Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ಎಸ್​​ಎಲ್​​ವಿ ಉಡಾವಣೆ ನಂತರ ಸಿಗುತ್ತಿಲ್ಲ ಸಿಗ್ನಲ್; ಸಮಸ್ಯೆ ಬಗ್ಗೆ ಪರಿಶೀಲಿಸುತ್ತಿರುವುದಾಗಿ ಇಸ್ರೋ

ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಉಪಗ್ರಹ ಉಡಾವಣೆ ಕೇಂದ್ರದಿಂದ ಎಸ್ಎಸ್ಎಲ್​ವಿ-ಡಿ1 (SSLV-D1) ಉಪಗ್ರಹ ಉಡ್ಡಯನ ವಾಹನವು ಭಾನುವಾರ (ಆಗಸ್ಟ್ 7) ಬೆಳಿಗ್ಗೆ 9:18ರ ಪೂರ್ವ ನಿಗದಿತ ಸಮಯದಲ್ಲಿ ನಭಕ್ಕೆ ಚಿಮ್ಮಿತು.

ಎಸ್ಎಸ್​​ಎಲ್​​ವಿ ಉಡಾವಣೆ ನಂತರ ಸಿಗುತ್ತಿಲ್ಲ ಸಿಗ್ನಲ್; ಸಮಸ್ಯೆ ಬಗ್ಗೆ ಪರಿಶೀಲಿಸುತ್ತಿರುವುದಾಗಿ ಇಸ್ರೋ
ಎಸ್​​ಎಸ್​​ಎಲ್​​ವಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 07, 2022 | 1:14 PM

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಅಭಿವೃದ್ಧಿಪಡಿಸಿದ ಸಣ್ಣ ಉಪಗ್ರಹ ಉಡಾವಣಾ ವಾಹನ (SSLV) ಭಾನುವಾರ ಬೆಳಿಗ್ಗೆ ನಭಕ್ಕೆ ಚಿಮ್ಮಿದ್ದು ಕೊನೆಯ ಹಂತದಲ್ಲಿ ಸಿಗ್ನಲ್ ಕಳೆದುಕೊಂಡಿದೆ. ಈ ಉಪಗ್ರಹಗಳ ಸ್ಥಿತಿ ಮತ್ತು ಎಸ್‌ಎಸ್‌ಎಲ್‌ವಿ ಕಾರ್ಯಕ್ಷಮತೆಯನ್ನು ನಾವು ಪರಿಶೀಲಿಸುತ್ತಿದ್ದೇವೆ ಎಂದುಇಸ್ರೋ ಟ್ವೀಟ್ ಮಾಡಿದೆ.  ನಾವು ಕಾರ್ಯಾಚರಣೆಯ ಕೊನೆಯ ಹಂತದಲ್ಲಿ ಮಾಹಿತಿ ಕಳೆದುಕೊಂಡಿದ್ದು ಈ ಬಗ್ಗೆ ಪರಿಶೀಲಿಸುತ್ತಿದ್ದೇವೆ. ನಾವು ಶೀಘ್ರದಲ್ಲೇ ಉಪಗ್ರಹಗಳ ಸ್ಥಿತಿ ಮತ್ತು ವಾಹನದ ಕಾರ್ಯಕ್ಷಮತೆಯ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ಇಸ್ರೋ ಅಧ್ಯಕ್ಷ ಡಾ ಎಸ್. ಸೋಮನಾಥ್ ಹೇಳಿದ್ದಾರೆ. ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಉಪಗ್ರಹ ಉಡಾವಣೆ ಕೇಂದ್ರದಿಂದ ಎಸ್ಎಸ್ಎಲ್​ವಿ-ಡಿ1 (SSLV-D1) ಉಪಗ್ರಹ ಉಡ್ಡಯನ ವಾಹನವು ಭಾನುವಾರ (ಆಗಸ್ಟ್ 7) ಬೆಳಿಗ್ಗೆ 9:18ರ ಪೂರ್ವ ನಿಗದಿತ ಸಮಯದಲ್ಲಿ ನಭಕ್ಕೆ ಚಿಮ್ಮಿತು. AzaadiSAT ಮೂಲಕ ತಲಾ 75 ಶಾಲೆಗಳ ವಿದ್ಯಾರ್ಥಿಗಳು ರೂಪಿಸಿರುವ 50 ಗ್ರಾಂ ತೂಕದ 750 ಪೇಲೋಡ್ಗಳನ್ನು (ಸಣ್ಣ ಉಪಗ್ರಹಗಳು) ಕಕ್ಷೆಗೆ ಸೇರಿಸಲು ಇಸ್ರೋ ಮುಂದಾಗಿದೆ. ಇಸ್ರೋ ರೂಪಿಸಿರುವ EOS-02 ಭೂ ನಿಗಾ ಉಪಗ್ರಹ ಮತ್ತು ಇಸ್ರೋ ಮಾರ್ಗದರ್ಶನದಲ್ಲಿ ದೇಶದ ವಿವಿಧೆಡೆಯ ಗ್ರಾಮೀಣ ವಿದ್ಯಾರ್ಥಿನಿಯರು ರೂಪಿಸಿರುವ ಪುಟ್ಟ ಉಪಗ್ರಹಗಳು (ಪೇಲೋಡ್) ಇವು.

ಉಪಗ್ರಹವನ್ನು ಕಕ್ಷೆಯಲ್ಲಿ ಇರಿಸಲು ಮೂರು ಘನ ಇಂಧನ ಆಧಾರಿತ ಹಂತಗಳು ಮತ್ತು ದ್ರವ ಇಂಧನ ಆಧಾರಿತ ವೇಗ ಟ್ರಿಮ್ಮಿಂಗ್ ಮಾಡ್ಯೂಲ್ (VTM) ಅನ್ನು ಬಳಸುವ ಎಸ್ಎಸ್​​ಎಲ್​​ವಿ ವಾಣಿಜ್ಯ ಉಡಾವಣೆಗೆ ಬೇಕಾದ ತ್ವರಿತ  ಸಮಯವನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ.

ಶ್ರೀಹರಿಕೋಟಾದಲ್ಲಿರುವ ಭಾರತದ ಏಕೈಕ ಬಾಹ್ಯಾಕಾಶ ನಿಲ್ದಾಣದಿಂದ ಬೆಳಿಗ್ಗೆ 9:18 ಕ್ಕೆ ಉಪಗ್ರಹ ಉಡಾವಣೆ ಆಗಿದ್ದು, ಕೋಸ್ಟಿಂಗ್ ಹಂತದಲ್ಲಿ ಮ್ಯಾಪ್ ಮಾಡಲಾದ ಪಥದಿಂದ ಸ್ವಲ್ಪ ವಿಚಲನ ಕಂಡುಬಂದಿದೆ. ಮೂರನೇ ಹಂತದ ಪ್ರತ್ಯೇಕತೆ, VTM ಇಗ್ನಿಷನ್ ಮತ್ತು ಉಪಗ್ರಹ ಇಂಜೆಕ್ಷನ್ ಬಾಹ್ಯಾಕಾಶ ಸಂಸ್ಥೆಯ ಮಿಷನ್ ಬ್ರೋಷರ್‌ನಲ್ಲಿ ಉಲ್ಲೇಖಿಸಿದ್ದಕ್ಕಿಂತ ಸ್ವಲ್ಪ ವಿಳಂಬವಾಗಿದೆ..

ಲಿಫ್ಟ್-ಆಫ್ ಆದ ನಂತರ 738 ಮತ್ತು 788 ಸೆಕೆಂಡ್‌ಗಳಲ್ಲಿ ಉಪಗ್ರಹಗಳು ಬೇರ್ಪಟ್ಟ ನಂತರ ಮಿಷನ್ ಕಂಟ್ರೋಲ್ ರೂಂಗೆ ಯಾವುದೇ ಮಾಹಿತಿ ಸಿಗಲಿಲ್ಲ

ಎಲ್ಎಸ್ಎಲ್​​ವಿ ಡಿ1 ಮೊದಲ ಹಾರಾಟ ಇದೀಗ ಪೂರ್ಣಗೊಂಡಿದೆ. ಎಲ್ಲಾ ಹಂತಗಳು ನಿರೀಕ್ಷೆಯಂತೆ ಕಾರ್ಯವಹಿಸಿವೆ. ಸ್ಥಿರವಾದ ಕಕ್ಷೆಯನ್ನು ಸಾಧಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಕಾರ್ಯಾಚರಣೆಯ ಫಲಿತಾಂಶವನ್ನು ತೀರ್ಮಾನಿಸಲು ನಾವು ಪ್ರಸ್ತುತ ಡೇಟಾವನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದ್ದೇವೆ ಎಂದಿದ್ದಾರೆ ಸೋಮನಾಥ್.

Published On - 12:56 pm, Sun, 7 August 22

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್