AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹುಡುಗಿಯರಿಗೆ ಸ್ಕೂಟರ್​​, ಸ್ಮಾರ್ಟ್​ಫೋನ್​: ಪ್ರಿಯಾಂಕಾ ಗಾಂಧಿ ಭರವಸೆ

ಉತ್ತರಪ್ರದೇಶದಲ್ಲಿ ಮುಂಬರುವ ಚುನಾವಣೆಯಲ್ಲಿ ಹೇಗಾದರೂ ಗೆಲ್ಲಲೇಬೇಕು ಎಂಬ ಆಶಯ ಕಾಂಗ್ರೆಸ್​​ನದ್ದು. ಅದರ ಸಿದ್ಧತೆಯನ್ನೂ ಪಕ್ಷ ಈಗಿನಿಂದಲೇ ಶುರು ಮಾಡಿಕೊಂಡಿದೆ. ಈ ಬಾರಿ ಶೇ.40ರಷ್ಟು ಟಿಕೆಟ್​​ನ್ನು ಮಹಿಳೆಯರಿಗೆ ನೀಡುವುದಾಗಿ ಕಾಂಗ್ರೆಸ್​ ಹೇಳಿಕೊಂಡಿದೆ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹುಡುಗಿಯರಿಗೆ ಸ್ಕೂಟರ್​​, ಸ್ಮಾರ್ಟ್​ಫೋನ್​: ಪ್ರಿಯಾಂಕಾ ಗಾಂಧಿ ಭರವಸೆ
ಪ್ರಿಯಾಂಕಾ ಗಾಂಧಿ
TV9 Web
| Updated By: Lakshmi Hegde|

Updated on:Oct 21, 2021 | 2:30 PM

Share

ದೆಹಲಿ: ಉತ್ತರಪ್ರದೇಶದ ಮುಂದಿನ ವಿಧಾನಸಭಾ ಚುನಾವಣೆ (Uttarpradesh Assembly Elections)ಯಲ್ಲಿ ಕಾಂಗ್ರೆಸ್​ನಿಂದ ಶೇ.40ರಷ್ಟು ಟಿಕೆಟ್​​ನ್ನು ಮಹಿಳೆಯರಿಗೆ ನೀಡಲಾಗುವುದು ಎಂದು ಘೋಷಿಸಿದ್ದ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರಪ್ರದೇಶ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷ ಚುನಾವಣೆಯಲ್ಲಿ ಕಾಂಗ್ರೆಸ್​ (Congress) ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ 12ನೇ ತರಗತಿ ಪಾಸ್​ ಆದ ಹುಡುಗಿಯರಿಗೆ ಸ್ಮಾರ್ಟ್​​ಫೋನ್​ ಮತ್ತು ಪದವಿಧರ ಯುವತಿಯರಿಗೆ ಎಲೆಕ್ಟ್ರಿಕ್​ ಸ್ಕೂಟರ್​​ ನೀಡುವುದಾಗಿ ಹೇಳಿದ್ದಾರೆ.  

ಈ ಬಗ್ಗೆ ಟ್ವೀಟ್​ ಮಾಡಿರುವ ಪ್ರಿಯಾಂಕಾ ಗಾಂಧಿ, ನಾನು ಉತ್ತರಪ್ರದೇಶದಲ್ಲಿ ಹಲವು ವಿದ್ಯಾರ್ಥಿಗಳನ್ನು ಭೇಟಿಯಾದೆ. ಅದರಲ್ಲಿ ಅನೇಕರು ತಮಗೆ ವಿದ್ಯಾಭ್ಯಾಸಕ್ಕೆ ಮತ್ತು ನಮ್ಮ ಸುರಕ್ಷತೆ ದೃಷ್ಟಿಯಿಂದಲೂ ಸ್ಮಾರ್ಟ್​ಫೋನ್​ ಬೇಕು ಎಂದು ಕೇಳಿದ್ದಾರೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಂಟರ್​ಮೀಡಿಯಟ್​ ಮುಗಿಸಿದ ಹುಡುಗಿಯರಿಗೆ ಸ್ಮಾರ್ಟ್​ಫೋನ್​ ಮತ್ತು ಪದವಿ ಮುಗಿಸಿದ ಯುವತಿಯರಿಗೆ ಸ್ಕೂಟಿ ನೀಡಲಿದ್ದೇವೆ. ಇದಕ್ಕೆ ನಮ್ಮ ಪ್ರಣಾಳಿಕೆ ಸಮಿತಿ ಒಪ್ಪಿರುವುದು ತುಂಬ ಸಂತೋಷದ ಸಂಗತಿ ಎಂದಿದ್ದಾರೆ.

ಉತ್ತರಪ್ರದೇಶದಲ್ಲಿ ಮುಂಬರುವ ಚುನಾವಣೆಯಲ್ಲಿ ಹೇಗಾದರೂ ಗೆಲ್ಲಲೇಬೇಕು ಎಂಬ ಆಶಯ ಕಾಂಗ್ರೆಸ್​​ನದ್ದು. ಅದರ ಸಿದ್ಧತೆಯನ್ನೂ ಪಕ್ಷ ಈಗಿನಿಂದಲೇ ಶುರು ಮಾಡಿಕೊಂಡಿದೆ. ಈ ಬಾರಿ ಶೇ.40ರಷ್ಟು ಟಿಕೆಟ್​​ನ್ನು ಮಹಿಳೆಯರಿಗೆ ನೀಡುವುದಾಗಿ ಕಾಂಗ್ರೆಸ್​ ಹೇಳಿಕೊಂಡಿದೆ. ಇದೂ ಕೂಡ ಒಂದು ಮಹತ್ವದ ಘೋಷಣೆಯೇ ಆಗಿದೆ.  ನಮ್ಮ ದೇಶದಲ್ಲಿ ರಾಜಕೀಯ ದ್ವೇಷವಿದೆ. ಅದನ್ನು ಮಹಿಳೆಯರು ಮಾತ್ರ ಕೊನೆಗೊಳಿಸಬಹುದಾಗಿದೆ. ಅಷ್ಟೇ ಅಲ್ಲ, ಇಲ್ಲಿ ಧರ್ಮರಾಜಕೀಯವಿದೆ. ಅದರಿಂದಲೂ ದೇಶವನ್ನು ಹೊರತರುವ ಶಕ್ತಿ ಸ್ತ್ರೀಯರಿಗೇ ಇದೆ. ರಾಜಕೀಯದಲ್ಲಿ ನನ್ನೊಂದಿಗೆ ಹೆಚ್ಚಿನ ಸ್ತ್ರೀಯರು ಹೆಗಲುಕೊಡಿ ಎಂದು ಕರೆ ನೀಡಿದರು. ಹಾಗೇ, ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಇರುವ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್​ 15ರವರೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು ಎಂದೂ ತಿಳಿಸಿದ್ದರು.  ಉತ್ತರಪ್ರದೇಶದಲ್ಲಿ 1989ರಿಂದ ಈಚೆಗೆ ಕಾಂಗ್ರೆಸ್​​ಗೆ ಅಧಿಕಾರ ಸಿಕ್ಕಿಲ್ಲ. ಆಗಿನಿಂದಲೂ ಅಲ್ಲಿ ಅಧಿಕಾರ ಹಿಡಿಯಲು ಹವಣಿಸುತ್ತಿರುವ ಕಾಂಗ್ರೆಸ್​ ಮುಂದಿನ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿಕೊಂಡಿದೆ. ಇಂಥ ಭರವಸೆಗಳೊಂದಿಗೆ ಜನರನ್ನು ಸೆಳೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಖ್ಯಾತ ನಿರ್ದೇಶಕ ಶಂಕರ್​ ಅಳಿಯನಿಂದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ? ಮದುವೆಯಾಗಿ ನಾಲ್ಕೇ ತಿಂಗಳಿಗೆ ಸಂಸಾರದಲ್ಲಿ ಬಿರುಗಾಳಿ

‘ರಮ್ಯಾ ಕೇವಲ ವಿಶ್​ ಮಾಡೋದಲ್ಲ, ನಮ್ಮ ಜತೆ ಸಿನಿಮಾ ಮಾಡಬೇಕು’; ಮನದಾಳದ ಮಾತು ಹೇಳಿಕೊಂಡ ಧನಂಜಯ​

Published On - 2:28 pm, Thu, 21 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ