್ಮಾಣದ ಶತಮಾನಗಳ ಕೌತುಕಕ್ಕೆ ತೆರೆ ಎಳೆದಿದ್ದಾರೆ.

ಕಪಿಲ್ ಸಿಬಲ್ ವಿರುದ್ಧ ಅಮಿತ್ ಶಾ ಬ್ರಹ್ಮಾಸ್ತ್ರ! ಅಂದಹಾಗೆ ಸುಪ್ರೀಂ ತೀರ್ಪು ನೀಡಿದ 3 ತಿಂಗಳೊಳಗೆ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಟ್ರಸ್ಟ್ ರಚಿಸಬೇಕಾಗಿದೆ. ಬಳಿಕ ಮಂದಿರ ನಿರ್ಮಾಣದ ಕೆಲಸ ಆರಂಭವಾಗಬೇಕು. ಆದರೆ ಗೃಹ ಸಚಿವ ಶಾ, ಇನ್ನೂ ನಾಲ್ಕೇ ತಿಂಗಳಲ್ಲಿ ಮಂದಿರ ನಿರ್ಮಾಣ ಆಗಲಿದೆ ಅಂತಿದ್ದಾರೆ. ಮತ್ತೊಂದ್ಕಡೆ ಮಂದಿರ ನಿರ್ಮಾಣ ಆಗಬೇಕೋ-ಬೇಡವೋ ಅಂತಾ ಜನರನ್ನೇ ಪ್ರಶ್ನಿಸಿದ ಅಮಿತ್ ಶಾ, ಪ್ರಜೆಗಳಿಂದಲೇ ಮಂದಿರ ನಿರ್ಮಾಣದ ಘೋಷಣೆ ಕೂಗಿಸಿ ವಿಪಕ್ಷಗಳಿಗೆ ಸರಿಯಾಗೇ ತಿರುಗೇಟು ನೀಡಿದ್ರು. ಅದ್ರಲ್ಲೂ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಕೀಲ ಕಪಿಲ್ ಸಿಬಲ್ ವಿರುದ್ಧ ಬ್ರಹ್ಮಾಸ್ತ್ರವನ್ನೇ ಪ್ರಯೋಗಿಸಿದ್ರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್