AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ಎಸ್​​ಎಲ್​​ವಿ ಉಡಾವಣೆ ನಂತರ ಸಿಗುತ್ತಿಲ್ಲ ಸಿಗ್ನಲ್; ಸಮಸ್ಯೆ ಬಗ್ಗೆ ಪರಿಶೀಲಿಸುತ್ತಿರುವುದಾಗಿ ಇಸ್ರೋ

ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಉಪಗ್ರಹ ಉಡಾವಣೆ ಕೇಂದ್ರದಿಂದ ಎಸ್ಎಸ್ಎಲ್​ವಿ-ಡಿ1 (SSLV-D1) ಉಪಗ್ರಹ ಉಡ್ಡಯನ ವಾಹನವು ಭಾನುವಾರ (ಆಗಸ್ಟ್ 7) ಬೆಳಿಗ್ಗೆ 9:18ರ ಪೂರ್ವ ನಿಗದಿತ ಸಮಯದಲ್ಲಿ ನಭಕ್ಕೆ ಚಿಮ್ಮಿತು.

ಎಸ್ಎಸ್​​ಎಲ್​​ವಿ ಉಡಾವಣೆ ನಂತರ ಸಿಗುತ್ತಿಲ್ಲ ಸಿಗ್ನಲ್; ಸಮಸ್ಯೆ ಬಗ್ಗೆ ಪರಿಶೀಲಿಸುತ್ತಿರುವುದಾಗಿ ಇಸ್ರೋ
ಎಸ್​​ಎಸ್​​ಎಲ್​​ವಿ
TV9 Web
| Edited By: |

Updated on:Aug 07, 2022 | 1:14 PM

Share

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಅಭಿವೃದ್ಧಿಪಡಿಸಿದ ಸಣ್ಣ ಉಪಗ್ರಹ ಉಡಾವಣಾ ವಾಹನ (SSLV) ಭಾನುವಾರ ಬೆಳಿಗ್ಗೆ ನಭಕ್ಕೆ ಚಿಮ್ಮಿದ್ದು ಕೊನೆಯ ಹಂತದಲ್ಲಿ ಸಿಗ್ನಲ್ ಕಳೆದುಕೊಂಡಿದೆ. ಈ ಉಪಗ್ರಹಗಳ ಸ್ಥಿತಿ ಮತ್ತು ಎಸ್‌ಎಸ್‌ಎಲ್‌ವಿ ಕಾರ್ಯಕ್ಷಮತೆಯನ್ನು ನಾವು ಪರಿಶೀಲಿಸುತ್ತಿದ್ದೇವೆ ಎಂದುಇಸ್ರೋ ಟ್ವೀಟ್ ಮಾಡಿದೆ.  ನಾವು ಕಾರ್ಯಾಚರಣೆಯ ಕೊನೆಯ ಹಂತದಲ್ಲಿ ಮಾಹಿತಿ ಕಳೆದುಕೊಂಡಿದ್ದು ಈ ಬಗ್ಗೆ ಪರಿಶೀಲಿಸುತ್ತಿದ್ದೇವೆ. ನಾವು ಶೀಘ್ರದಲ್ಲೇ ಉಪಗ್ರಹಗಳ ಸ್ಥಿತಿ ಮತ್ತು ವಾಹನದ ಕಾರ್ಯಕ್ಷಮತೆಯ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ಇಸ್ರೋ ಅಧ್ಯಕ್ಷ ಡಾ ಎಸ್. ಸೋಮನಾಥ್ ಹೇಳಿದ್ದಾರೆ. ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಉಪಗ್ರಹ ಉಡಾವಣೆ ಕೇಂದ್ರದಿಂದ ಎಸ್ಎಸ್ಎಲ್​ವಿ-ಡಿ1 (SSLV-D1) ಉಪಗ್ರಹ ಉಡ್ಡಯನ ವಾಹನವು ಭಾನುವಾರ (ಆಗಸ್ಟ್ 7) ಬೆಳಿಗ್ಗೆ 9:18ರ ಪೂರ್ವ ನಿಗದಿತ ಸಮಯದಲ್ಲಿ ನಭಕ್ಕೆ ಚಿಮ್ಮಿತು. AzaadiSAT ಮೂಲಕ ತಲಾ 75 ಶಾಲೆಗಳ ವಿದ್ಯಾರ್ಥಿಗಳು ರೂಪಿಸಿರುವ 50 ಗ್ರಾಂ ತೂಕದ 750 ಪೇಲೋಡ್ಗಳನ್ನು (ಸಣ್ಣ ಉಪಗ್ರಹಗಳು) ಕಕ್ಷೆಗೆ ಸೇರಿಸಲು ಇಸ್ರೋ ಮುಂದಾಗಿದೆ. ಇಸ್ರೋ ರೂಪಿಸಿರುವ EOS-02 ಭೂ ನಿಗಾ ಉಪಗ್ರಹ ಮತ್ತು ಇಸ್ರೋ ಮಾರ್ಗದರ್ಶನದಲ್ಲಿ ದೇಶದ ವಿವಿಧೆಡೆಯ ಗ್ರಾಮೀಣ ವಿದ್ಯಾರ್ಥಿನಿಯರು ರೂಪಿಸಿರುವ ಪುಟ್ಟ ಉಪಗ್ರಹಗಳು (ಪೇಲೋಡ್) ಇವು.

ಉಪಗ್ರಹವನ್ನು ಕಕ್ಷೆಯಲ್ಲಿ ಇರಿಸಲು ಮೂರು ಘನ ಇಂಧನ ಆಧಾರಿತ ಹಂತಗಳು ಮತ್ತು ದ್ರವ ಇಂಧನ ಆಧಾರಿತ ವೇಗ ಟ್ರಿಮ್ಮಿಂಗ್ ಮಾಡ್ಯೂಲ್ (VTM) ಅನ್ನು ಬಳಸುವ ಎಸ್ಎಸ್​​ಎಲ್​​ವಿ ವಾಣಿಜ್ಯ ಉಡಾವಣೆಗೆ ಬೇಕಾದ ತ್ವರಿತ  ಸಮಯವನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ.

ಶ್ರೀಹರಿಕೋಟಾದಲ್ಲಿರುವ ಭಾರತದ ಏಕೈಕ ಬಾಹ್ಯಾಕಾಶ ನಿಲ್ದಾಣದಿಂದ ಬೆಳಿಗ್ಗೆ 9:18 ಕ್ಕೆ ಉಪಗ್ರಹ ಉಡಾವಣೆ ಆಗಿದ್ದು, ಕೋಸ್ಟಿಂಗ್ ಹಂತದಲ್ಲಿ ಮ್ಯಾಪ್ ಮಾಡಲಾದ ಪಥದಿಂದ ಸ್ವಲ್ಪ ವಿಚಲನ ಕಂಡುಬಂದಿದೆ. ಮೂರನೇ ಹಂತದ ಪ್ರತ್ಯೇಕತೆ, VTM ಇಗ್ನಿಷನ್ ಮತ್ತು ಉಪಗ್ರಹ ಇಂಜೆಕ್ಷನ್ ಬಾಹ್ಯಾಕಾಶ ಸಂಸ್ಥೆಯ ಮಿಷನ್ ಬ್ರೋಷರ್‌ನಲ್ಲಿ ಉಲ್ಲೇಖಿಸಿದ್ದಕ್ಕಿಂತ ಸ್ವಲ್ಪ ವಿಳಂಬವಾಗಿದೆ..

ಲಿಫ್ಟ್-ಆಫ್ ಆದ ನಂತರ 738 ಮತ್ತು 788 ಸೆಕೆಂಡ್‌ಗಳಲ್ಲಿ ಉಪಗ್ರಹಗಳು ಬೇರ್ಪಟ್ಟ ನಂತರ ಮಿಷನ್ ಕಂಟ್ರೋಲ್ ರೂಂಗೆ ಯಾವುದೇ ಮಾಹಿತಿ ಸಿಗಲಿಲ್ಲ

ಎಲ್ಎಸ್ಎಲ್​​ವಿ ಡಿ1 ಮೊದಲ ಹಾರಾಟ ಇದೀಗ ಪೂರ್ಣಗೊಂಡಿದೆ. ಎಲ್ಲಾ ಹಂತಗಳು ನಿರೀಕ್ಷೆಯಂತೆ ಕಾರ್ಯವಹಿಸಿವೆ. ಸ್ಥಿರವಾದ ಕಕ್ಷೆಯನ್ನು ಸಾಧಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಕಾರ್ಯಾಚರಣೆಯ ಫಲಿತಾಂಶವನ್ನು ತೀರ್ಮಾನಿಸಲು ನಾವು ಪ್ರಸ್ತುತ ಡೇಟಾವನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದ್ದೇವೆ ಎಂದಿದ್ದಾರೆ ಸೋಮನಾಥ್.

Published On - 12:56 pm, Sun, 7 August 22

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ